ಕೋಲಾರಮ್ಮ ಕೆರೆಗೆ ಜಿಲ್ಲಾಡಳಿತದಿಂದ ಆಧುನಿಕ ಸ್ಪರ್ಶ: 600 ಎಕರೆ ಕೆರೆಗೆ ಕೋಟಿ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

ಕೋಲಾರಮ್ಮ ಕೆರೆಗೆ ಜಿಲ್ಲಾಡಳಿತದಿಂದ ಆಧುನಿಕ ಸ್ಪರ್ಶ: 600 ಎಕರೆ ಕೆರೆಗೆ ಕೋಟಿ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

Published : Sep 27, 2023, 10:25 AM IST

ಕೋಲಾರಮ್ಮ ಕೆರೆ ಅಂದ್ರೆ ಇಡೀ ನಗರಕ್ಕೆ ಫೇಮಸ್‌..ಅಷ್ಟೇ ಅಲ್ಲ ಈ ಕೆರೆಯಿಂದಲೇ ಕೆ.ಸಿ ವ್ಯಾಲಿಗೆ ಸೇರಿದಂತೆ ಇಡೀ ನಗರಕ್ಕೆ ನೀರು ಸರಬರಾಜು ಆಗುತ್ತೆ. ಇದೇ ಕೆರೆಯನ್ನೇ ಈಗ ಜಿಲ್ಲಾಡಳಿತ ಅಭಿವೃದ್ಧಿ ಮಾಡಲು ಮುಂದಾಗಿದೆ. ಇನ್ಫೋಸಿಸ್ ನೀಡಿದ  20 ಕೋಟಿ ಹಣದಲ್ಲಿ ಪ್ರವಾಸಿ ತಾಣ ಮಾಡಲು ಅಧಿಕಾರಿಗಳು ಪ್ಲಾನ್ ಮಾಡಿದ್ದಾರೆ.
 

ಕೋಲಾರ ನಗರದ ಹೃದಯ ಭಾಗದಲ್ಲಿ ಇರುವ ಕೋಲಾರಮ್ಮ ಕೆರೆಗೆ(Kolaramma lake) ಆಧುನಿಕ ಸ್ಪರ್ಶ ನೀಡಲು ಜಿಲ್ಲಾಡಳಿತ ಮುಂದಾಗಿದೆ. ಈ ಅಮಾನಿ ಕೆರೆ ನೂರಾರು ಎಕರೆ ಭೂಪ್ರದೇಶಕ್ಕೆ. ಅಸಂಖ್ಯಾತ ಕೊಳವೇ ಬಾವಿಗಳಿಗೆ ನೀರು ನೀಡುವ ಪ್ರಮುಖ ಜಲಕೇಂದ್ರವಾಗಿತ್ತು. ಆದ್ರೆ ಕಳೆದ 2 ವರ್ಷಗಳಿಂದ ಉತ್ತಮ ಮಳೆ(Rain) ಆಗಿಲ್ಲ. ಇತ್ತ ಕೆ.ಸಿ. ವ್ಯಾಲಿಗೆ(KC Valley) ಕೂಡ ಈ ಕೆರೆಯಿಂದಲೇ ನೀರು ಹರಿಯುತ್ತಿದೆ. ಆದ್ರೆ ಈಗ 600 ಎಕರೆಯಷ್ಟು ಬೃಹತ್‌ ಕೆರೆಯ ಆವರಣದಲ್ಲಿ ಗಿಡ ಗಂಟಿಗಳು ತುಂಬಿದ್ದು, ಇದನ್ನು ತೆರವು ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಕೆ.ಸಿ ವ್ಯಾಲಿ ಯೋಜನೆ ಅಭಿವೃದ್ಧಿ ಅಡಿಯಲ್ಲಿ 8 ಕೋಟಿ ಖರ್ಚು ಮಾಡಿ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಜೊತೆಗೆ ಇನ್ಫೋಸಿಸ್ ಪೌಂಡೇಷನ್ ನೀಡಿದ ಹಣವನ್ನೂ ಬಳಸಿಕೊಳ್ಳಾಗ್ತಿದೆ. ಸುತ್ತಲೂ ವಾಕಿಂಗ್ ಪಾತ್ ಕೂಡ ನಿರ್ಮಿಸಲಾಗುತ್ತಂತೆ. ಕೋಲಾರಮ್ಮ ಕೆರೆ ಅಚ್ಚುಕಟ್ಟು 789 ಎಕರೆ ಇದ್ದು, 13 ಅಡಿ ಆಳ ಹಾಗೂ 659  ಯೂನಿಟ್ ನಷ್ಟು ನೀರು ಸಂಗ್ರಹವಾಗುತ್ತೆ. ಅದರಂತೆ ಕಳೆದ 2 ವರ್ಷಗಳಿಂದ ನಾಲ್ಕು ಭಾರಿ ಕೋಡಿ ಹರಿದಿರುವ ಕೋಲಾರಮ್ಮ ಕೆರೆ ತುಂಬಿದಕ್ಕೆ ಹರ್ಷ ವ್ಯಕ್ತಪಡಿಸಿ ಕೆ.ಸಿ.ವ್ಯಾಲಿ ಶುದ್ಧೀಕರಿಸಿ ಕೆರೆಗೆ ಹರಿಸಲಾಗುತ್ತಿದೆ. ಕೆರೆ ಅಭಿವೃದ್ಧಿಗೆ ಸರ್ಕಾರದ 8 ಕೋಟಿ ಖರ್ಚು ಆಯಿತೋ ಇಲ್ವೋ ಗೊತ್ತಿಲ್ಲ. ಆದ್ರೆ ಈಗ ಇನ್ಫೋಸಿಸ್ ಪೌಂಡೇಷನ್ ನೀಡಿರುವ 20 ಕೋಟಿ ಹಣವನ್ನು ಬಳಕೆ ಮಾಡಲು ಫ್ಲಾನ್ ಮಾಡಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರು ಬಂದ್ ಆಯ್ತು ಈಗ ಕರುನಾಡಿಗೆ ಬೀಗ: ಕಾವೇರಿ ಕಿಚ್ಚಿಗೆ ಶುಕ್ರವಾರ ಸ್ತಬ್ಧವಾಗುತ್ತಾ ಕರ್ನಾಟಕ..?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more