Ramanagara: ಪರಿಸರ ಸ್ನೇಹಿ ಹಣತೆಗೆ ಭಾರೀ ಡಿಮ್ಯಾಂಡ್

Ramanagara: ಪರಿಸರ ಸ್ನೇಹಿ ಹಣತೆಗೆ ಭಾರೀ ಡಿಮ್ಯಾಂಡ್

Published : Nov 05, 2021, 05:42 PM IST
  • ಅಧುನಿಕ ಯಂತ್ರ ಬಳಸದೆ ಕೈಯಲ್ಲೆ ತಯಾರಾಗುವ ಹಣತೆಗಳಿಗೆ(Dia) ಡಿಮ್ಯಾಂಡ್
  • ಮ್ಯಾಜಿಕ್ ದೀಪಾ, ಅಂಬಾರಿ ದೀಪಾ, ನವಿಲು ದೀಪ, ಗಣೇಶ ದೀಪ, ಆನೆ ದೀಪ
  • ಪ್ರವಾಸಿಗರ ಮನ ಸೂರೆಗೊಳ್ಳುವ  ವಿವಿಧ ರೀತಿಯ ನೈಸರ್ಗಿಕ ಮಣ್ಣಿನ ದೀಪಗಳು

ದೀಪಾವಳಿ ಹಬ್ಬ ಬಂತ್ತು ಅಂದ್ರೆ ಪಟಾಕಿ ಸದ್ದು ಕೇಳಿಸುತ್ತದೆ. ಅದೇ ರೀತಿ ಮನೆಗಳ ಮುಂದೆ ಮಣ್ಣಿನ ಹಣತೆಗಳನ್ನ ಬೆಳಗಿಸುವುದು ವಾಡಿಕೆ. ರಾಮನಗರದ ಜಾನಪದ ಕಲೆಗಳ ತವರು ಜಾನಪದ ಲೋಕದಲ್ಲಿ ಅನೂಸುಯ ಬಾಯಿ ಬಹಳ ವರ್ಷಗಳಿಂದ ವಿವಿಧ ಬಗೆಯ ಮಣ್ಣಿನ ಹಣತೆಗಳನ್ನ ಸಿದ್ದಪಡಿಸುತ್ತಾ ಬರುತ್ತಿದ್ದಾರೆ. ಪ್ರತಿ ಮನೆಗಳಲ್ಲಿ ಬೆಳಕು ಚೆಲ್ಲುವ ಸಾಂಪ್ರದಾಯಿಕ ಹಣತೆಗಳನ್ನು ತಲತಲಾಂತರದಿಂದ ತಯಾರಿಸುತ್ತ ಬರುತ್ತಿದ್ದಾರೆ. ಜಾನಪದ ಲೋಕದಲ್ಲಿ ಅನುಸೂಯಮ್ಮ ತಯಾರು ಮಾಡುವ ಮಣ್ಣಿನ ದೀಪಗಳಿಗೆ ದೀಪಾವಳಿ ಬಂದರೆ ಎಲ್ಲಿಲ್ಲದ ಬೇಡಿಕೆ ಶುರುವಾಗುತ್ತೆ.  ಇವರು ಬಗೆ ಬಗೆಯ ಮಣ್ಣಿನ ಹಣತೆಗಳನ್ನು ಸುಲಲಿತವಾಗಿ ತಯಾರು ಮಾಡುತ್ತಾರೆ. ಪೂರ್ವಿಕರ ಕಲೆದಿಂದ ಬಳುವಳಿವಾಗಿ ಬಂದ ಈ ಕುಂಬಾರಿಕೆ ಕಲೆಯನ್ನ ಇವರು 43 ವರ್ಷಗಳಿಂದಲೂ‌ ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ. 

ಹಣತೆಗೆ ಚಂದದ ಚಿತ್ತಾರ, ವಿದ್ಯಾರ್ಥಿನಿಯ ಬಣ್ಣದ ಹಣತೆಗಳಿಗೆ ಭಾರೀ ಡಿಮ್ಯಾಂಡ್!

 ಅಂದಹಾಗೇ ಬೆಳಕಿನ ಹಬ್ಬ ದೀಪಾವಳಿ ಬಂದಾಗ ಇಲ್ಲಿನ ನೈಸರ್ಗಿಕ ಮಣ್ಣಿನ ಹಣತೆಗಳಿಗೆ ಭಾರಿ ಬೇಡಿಕೆ. ರಾಜ್ಯದ ವಿವಿದೆಡೆಯಿಂದ ಜಾನಪದ ಲೋಕಕ್ಕೆ ಬರುವ ಪ್ರವಾಸಿಗರು ಅನುಸೂಯಮ್ಮ ತಯಾರು ಮಾಡುವ ಹಣತೆಗಳನ್ನು ಕೊಳ್ಳುತ್ತಾರೆ. ಇದಲ್ಲದೆ ಆಂದ್ರ, ತಮಿಳುನಾಡು, ಕೇರಳ ಸೇರಿದಂತೆ ವಿವಿದ ರಾಜ್ಯಗಳಿಗು ರಪ್ತು ಆಗುತ್ತವೆ. ಅನುಸೂಯಮ್ಮ ಅವರ ಕೈಯಲ್ಲಿ ಅರಳುವ  ಮ್ಯಾಜೀಕ್ ದೀಪಾ, ಅಂಬಾರಿ ದೀಪಾ, ನವಿಲು ದೀಪ, ಗಣೇಶ ದೀಪ, ಆನೆ ದೀಪ, ನವ ದೀಪ, ಮಡಿಲು ದೀಪ, ಲಕ್ಷ್ಮಿ ದೀಪ,  ಹೀಗೆ ಹಲವಾರು ಬಗೆ ಬಗೆಯ ಹಣತೆಗಳು ಪ್ರವಾಸಿಗರ ಮನ ಸೂರೆಗೊಳ್ಳಿತ್ತಿವೆ ಅಲ್ಲದೇ ಅವರ ಮನೆ ಬೆಳಗುತ್ತಿವೆ.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more