Dharwad: ಕಳೆದ 3 ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ವೇತನವನ್ನೇ ಕೊಟ್ಟಿಲ್ಲ!

Dharwad: ಕಳೆದ 3 ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ವೇತನವನ್ನೇ ಕೊಟ್ಟಿಲ್ಲ!

Suvarna News   | Asianet News
Published : Jan 08, 2022, 09:38 AM ISTUpdated : Jan 08, 2022, 10:38 AM IST

ರಾಜ್ಯದಲ್ಲಿ ಈಗಾಗಲೆ ಮೂರನೇಯ ಅಲೆ ಶುರುವಾಗಿದೆ. ಇತ್ತ ಸರಕಾರ ಕೊರೋನಾ ನಿಯಂತ್ರಣ ಮಾಡಲು ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರನ್ನ ಬಳಸಿಕೊಂಡಿತ್ತು. ಆದರೆ ಅವರಿಗೆ  ಕಳೆದ ಮೂರು ತಿಂಗಳಿಂದ ವೇತನವನ್ನೇ ಕೊಡ್ತಾ ಇಲ್ಲ!

ಧಾರವಾಡ (ಜ. 08): ರಾಜ್ಯದಲ್ಲಿ ಈಗಾಗಲೆ ಮೂರನೇಯ ಅಲೆ  (3rd Wave) ಶುರುವಾಗಿದೆ. ಇತ್ತ ಸರಕಾರ ಕೊರೋನಾ ನಿಯಂತ್ರಣ ಮಾಡಲು ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರನ್ನ  (ASHA Workers) ಬಳಸಿಕೊಂಡಿತ್ತು. ಆದರೆ ಅವರಿಗೆ  ಕಳೆದ ಮೂರು ತಿಂಗಳಿಂದ ವೇತನವನ್ನೇ ಕೊಡ್ತಾ ಇಲ್ಲ!

ಧಾರವಾಡ ಜಿಲ್ಲಾ ಪಂಚಾಯತಿ ಆವರಣದಲ್ಲಿ ನಮಗೆ ನಮ್ಮ‌ವೇತವನ್ನ ಕೊಡಿ ಎಂದು ಪ್ರತಿಭಟನೆಯನ್ನ ಮಾಡಿದ್ದಾರೆ ಆಶಾ ಕಾರ್ಯಕರ್ತೆಯರು. ಧಾರವಾಡ ಎರಡು ಅಲೆಯಲ್ಲಿ ಆಶಾ ಕಾರ್ಯಕರ್ತೆಯರು ಭಯದ ವಾತಾವರಣದಲ್ಲಿ ಕೆಲಸ ಮಾಡಿದ್ದಾರೆ. ಮನೆಮನೆಗೆ ತೆರಳಿ ಕೊರೋನಾ ರೋಗಿಗಳ ಜೊತೆ ಕೆಲಸ ಮಾಡಿದ್ದಾರೆ. ಜೀವದ ಹಂಗು ತೊರೆದು ಕೊರೋನಾ ಕಾಲದಲ್ಲಿ ಕೆಲಸ ಮಾಡಿದ್ದಾರೆ. ಎರಡು ವರ್ಷದಲ್ಲಿ ನಮಗೆ ಮಾಸ್ಕ‌ ಕೊಡದೇ ಕೆಲಸ ಮಾಡಿಸಿಕೊಂಡಿದೆ ಜಿಲ್ಲಾಡಳಿತ, ಮೂರನೇಯ ಅಲೆ ಬರುತ್ತೆ ನಮಗೆ ಕೆಲಸಕ್ಕೆ ತಕ್ಕಂತೆ ವೇತನ ನೀಡುತ್ತಿಲ್ಲ, ಕಳೆದ ಮೂರು ತಿಂಗಳಿಂದ ಕೋವಿಡ್ ಕೆಲಸ ಮಾಡಿದಕ್ಕೆ 1000 ಹಣ ಕೊಡ್ತಾ ಇದಾರೆ ಅಷ್ಟೆ ಎಂದು ಆಶಾ ಕಾರ್ಯಕರ್ತೆಯರು ಅಳಲು ತೋಡಿಕೊಂಡಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ವ್ಯಾಕ್ಸಿನ್ ಹಾಕಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ತುಂಬಾ ದೊಡ್ಡದಿದೆ . ಆದರೆ ಕೇವಲ ಮೂರು ತಿಂಗಳಿಂದ ‌ಒಂದು ಸಾವಿರ ಸಿಕ್ಕಿದ್ದು,  ಆರ್ ಸಿ ಎಚ್ ನಿಂದ ಬರೋ ಹಣವೂ ಆಶಾಗಳಿಗೆ ಸಿಗ್ತಿಲ್ಲ, ಎಂದು ದೂರಿದ್ದಾರೆ.

ಎರಡು ತಾಸು ಕೆಲಸಕ್ಕೆ ಅಂತ ಕರೆಸಿ ಇಡಿ ದಿನ ಕೆಲಸ ಮಾಡಿಸುತ್ತಿರುವ ಆರೋಗ್ಯ ಇಲಾಖೆ ನಮಗೆ ನಮ್ಮ‌ ವೇತನವನ್ನ ಮಾತ್ರ ಕೊಡ್ತಿಲ್ಲ ಎಂದು  ಐದನೂರಕ್ಕೂ ಹೆಚ್ಚು ಆಶಾ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ‌ ಆಕ್ರೋಶವನ್ನ ಹೊರ ಹಾಕಿದ್ದಾರೆ. ಇನ್ನು ಕಳೆದ ಎರಡು ಮೂರು ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಬರಬೇಕಾದ ಇನ್ಸೇಂಟಿವ್ ಹಣ ಕೂಡಾ ಬರ್ತಿಲ್ಲ, ನಮ್ಮ‌ವೇತವನ್ನ‌ 12 ಸಾವಿರಕ್ಕೆ ಏರಿಸಬೇಕು ಎಂದು ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ನಮಗೆ ವೇತನವನ್ನ‌ಹೆಚ್ಚಳ ಮಾಡಬೇಕು ಮತ್ತು ತಮ್ಮ ವೇತನವನ್ನ ಕೊಡಬೇಕು ಎಂದು ಹೋರಾಟವನ್ನ‌ ಮಾಡುತ್ತಿದ್ದಾರೆ. ಇನ್ನು ಆದಷ್ಟು ಬೇಗ ಆಶಾ ಕಾರ್ಯಕರ್ತೆ ಯರ ವೇತವನ್ನ ಜಿಲ್ಲಾಡಳಿತ ಆದಷ್ಟು ಬೇಗ ಕೊಡಬೇಕೆಂದು ಏಷ್ಯಾನೆಟ್ ಸುವರ್ಣ ನ್ಯೂಸ್ ನ ಕಳಕಳಿ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more