Deepavali;  ಉಡುಪಿಯಲ್ಲಿ ದೀಪಗಳ ಹಬ್ಬದ ಸಂಭ್ರಮ, ತೈಲಾಭ್ಯಂಜನ

Deepavali;  ಉಡುಪಿಯಲ್ಲಿ ದೀಪಗಳ ಹಬ್ಬದ ಸಂಭ್ರಮ, ತೈಲಾಭ್ಯಂಜನ

Published : Nov 05, 2021, 07:35 PM IST

* ಕೃಷ್ಣಮಠದ ಗರ್ಭಗುಡಿಯ ಸುತ್ತಲೂ ಸಾವಿರಾರು ದೀಪಗಳು
* ಪಶ್ಚಿಮ ಜಾಗರ ಪೂಜೆಯಲ್ಲಿ ಮಿನುಗಿದ ಕೃಷ್ಣ
* ನರಕಚತುರ್ದಶಿಯ ತೈಲಾಭ್ಯಂಜನದಲ್ಲಿ ಅದಮಾರುಶ್ರೀ ಭಾಗಿ
* ಲಕ್ಷದೀಪೋತ್ಸವದವರೆಗೆ ಪ್ರತಿದಿನವೂ ತುಳಸೀ ಸಂಕೀರ್ತನೆ 
* ಕಾರ್ತಿಕ ಮಾಸದಲ್ಲಿ ನಡೆಯುವ ಪಶ್ಚಿಮ ಜಾಗರ ಪೂಜೆ, ಈ ದೀಪಾವಳಿಯ ವಿಶೇಷ

ಉಡುಪಿ(ನ. 05)   ಕೃಷ್ಣನ ಉಡುಪಿಯಲ್ಲಿ (Udupi) ದೀಪಾವಳಿ (Deepavali) ಸಂಭ್ರಮ ಮನೆಮಾಡಿದೆ. ನರಕಚತುರ್ದಶಿಯ ಪ್ರಯುಕ್ತ ಕೃಷ್ಣ ಮಠದಲ್ಲಿ (Krishna Mutt) ವಿಶೇಷ ಪೂಜೆಗಳು ನಡೆದವು. ಕಾರ್ತಿಕ ಮಾಸದಲ್ಲಿ ನಡೆಯುವ ಪಶ್ಚಿಮ ಜಾಗರ ಪೂಜೆ, ಈ ದೀಪಾವಳಿಯ ವಿಶೇಷ. ಕೃಷ್ಣ ಮಠದಲ್ಲಿ ನಡೆಯುವ ತೈಲಾಭ್ಯಂಜನದಲ್ಲೂ ಭಕ್ತರು ಭಾಗಿಯಾದರು.

ನರಕ ಚತುರ್ದಶಿ, ಕೃಷ್ಣ ದೇವರು ನರಕಾಸುರನ್ನು ಕೊಂದ ಬಳಿಕ ದೇಹದ ಉಲ್ಲಾಸಕ್ಕೆ ತೈಲಾಭ್ಯಂಜನ ಮಾಡಿಕೊಂಡ ದಿನ. ಹಾಗಾಗಿ ದೀಪಾವಳಿಯ ಮೊದಲ ದಿನ ತೈಲಾಭ್ಯಂಜನ ಮಾಡಿಕೊಳ್ಳೋದು ಪ್ರತೀತಿ. ಉಡುಪಿಯ ಕೃಷ್ಣಮಠದಲ್ಲಿ ಪರ್ಯಾಯ ಮಠಾಧೀಶರು ಭಕ್ತರೊಂದಿಗೆ ಬೆರೆತು ಅಭ್ಯಂಜನ ಮಾಡಿಕೊಳ್ಳುತ್ತಾರೆ. ಕೃಷ್ಣಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು. ಕೃಷ್ಣ ದೇವರ ಗರ್ಭಗುಡಿಯ ಸುತ್ತಲೂ ಸಾವಿರಾರು ದೀಪಗಳನ್ನು ಬೆಳಗಾಯಿತು. ಕಾರ್ತಿಕ ಮಾಸದಲ್ಲಿ ನಡೆಯುವ ಪಶ್ಚಿಮ ಜಾಗರ ಪೂಜೆ, ಈ ದೀಪಾವಳಿಯ ವಿಶೇಷ. ಮುಂಜಾನೆಯ ವೇಳೆ ಪಕ್ಷಿಗಳು, ಕಲರವ ಮಾಡುವ ಹೊತ್ತಲ್ಲಿ ಕೃಷ್ಣ ದೇವರನ್ನು ಪರ್ಯಾಯ ಅದಮಾರು ಮಠಾಧೀಶರು, ಬಹು ಬಗೆಯಿಂದ ಪೂಜಿಸಿದರು. ನಸುಕಿನ ವೇಳೆ ಈ ವಿಶೇಷ ಪೂಜೆಯನ್ನು ನೋಡುವುದೇ ಒಂದು ಸಂಭ್ರಮ.

ಉಡುಪಿಯಲ್ಲಿ ಬಲೀಂದ್ರ ಪೂಜೆ, ದೀಪಾವಳಿ..ಪೋಟೋಗಳು

ನರಕ ಚತುರ್ದಶಿಯಂದು ಕೈಗೊಳ್ಳುವ ತೈಲಾಭ್ಯಂಜನಕ್ಕೆ ವಿಶೇಷ ಮಹತ್ವವಿದೆ. ಕೃಷ್ಣಮಠದ ಹೊರ ಸುತ್ತಿನಲ್ಲಿ ಬೃಹತ್ ಗಾತ್ರದ ಒಲೆಗಳನ್ನು ಇಟ್ಟು, ಪೂಜಿಸಲಾಗುತ್ತದೆ. ಸ್ವತಹ ಪರ್ಯಾಯ ಮಠಾಧೀಶರ ಉಪಸ್ಥಿತಿಯಲ್ಲಿ ಈ ಪೂಜೆ ನಡೆಯುತ್ತದೆ. ಕಟ್ಟಿಗೆಯ ಒಲೆಯಿಂದ ಕುದಿಸಿದ ನೀರಿನಲ್ಲಿ ಸಾಂಪ್ರದಾಯಿಕ ರೀತಿಯ ತೈಲಾಭ್ಯಂಜನ ನಡೆಸಲಾಗುತ್ತದೆ. ಕೃಷ್ಣ ದೇವರ ಸನ್ನಿಧಾನದಲ್ಲಿ ಈ ಎಲ್ಲಾ ಆಚರಣೆಗಳು ನಡೆಯುವುದರಿಂದ ವಿಶೇಷ ಮಹತ್ವವನ್ನು ಪಡೆದಿದೆ.

ದೀಪಾವಳಿಯುದ್ದಕ್ಕೂ ವಿವಿಧ ಆಚರಣೆಗಳು ಕೃಷ್ಣಮಠದಲ್ಲಿ ನಡೆಯುತ್ತೆ. ಲಕ್ಷದೀಪೋತ್ಸವದವರೆಗೆ ಪ್ರತಿದಿನವೂ ತುಳಸೀ ಸಂಕೀರ್ತನೆ ನಡೆಸಲಾಗುತ್ತೆ. ಕೃಷ್ಣಮಠದ ದೀಪಾವಳಿ ಆಚರಣೆಯಲ್ಲಿ ಸಾವಿರಾರು ಮಂದಿ ಭಾಗವಹಿಸುತ್ತಾರೆ. 

 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more