ಅಗಲಿದವರನ್ನೂ ಸ್ಮರಿಸುವ 'ಜನಪದ ದೀಪಾವಳಿ' ಆಚರಣೆ: ಖಾದ್ಯಗಳನ್ನಿಟ್ಟು ಸತ್ತವರನ್ನ ಬರಮಾಡಿಕೊಳ್ಳೋದು ಸಂಪ್ರದಾಯ

ಅಗಲಿದವರನ್ನೂ ಸ್ಮರಿಸುವ 'ಜನಪದ ದೀಪಾವಳಿ' ಆಚರಣೆ: ಖಾದ್ಯಗಳನ್ನಿಟ್ಟು ಸತ್ತವರನ್ನ ಬರಮಾಡಿಕೊಳ್ಳೋದು ಸಂಪ್ರದಾಯ

Published : Nov 14, 2023, 10:49 AM IST

ಕರಾವಳಿಯಲ್ಲಿ ಸತ್ತವರೂ ಸಂಭ್ರಮಿಸುವ ಹಬ್ಬ ದೀಪಾವಳಿ. ತುಳುನಾಡನ್ನು ಕಾಪಾಡುವ ದೈವಗಣಗಳಿಗೂ ದೀಪಾವಳಿ ಬಂದ್ರೆ ಅಚ್ಚುಮೆಚ್ಚು. ಬದುಕಿದ್ದವರ ಹಬ್ಬ ನೋಡಿದ್ದೇವೆ, ಅಗಲಿದವರನ್ನೂ ಸ್ಮರಿಸುವ ‘ಜನಪದ ದೀಪಾವಳಿ’ ನೋಡಬೇಕಂದ್ರೆ ನೀವು ಉಡುಪಿಗೆ ಬರಬೇಕು.
 

ದೀಪ ಹಚ್ಚೋದು. ಪಟಾಕಿ ಹೊಡೆಯೋದು, ಹೊಟ್ಟೆ ತುಂಬಾ ತಿನ್ನೋದು, ದೀಪಾವಳಿ (Deepavali) ಬಂದ್ರೆ ಮತ್ತೇನು ಮಾಡ್ತೀವಿ ಅಲ್ವಾ..? ಆದ್ರೆ ತುಳುನಾಡಿನಲ್ಲಿTulu) ಈ ಹಬ್ಬಕ್ಕೆ ಬೇರೆಯದೇ ಮಹತ್ವ ಇದೆ. ದೀಪಾವಳಿ ಬಂದಾಗ ಸತ್ತವರನ್ನೆಲ್ಲಾ ಬರಮಾಡಿಕೊಳ್ಳುವುದೇ ಉಡುಪಿ(Udupi) ದೀಪಾವಳಿ ಸ್ಪೆಷಲ್. ತುಳುವರ ನಂಬಿಕೆಯ ಪ್ರಕಾರ ನಮ್ಮನ್ನು ಅಗಲಿದ ಹಿರಿಯರು ಸ್ವರ್ಗಕ್ಕೋ, ನರಕಕ್ಕೋ ಹೋಗೋದಿಲ್ಲ. ಮನೆಯ ದೈವಗಳ ಸನ್ನಿಧಾನದಲ್ಲೇ ಇರ್ತಾರಂತೆ. ಹಾಗಾಗಿ ದೀಪಾವಳಿಯಲ್ಲಿ ನಾವು ಸಂಭ್ರಮಿಸುವ ಮುನ್ನ ನಮ್ಮ ಪೂರ್ವಿಕರನ್ನು ಕರೆದು ಅವರಿಗೆ ಹೊಸಬಟ್ಟೆ ಕೊಟ್ಟು, ತಿನ್ನಲ್ಲು ಖಾದ್ಯಗಳನ್ನಿಟ್ಟು ಬರಮಾಡಿಕೊಳ್ಳೋದು ಸಂಪ್ರದಾಯ. ಅದಕ್ಕೆ ದೀಪಾವಳಿಯ ಒಂದು ದಿನವನ್ನು ‘ಸೈದಿನಕ್ಲೆನ ಪರ್ಬ’ ಅಂದ್ರೆ ಸತ್ತವರ ಹಬ್ಬ ಅಂತಾನೇ ಆಚರಿಸಲಾಗುತ್ತೆ. ವಾಯ್ಸ್: ನಾಲ್ಕಾರು ಶತಮಾನಗಳಿಂದ ಅಗಲಿದ ಚೇತನಗಳನ್ನು ಆಹ್ವಾನಿಸಿ ಹಬ್ಬ ಆಚರಿಸಲಾಗುತ್ತೆ. ಅವರು ತೊಡಲೆಂದು ಮೀಸಲಿಟ್ಟ ಬಟ್ಟೆ, ಬಳಸುತ್ತಿದ್ದ ಬಳೆ, ಕರಿಮಣಿ ಇತ್ಯಾದಿಗಳನ್ನು ಪೆಟ್ಟಿಗೆಯಿಂದ ಹೊರ ತೆಗೆದು ಪೂರ್ವಿಕರನ್ನು(ancestors) ಸ್ಮರಿಸಿಕೊಳ್ತಾರೆ. ಕುಟುಂಬದ ಹಿರಿಯರು ಮಾತ್ರವಲ್ಲ ದೈವಗಳ ಆರಾಧನೆಯೂ ನಡೆಯುತ್ತೆ. ಕುಟುಂಬವನ್ನು ಸಲಹಿಕೊಂಡು ಬಂದ ದೈವಗಳಿಗೆ ಅಲಂಕಾರ ಮಾಡಿ, ದೀಪ ಬೆಳಗಿ, ಎಡೆ ಇಟ್ಟು ಆರಾಧಿಸುವ ಜನಪದ ಪದ್ದತಿ ಇವತ್ತಿಗೂ ಜೀವಂತವಾಗಿದೆ. 

ಇದನ್ನೂ ವೀಕ್ಷಿಸಿ:  ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more