Deepavali;  ಉಡುಪಿಯಲ್ಲಿ ದೀಪಗಳ ಹಬ್ಬದ ಸಂಭ್ರಮ, ತೈಲಾಭ್ಯಂಜನ

Deepavali;  ಉಡುಪಿಯಲ್ಲಿ ದೀಪಗಳ ಹಬ್ಬದ ಸಂಭ್ರಮ, ತೈಲಾಭ್ಯಂಜನ

Published : Nov 05, 2021, 07:35 PM IST

* ಕೃಷ್ಣಮಠದ ಗರ್ಭಗುಡಿಯ ಸುತ್ತಲೂ ಸಾವಿರಾರು ದೀಪಗಳು
* ಪಶ್ಚಿಮ ಜಾಗರ ಪೂಜೆಯಲ್ಲಿ ಮಿನುಗಿದ ಕೃಷ್ಣ
* ನರಕಚತುರ್ದಶಿಯ ತೈಲಾಭ್ಯಂಜನದಲ್ಲಿ ಅದಮಾರುಶ್ರೀ ಭಾಗಿ
* ಲಕ್ಷದೀಪೋತ್ಸವದವರೆಗೆ ಪ್ರತಿದಿನವೂ ತುಳಸೀ ಸಂಕೀರ್ತನೆ 
* ಕಾರ್ತಿಕ ಮಾಸದಲ್ಲಿ ನಡೆಯುವ ಪಶ್ಚಿಮ ಜಾಗರ ಪೂಜೆ, ಈ ದೀಪಾವಳಿಯ ವಿಶೇಷ

ಉಡುಪಿ(ನ. 05)   ಕೃಷ್ಣನ ಉಡುಪಿಯಲ್ಲಿ (Udupi) ದೀಪಾವಳಿ (Deepavali) ಸಂಭ್ರಮ ಮನೆಮಾಡಿದೆ. ನರಕಚತುರ್ದಶಿಯ ಪ್ರಯುಕ್ತ ಕೃಷ್ಣ ಮಠದಲ್ಲಿ (Krishna Mutt) ವಿಶೇಷ ಪೂಜೆಗಳು ನಡೆದವು. ಕಾರ್ತಿಕ ಮಾಸದಲ್ಲಿ ನಡೆಯುವ ಪಶ್ಚಿಮ ಜಾಗರ ಪೂಜೆ, ಈ ದೀಪಾವಳಿಯ ವಿಶೇಷ. ಕೃಷ್ಣ ಮಠದಲ್ಲಿ ನಡೆಯುವ ತೈಲಾಭ್ಯಂಜನದಲ್ಲೂ ಭಕ್ತರು ಭಾಗಿಯಾದರು.

ನರಕ ಚತುರ್ದಶಿ, ಕೃಷ್ಣ ದೇವರು ನರಕಾಸುರನ್ನು ಕೊಂದ ಬಳಿಕ ದೇಹದ ಉಲ್ಲಾಸಕ್ಕೆ ತೈಲಾಭ್ಯಂಜನ ಮಾಡಿಕೊಂಡ ದಿನ. ಹಾಗಾಗಿ ದೀಪಾವಳಿಯ ಮೊದಲ ದಿನ ತೈಲಾಭ್ಯಂಜನ ಮಾಡಿಕೊಳ್ಳೋದು ಪ್ರತೀತಿ. ಉಡುಪಿಯ ಕೃಷ್ಣಮಠದಲ್ಲಿ ಪರ್ಯಾಯ ಮಠಾಧೀಶರು ಭಕ್ತರೊಂದಿಗೆ ಬೆರೆತು ಅಭ್ಯಂಜನ ಮಾಡಿಕೊಳ್ಳುತ್ತಾರೆ. ಕೃಷ್ಣಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು. ಕೃಷ್ಣ ದೇವರ ಗರ್ಭಗುಡಿಯ ಸುತ್ತಲೂ ಸಾವಿರಾರು ದೀಪಗಳನ್ನು ಬೆಳಗಾಯಿತು. ಕಾರ್ತಿಕ ಮಾಸದಲ್ಲಿ ನಡೆಯುವ ಪಶ್ಚಿಮ ಜಾಗರ ಪೂಜೆ, ಈ ದೀಪಾವಳಿಯ ವಿಶೇಷ. ಮುಂಜಾನೆಯ ವೇಳೆ ಪಕ್ಷಿಗಳು, ಕಲರವ ಮಾಡುವ ಹೊತ್ತಲ್ಲಿ ಕೃಷ್ಣ ದೇವರನ್ನು ಪರ್ಯಾಯ ಅದಮಾರು ಮಠಾಧೀಶರು, ಬಹು ಬಗೆಯಿಂದ ಪೂಜಿಸಿದರು. ನಸುಕಿನ ವೇಳೆ ಈ ವಿಶೇಷ ಪೂಜೆಯನ್ನು ನೋಡುವುದೇ ಒಂದು ಸಂಭ್ರಮ.

ಉಡುಪಿಯಲ್ಲಿ ಬಲೀಂದ್ರ ಪೂಜೆ, ದೀಪಾವಳಿ..ಪೋಟೋಗಳು

ನರಕ ಚತುರ್ದಶಿಯಂದು ಕೈಗೊಳ್ಳುವ ತೈಲಾಭ್ಯಂಜನಕ್ಕೆ ವಿಶೇಷ ಮಹತ್ವವಿದೆ. ಕೃಷ್ಣಮಠದ ಹೊರ ಸುತ್ತಿನಲ್ಲಿ ಬೃಹತ್ ಗಾತ್ರದ ಒಲೆಗಳನ್ನು ಇಟ್ಟು, ಪೂಜಿಸಲಾಗುತ್ತದೆ. ಸ್ವತಹ ಪರ್ಯಾಯ ಮಠಾಧೀಶರ ಉಪಸ್ಥಿತಿಯಲ್ಲಿ ಈ ಪೂಜೆ ನಡೆಯುತ್ತದೆ. ಕಟ್ಟಿಗೆಯ ಒಲೆಯಿಂದ ಕುದಿಸಿದ ನೀರಿನಲ್ಲಿ ಸಾಂಪ್ರದಾಯಿಕ ರೀತಿಯ ತೈಲಾಭ್ಯಂಜನ ನಡೆಸಲಾಗುತ್ತದೆ. ಕೃಷ್ಣ ದೇವರ ಸನ್ನಿಧಾನದಲ್ಲಿ ಈ ಎಲ್ಲಾ ಆಚರಣೆಗಳು ನಡೆಯುವುದರಿಂದ ವಿಶೇಷ ಮಹತ್ವವನ್ನು ಪಡೆದಿದೆ.

ದೀಪಾವಳಿಯುದ್ದಕ್ಕೂ ವಿವಿಧ ಆಚರಣೆಗಳು ಕೃಷ್ಣಮಠದಲ್ಲಿ ನಡೆಯುತ್ತೆ. ಲಕ್ಷದೀಪೋತ್ಸವದವರೆಗೆ ಪ್ರತಿದಿನವೂ ತುಳಸೀ ಸಂಕೀರ್ತನೆ ನಡೆಸಲಾಗುತ್ತೆ. ಕೃಷ್ಣಮಠದ ದೀಪಾವಳಿ ಆಚರಣೆಯಲ್ಲಿ ಸಾವಿರಾರು ಮಂದಿ ಭಾಗವಹಿಸುತ್ತಾರೆ. 

 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more