ಕಲ್ಲೇರಿ ಕಾಡು..  ಬೊಳಿಯಾರ್ ಅರಣ್ಯ.. ಏನಿದರ ರಹಸ್ಯ? ಯಾವ ನಿಗೂಢ ಅಡಗಿದೆ ಆ ಅರಣ್ಯದಲ್ಲಿ?

ಕಲ್ಲೇರಿ ಕಾಡು.. ಬೊಳಿಯಾರ್ ಅರಣ್ಯ.. ಏನಿದರ ರಹಸ್ಯ? ಯಾವ ನಿಗೂಢ ಅಡಗಿದೆ ಆ ಅರಣ್ಯದಲ್ಲಿ?

Published : Aug 09, 2025, 03:48 PM IST
ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಹೊಸ ತಿರುವು ಪಡೆದಿದ್ದು, ಕಲ್ಲೇರಿ ಮತ್ತು ಬೊಳಿಯಾರ್ ಅರಣ್ಯಗಳಲ್ಲಿ ಶವಗಳಿಗಾಗಿ ಶೋಧ ಆರಂಭವಾಗಿದೆ. ಬುರುಡೆ ಮತ್ತು ಹೊಸ ಶೋಧಗಳ ನಡುವಿನ ಸಂಬಂಧದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದ್ದು, ನಿಗೂಢತೆಗಳಿಗೆ ಉತ್ತರ ಸಿಗುವುದೇ ಎಂದು ಕಾದು ನೋಡಬೇಕಿದೆ.

ಮಂಗಳೂರು (ಆ.9): ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಯಲ್ಲಿ ಹೊಸ ತಿರುವುಗಳು ಕಾಣಿಸಿಕೊಂಡಿವೆ. ಅನಾಮಧೇಯ ದೂರುದಾರರ ಇದುವರೆಗೆ ಗುರುತು ಮಾಡಿದ್ದ 13 ಸ್ಥಳಗಳನ್ನು ಬಿಟ್ಟು, ಈಗ ಹೊಸ ಪ್ರದೇಶಗಳಾದ ಕಲ್ಲೇರಿ ಮತ್ತು ಬೊಳಿಯಾರ್ ಅರಣ್ಯಗಳಲ್ಲಿ ಶವಗಳಿಗಾಗಿ ಶೋಧ ಕಾರ್ಯವನ್ನು ಆರಂಭಿಸಿದೆ. ಈ ದಿಢೀರ್ ಬದಲಾವಣೆ ತನಿಖೆಯ ಕುತೂಹಲವನ್ನು ಹೆಚ್ಚಿಸಿದೆ.

ಎಸ್‌ಐಟಿ ಅಧಿಕಾರಿಗಳು ಬೊಳಿಯಾರ್ ಅರಣ್ಯದಲ್ಲಿ ಹೂತಿಟ್ಟ ಶವಗಳ ರಹಸ್ಯ ಬೇಧಿಸಲು ಯತ್ನಿಸುತ್ತಿದ್ದಾರೆ. ದೂರುದಾರರ ಸಾಕ್ಷಿಯಾಗಿ ತಂದಿದ್ದ ಬುರುಡೆ ಮತ್ತು ಈ ಹೊಸ ಶೋಧಗಳ ನಡುವೆ ಇರುವ ನಂಟಿನ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ.

ಈ ಕಾಡಿನಲ್ಲೇ ಈ ಬುರುಡೆಯನ್ನು ತೆಗೆದು ತಂದಿದ್ದಾನೆಯೇ ಎಂಬ ಅನುಮಾನ ಮೂಡಿದೆ. ಹಳೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಸತ್ಯಶೋಧನೆ ಯಾವ ದಿಕ್ಕಿನಲ್ಲಿ ಸಾಗಲಿದೆ ಮತ್ತು ಅಂತಿಮವಾಗಿ ಈ ನಿಗೂಢತೆಗಳಿಗೆ ಉತ್ತರ ಸಿಗುತ್ತದೆಯೇ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more