Dharwad: ಕಳೆದ 3 ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ವೇತನವನ್ನೇ ಕೊಟ್ಟಿಲ್ಲ!

Dharwad: ಕಳೆದ 3 ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ವೇತನವನ್ನೇ ಕೊಟ್ಟಿಲ್ಲ!

Published : Jan 08, 2022, 09:38 AM ISTUpdated : Jan 08, 2022, 10:38 AM IST

ರಾಜ್ಯದಲ್ಲಿ ಈಗಾಗಲೆ ಮೂರನೇಯ ಅಲೆ ಶುರುವಾಗಿದೆ. ಇತ್ತ ಸರಕಾರ ಕೊರೋನಾ ನಿಯಂತ್ರಣ ಮಾಡಲು ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರನ್ನ ಬಳಸಿಕೊಂಡಿತ್ತು. ಆದರೆ ಅವರಿಗೆ  ಕಳೆದ ಮೂರು ತಿಂಗಳಿಂದ ವೇತನವನ್ನೇ ಕೊಡ್ತಾ ಇಲ್ಲ!

ಧಾರವಾಡ (ಜ. 08): ರಾಜ್ಯದಲ್ಲಿ ಈಗಾಗಲೆ ಮೂರನೇಯ ಅಲೆ  (3rd Wave) ಶುರುವಾಗಿದೆ. ಇತ್ತ ಸರಕಾರ ಕೊರೋನಾ ನಿಯಂತ್ರಣ ಮಾಡಲು ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರನ್ನ  (ASHA Workers) ಬಳಸಿಕೊಂಡಿತ್ತು. ಆದರೆ ಅವರಿಗೆ  ಕಳೆದ ಮೂರು ತಿಂಗಳಿಂದ ವೇತನವನ್ನೇ ಕೊಡ್ತಾ ಇಲ್ಲ!

ಧಾರವಾಡ ಜಿಲ್ಲಾ ಪಂಚಾಯತಿ ಆವರಣದಲ್ಲಿ ನಮಗೆ ನಮ್ಮ‌ವೇತವನ್ನ ಕೊಡಿ ಎಂದು ಪ್ರತಿಭಟನೆಯನ್ನ ಮಾಡಿದ್ದಾರೆ ಆಶಾ ಕಾರ್ಯಕರ್ತೆಯರು. ಧಾರವಾಡ ಎರಡು ಅಲೆಯಲ್ಲಿ ಆಶಾ ಕಾರ್ಯಕರ್ತೆಯರು ಭಯದ ವಾತಾವರಣದಲ್ಲಿ ಕೆಲಸ ಮಾಡಿದ್ದಾರೆ. ಮನೆಮನೆಗೆ ತೆರಳಿ ಕೊರೋನಾ ರೋಗಿಗಳ ಜೊತೆ ಕೆಲಸ ಮಾಡಿದ್ದಾರೆ. ಜೀವದ ಹಂಗು ತೊರೆದು ಕೊರೋನಾ ಕಾಲದಲ್ಲಿ ಕೆಲಸ ಮಾಡಿದ್ದಾರೆ. ಎರಡು ವರ್ಷದಲ್ಲಿ ನಮಗೆ ಮಾಸ್ಕ‌ ಕೊಡದೇ ಕೆಲಸ ಮಾಡಿಸಿಕೊಂಡಿದೆ ಜಿಲ್ಲಾಡಳಿತ, ಮೂರನೇಯ ಅಲೆ ಬರುತ್ತೆ ನಮಗೆ ಕೆಲಸಕ್ಕೆ ತಕ್ಕಂತೆ ವೇತನ ನೀಡುತ್ತಿಲ್ಲ, ಕಳೆದ ಮೂರು ತಿಂಗಳಿಂದ ಕೋವಿಡ್ ಕೆಲಸ ಮಾಡಿದಕ್ಕೆ 1000 ಹಣ ಕೊಡ್ತಾ ಇದಾರೆ ಅಷ್ಟೆ ಎಂದು ಆಶಾ ಕಾರ್ಯಕರ್ತೆಯರು ಅಳಲು ತೋಡಿಕೊಂಡಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ವ್ಯಾಕ್ಸಿನ್ ಹಾಕಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ತುಂಬಾ ದೊಡ್ಡದಿದೆ . ಆದರೆ ಕೇವಲ ಮೂರು ತಿಂಗಳಿಂದ ‌ಒಂದು ಸಾವಿರ ಸಿಕ್ಕಿದ್ದು,  ಆರ್ ಸಿ ಎಚ್ ನಿಂದ ಬರೋ ಹಣವೂ ಆಶಾಗಳಿಗೆ ಸಿಗ್ತಿಲ್ಲ, ಎಂದು ದೂರಿದ್ದಾರೆ.

ಎರಡು ತಾಸು ಕೆಲಸಕ್ಕೆ ಅಂತ ಕರೆಸಿ ಇಡಿ ದಿನ ಕೆಲಸ ಮಾಡಿಸುತ್ತಿರುವ ಆರೋಗ್ಯ ಇಲಾಖೆ ನಮಗೆ ನಮ್ಮ‌ ವೇತನವನ್ನ ಮಾತ್ರ ಕೊಡ್ತಿಲ್ಲ ಎಂದು  ಐದನೂರಕ್ಕೂ ಹೆಚ್ಚು ಆಶಾ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ‌ ಆಕ್ರೋಶವನ್ನ ಹೊರ ಹಾಕಿದ್ದಾರೆ. ಇನ್ನು ಕಳೆದ ಎರಡು ಮೂರು ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಬರಬೇಕಾದ ಇನ್ಸೇಂಟಿವ್ ಹಣ ಕೂಡಾ ಬರ್ತಿಲ್ಲ, ನಮ್ಮ‌ವೇತವನ್ನ‌ 12 ಸಾವಿರಕ್ಕೆ ಏರಿಸಬೇಕು ಎಂದು ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ನಮಗೆ ವೇತನವನ್ನ‌ಹೆಚ್ಚಳ ಮಾಡಬೇಕು ಮತ್ತು ತಮ್ಮ ವೇತನವನ್ನ ಕೊಡಬೇಕು ಎಂದು ಹೋರಾಟವನ್ನ‌ ಮಾಡುತ್ತಿದ್ದಾರೆ. ಇನ್ನು ಆದಷ್ಟು ಬೇಗ ಆಶಾ ಕಾರ್ಯಕರ್ತೆ ಯರ ವೇತವನ್ನ ಜಿಲ್ಲಾಡಳಿತ ಆದಷ್ಟು ಬೇಗ ಕೊಡಬೇಕೆಂದು ಏಷ್ಯಾನೆಟ್ ಸುವರ್ಣ ನ್ಯೂಸ್ ನ ಕಳಕಳಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more