ಜಿಪಿಆರ್‌ನಲ್ಲೂ ಇಲ್ಲ, ಗುಂಡಿ ಅಗೆದ್ರೂ ಸಿಗಲಿಲ್ಲ, 13ನೇ ಪಾಯಿಂಟ್‌, 13ನೇ ದಿನವೂ ಸಿಗಲಿಲ್ಲ ಕಳೇಬರ!

ಜಿಪಿಆರ್‌ನಲ್ಲೂ ಇಲ್ಲ, ಗುಂಡಿ ಅಗೆದ್ರೂ ಸಿಗಲಿಲ್ಲ, 13ನೇ ಪಾಯಿಂಟ್‌, 13ನೇ ದಿನವೂ ಸಿಗಲಿಲ್ಲ ಕಳೇಬರ!

Published : Aug 13, 2025, 12:12 PM IST
ಅನಾಮಿಕ ವ್ಯಕ್ತಿ ನೀಡಿದ 13ನೇ ಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾಗಿಲ್ಲ. ಜಿಪಿಆರ್ ಶೋಧ ಮತ್ತು 18 ಅಡಿ ಅಗೆದರೂ ಯಾವುದೇ ಅವಶೇಷಗಳು ಸಿಕ್ಕಿಲ್ಲ. ಎಸ್ಐಟಿ ತನಿಖೆ ಮುಂದುವರೆದಿದೆ.

ಬೆಂಗಳೂರು (ಆ.13): ಮತ್ತೊಮ್ಮೆ ಅನಾಮಿಕನ ಅಂದಾಜು ಹುಸಿಯಾಗಿದೆ. ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ 13ನೇ ಪಾಯಿಂಟ್‌ನಲ್ಲೂ ಅಸ್ಥಿಪಂಜರ ಸಿಕ್ಕಿಲ್ಲ. ಜಿಪಿಆರ್‌ ಶೋಧದಲ್ಲೂ ಕಳೇಬರ ಪತ್ತೆಯಾಗಿಲ್ಲ. ದಿನವಿಡೀ ಕಾರ್ಯಾಚರಣೆ ಆದರೂ ಒಂದು ಚಿಕ್ಕ ಸಾಕ್ಷ್ಯ ಕೂಡ ಸಿಕ್ಕಿಲ್ಲ. ಜಿಪಿಆರ್‌ ಶೋಧಧ ಬಳಿಕ, 18 ಅಡಿ ಅಗೆದರೂ ಯಾವುದೇ ಅವ‍ಶೇಷ ಸಿಕ್ಕಿಲ್ಲ.

ಮಂಗಳವಾರ ಬೆಳಗ್ಗೆ 10.30ಕ್ಕೆ ಎಸ್‌ಐಟಿ ಕಚೇರಿಗೆ ಅನಾಮಿಕ ಆಗಮಿಸಿದ್ದರೆ, ಒಂದು ಗಂಟೆಯ ನಂತರ ಸ್ಥಳಕ್ಕೆ ಜಿಪಿಆರ್‌ ಯಂತ್ರ ಬಂದಿತ್ತು. 1ನೇ ಸುತ್ತಿನ ಸರ್ವೆ ನಡೆಸಿ GPR ಡ್ರೋನ್ ಲ್ಯಾಂಡ್ ಆಗಿತ್ತು. ಆ ಬಳಿಕ ಎಸ್​ಐಟಿ, ಅನಾಮಿಕ ಸಮ್ಮುಖದಲ್ಲಿ GPR ಸರ್ವೆ ನಡೆದಿತ್ತು.

ಸುಜಾತಾ ಭಟ್ ಅಸಲಿ ಹೆಸರೇ ಬೇರೆ, ಮಗು ತೆಗೆಸಿ ಸೀತಾ ನದಿಗೆ ಬೀಸಾಡಿದ್ದಳು! ಭಾವ ಬಿಚ್ಚಿಟ್ಟರು ಅಸಲಿ ಸತ್ಯ!

ಮಧ್ಯಾಹ್ನದ ವೇಳೆಗೆ ಪ್ರಣವ್​ ಮೊಹಂತಿ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಎಸ್‌ಐಟಿ ಅಧಿಕಾರಿಗಳಿಗೆ ಮುಖ್ಯಸ್ಥರಿಗೆ ಮಾಹಿತಿ ನೀಡಲಾಗಿತ್ತು. ಸ್ಪಾಟ್​ 13ರ ಮಣ್ಣನ್ನು ಎಫ್‌ಎಸ್‌ಎಲ್‌ ಸಂಗ್ರಹಿಸಿತ್ತು. ಈ ವೇಳೆ ಎನ್‌ಎಚ್‌ಆರ್‌ಸಿ ಅಧಿಕಾರಿಗಳು ಕೂಡ ಆಗಮಿಸಿ ಅದರ ವೀಕ್ಷಣೆ ಆರಂಭಿಸಿದ್ದರು. ಸಂಜೆಯ ವೇಳೆಗೆ ಜಿಪಿಅರ್ ಶೋಧದಲ್ಲೂ ಅಸ್ಥಿಪಂಜರ ಪತ್ತೆಯಾಗಿರಲಿಲ್ಲ. ಸುಳಿವು ಸಿಗದಿದ್ದರೂ ಅನಾಮಿಕ ಹೇಳಿದಂತೆ ಎಸ್‌ಐಟಿ ಅಧಿಕಾರಿ ನೆಲವನ್ನು ಅಗೆಯಲು ಆರಂಭಿಸಿದ್ದರು.
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more