ಪೊಲೀಸರಿಗೆ ಕ್ವಾಟ್ರಸ್‌ ಇಲ್ಲ, ಹೆಚ್‌ಆರ್‌ಎನಲ್ಲೂ ಕಡಿತ: ಸಂಕಷ್ಟದಲ್ಲಿ ಪೊಲೀಸರು !

ಪೊಲೀಸರಿಗೆ ಕ್ವಾಟ್ರಸ್‌ ಇಲ್ಲ, ಹೆಚ್‌ಆರ್‌ಎನಲ್ಲೂ ಕಡಿತ: ಸಂಕಷ್ಟದಲ್ಲಿ ಪೊಲೀಸರು !

Published : Sep 13, 2023, 01:27 PM IST

ಅವರ ಹೆಸರಿಗೆ ಮಾತ್ರ ಬೆಂಗಳೂರು ಸಿಟಿ ಪೊಲೀಸರು. ಕೆಲಸ ಬಂದೋಬಸ್ತ್ ಎಲ್ಲವೂ ಕೂಡ ಬೆಂಗಳೂರು ನಗರದಲ್ಲೆ, ಆದರೆ ಪೊಲೀಸರಿಗೆ ಕೊಡೋ ಸೌಲಭ್ಯಗಳು ಮಾತ್ರ ಗ್ರಾಮೀಣ ಪ್ರದೇಶದವರಂತೆ ಕಾಣ್ತಿದ್ದಾರೆ. ಈ ಪೊಲೀಸರಿಗೆ ಕ್ವಾಟ್ರಸ್ಸು ಇಲ್ಲ ಸರ್ಕಾರದಿಂದ HRA ನು ಕಡಿಮೆ ಕೊಡುತ್ತಿದ್ದಾರೆ. ಸರ್ಕಾರದ ಈ ನಿರ್ಧಾರದಿಂದ 300ಕ್ಕೂ ಹೆಚ್ಚು ಪೊಲೀಸ್ ಕುಟುಂಬಗಳು ಸಮಸ್ಯೆಗೆ ಸಿಲುಕಿವೆ. 
 

ಅಪಘಾತ ಕಳ್ಳತನ ಬಂದೋಬಸ್ತ್‌ ಹೀಗೆ ಸದಾ ಕಾಲ ಕೆಲಸದ ಒತ್ತಡದಿಂದಲೇ ಕಾರ್ಯ ನಿರ್ವಹಿಸುವ ಸಿಬ್ಬಂದಿ ಎಂದರೆ ಅದು ಪೊಲೀಸರು(Police). ಕೆಲಸಕ್ಕೆ ತಕ್ಕಂತೆ ವೇತನ ಕೊಡಬೇಕೆಂಬ ಆಗ್ರಹ ತುಂಬಾ ದಿನಗಳಿಂದ ನಡೆಯುತ್ತಲೇ ಇದೆ, ಆದರೆ ದೇವನಹಳ್ಳಿ(devanahalli) ಉಪವಿಭಾಗ ಪೊಲೀಸರು ಮಾತ್ರ ಸಂಕಷ್ಟಗಳ ಸರಮಾಲೆಯಲ್ಲಿ ಸಿಲುಕಿದ್ದಾರೆ. ಈ ವಿಭಾಗದ ಪೊಲೀಸರು ಹೆಸರಿಗೆ ಮಾತ್ರ ಬೆಂಗಳೂರು(bengaluru) ಸಿಟಿ ಪೊಲೀಸರು ಆಗಿದ್ದಾರೆ. ಆದರೆ ಇವರಿಗೆ ನೀಡುತ್ತಿರುವ ಸೌಲಭ್ಯಗಳು ಮಾತ್ರ ಗ್ರಾಮೀಣ ಪ್ರದೇಶದವರಂತೆ ಕೊಡುತ್ತಿದ್ದಾರೆ. ಹೌದು ದೇವನಹಳ್ಳಿ ಉಪವಿಭಾಗಕ್ಕೆ ನಾಲ್ಕು ಪೊಲೀಸ್ ಠಾಣೆಗಳು ಬರುತ್ತವೆ. ದೇವನಹಳ್ಳಿ ಚಿಕ್ಕಜಾಲ ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆ ಹಾಗೂ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆ. ಈ ಎಲ್ಲಾ ಪೊಲೀಸ್ ಠಾಣೆಗಳಲ್ಲೂ ಸುಮಾರು 300ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇವರಿಗೆ ನೀಡುತ್ತಿರುವ HRA ಮಾತ್ರ ಶೇಕಡ 8%. ಆದರೆ ಇವರ ಪಕ್ಕದ ಠಾಣೆ ಬಾಗಲೂರು ಪೊಲೀಸರಿಗೆ ಯಲಹಂಕ ಪೊಲೀಸರಿಗೆ ಮಾತ್ರ ಎಚ್ ಆರ್ ಎ ಶೇಕಡಾ 24ರಷ್ಟು ನೀಡುತ್ತಿದ್ದಾರೆ.

ಇತ್ತ ಕ್ವಾಟ್ರಸ್ಸು ಇಲ್ಲ ಎಚ್ ಆರ್ ಎ ಕೂಡ ಹೆಚ್ಚಿಗೆ ನೀಡುತ್ತಿಲ್ಲ ಅಂತ ಪೊಲೀಸರು ಸಮಸ್ಯೆಗೆ ಸಿಲುಕಿದ್ದಾರೆ. ಈಗಾಗಲೇ ಬೆಂಗಳೂರಿಗೆ ಈ ಪೊಲೀಸ್ ಠಾಣಾ ವ್ಯಾಪ್ತಿ ಹೊಂದಿಕೊಂಡಿತ್ತು ಎಲ್ಲಾ ಮನೆ ಬಾಡಿಗೆ ಸೇರಿದಂತೆ ಎಲ್ಲಾ ಬೆಲೆಯೂ ಹೆಚ್ಚಳವಾಗಿದೆ. ಇನ್ನು ಈ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಎಲ್ಲಾ ಪೊಲೀಸರು ಬಂದೋಬಸ್ ಸೇರಿದಂತೆ ಕೆಲಸ ನಿರ್ವಹಿಸುವುದು ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಬರುತ್ತದೆ. ನಮಗೂ ಹೆಚ್ಚಾಗಿ ಶೇಕಡ 24ರಷ್ಟು ನೀಡಬೇಕು ಎಂದು ಪೊಲೀಸರು ಮೇಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ದೇವನಹಳ್ಳಿ ರೂಪ ವಿಭಾಗವೂ ಕೂಡ ಬೆಂಗಳೂರು ಈಶಾನ್ಯ ವಲಯ ವ್ಯಾಪ್ತಿಗೆ ಸೇರುತ್ತದೆ. ಈ ಹಿಂದೆ ಕೂಡ ಈ ವಿಭಾಗದ ಪೊಲೀಸರಿಗೆ ಶೇಕಡಾ 24ರಷ್ಟು ಎಚ್ ಆರ್ ಎ ನೀಡುತ್ತಿದ್ದರು. ಆದರೆ ಕಳೆದ ಒಂದು ವರ್ಷದಿಂದ ಇವರಿಗೆ ಹೆಚ್ಚಾರಿಯ ಕಡಿತ ಮಾಡಿದ್ದಾರೆ. ಹೀಗಾಗಿ ಮಕ್ಕಳ ವಿದ್ಯಾಭ್ಯಾಸ ಹಾಗೂ ಮನೆ ಬಾಡಿಗೆಗೆ ಸಾಕಷ್ಟು ಸಮಸ್ಯೆ ಆಗುತ್ತಿದೆ ಅಂತ ಪೊಲೀಸ್ ಕುಟುಂಬಗಳು ಸಮಸ್ಯೆ ತೋಡಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸಾರ್ವಜನಿಕ ಸ್ವತ್ತಿನ ಮೇಲೆ ಭೂಮಾಫಿಯಾ ಕಣ್ಣು: ಬಿಬಿಎಂಪಿ ಪಾರ್ಕ್‌ಗೆ ಬೀಗ ಜಡಿದ ಭೂಗಳ್ಳರು..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more