Dia Rice For Diabetic: ಡಯಾರೈಸ್- ಮಧುಮೇಹಿಗಳ ಸ್ನೇಹಿ ಈ ಅಕ್ಕಿ!

Dia Rice For Diabetic: ಡಯಾರೈಸ್- ಮಧುಮೇಹಿಗಳ ಸ್ನೇಹಿ ಈ ಅಕ್ಕಿ!

Suvarna News   | Asianet News
Published : Dec 21, 2021, 05:52 PM ISTUpdated : Dec 21, 2021, 06:08 PM IST

ಬೇರೆ ಭತ್ತದ ತಳಿಗಳಿಗಿಂತ ಕಡಿಮೆ ಅವಧಿಯಲ್ಲಿ ಬೆಳೆಯುವ ಹೆಚ್ಚು ಇಳುವರಿ ಬರುವ ಭತ್ತ ಇದಾಗಿದೆ.  ಈ ತಳಿಯಲ್ಲಿ ಸಕ್ಕರೆ ಅಂಶ ಕಡಿಮೆ ಇದ್ದು ಡಯಾಬಿಟಿಸ್ ರೋಗಿಗಳಿಗೆ ಹೆಚ್ಚು ಅನುಕೂಲವಾಗಿದೆ. ಹೀಗಾಗಿ ಇದನ್ನು ಡಯಾರೈಸ್ ಎಂದು ಸಹ ಕರೆಯುತ್ತಾರೆ..
 

ಚಾಮರಾಜನಗರ (ಡಿ. 21): ಹೈದರಾಬಾದ್ ನಲ್ಲಿರುವ ಭಾರತೀಯ ಭತ್ತ ಸಂಶೋಧನ ಸಂಸ್ಥೆ ಅಭಿವೃದ್ಧಿಪಡಿಸಿರುವ  ಮಧುಮೇಹಿಗಳ ಸ್ನೇಹಿ (  Dia Rice For Diabetic) ಎಂದೆ ಹೆಸರಾದ ಆರ್.ಎನ್.ಆರ್ ತಳಿಯ ಭತ್ತ  ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಬಂಪರ್ ಇಳುವರಿ ಬಂದಿದೆ. ಎಡಬಿಡದೆ ಸುರಿದ ಮಳೆ, ಸಾಮಾನ್ಯವಾಗಿ ಬಾಧಿಸುವ ಬೆಂಕಿ ರೋಗವನ್ನು ತಾಳಿಕೊಂಡು ಬೆಳದಿರುವ ಆರ್.ಎನ್.ಆರ್ ತಳಿ ಭತ್ತ ಉತ್ತಮವಾಗಿ ಬೆಳೆದು ರೈತರಲ್ಲಿ ಮಂದಹಾಸ ಮೂಡಿಸಿದೆ.

ಇದು ಸಕ್ಕರೆ ಅಂಶ ಕಡಿಮೆ ಇರುವ ಡಯಾಬಿಟಿಸ್ ರೋಗಿಗಳು ಉಪಯೋಗಿಸಬಹುದಾದ ಆರ್.ಎನ್.ಆರ್ ತಳಿಯ ಭತ್ತ. ಹೈದರಾಬಾದ್‌ನಲ್ಲಿರುವ ಭಾರತೀಯ ಭತ್ತ ಸಂಶೋಧನ ಸಂಸ್ಥೆ ಈ ತಳಿಯನ್ನು ಅಭಿವೃದ್ಧಿಪಡಿಸಿದೆ. ಬೆಂಕಿ ರೋಗ ಸೇರಿದಂತೆ ಇತರ ರೋಗ ನಿರೋಧಕ ಗುಣ ಹೊಂದಿರುವ ಈ ಭತ್ತದ ತಳಿಯನ್ನು ಚಾಮರಾಜನಗರದ ಕೃಷಿವಿಜ್ಞಾನ ಕೇಂದ್ರ ಜಿಲ್ಲೆಯ ರೈತರಿಗೆ ಪರಿಚಯಿಸಿದೆ.

ಜಿಲ್ಲೆಯ ವಿವಿಧೆಡೆ 100 ಮಂದಿ ರೈತರಿಗೆ ಉಚಿತವಾಗಿ  ಈ ತಳಿಯ ಭತ್ತದಬೀಜ ನೀಡಿ ಬೆಳೆ ಬೆಳೆಯಲು ಎಲ್ಲಾ ರೀತಿಯ ನೆರವನ್ನು ಕೃಷಿ ವಿಜ್ಞಾನಕೇಂದ್ರ ನೀಡಿತ್ತು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳ ಮಾರ್ಗದರ್ಶನದಲ್ಲಿ ಐಎನ್.ಆರ್ ತಳಿಯ ಭತ್ತ ಬೆಳೆದ ರೈತರಿಗೆ ಬಂಪರ್ ಇಳುವರಿ ಬಂದಿದೆ. ಸಾಮಾನ್ಯವಾಗಿ ಬೇರೆ ಭತ್ತದ ತಳಿಗಳು ಎಕರೆಗೆ 18 ರಿಂದ 20 ಕ್ವಿಂಟಾಲ್ ಇಳುವರಿ ಬಂದರೆ ಐಎನ್.ಆರ್ ತಳಿ ಭತ್ತ 25 ರಿಂದ 26 ಕ್ವಿಂಟಾಲ್ ಇಳುವರಿ ಬಂದಿದೆ..

ಬೇರೆ ಭತ್ತದ ತಳಿಗಳಿಗಿಂತ ಕಡಿಮೆ ಅವಧಿಯಲ್ಲಿ ಬೆಳೆಯುವ ಹೆಚ್ಚು ಇಳುವರಿ ಬರುವ ಭತ್ತ ಇದಾಗಿದೆ.  ಈ ತಳಿಯಲ್ಲಿ ಸಕ್ಕರೆ ಅಂಶ ಕಡಿಮೆ ಇದ್ದು ಡಯಾಬಿಟಿಸ್ ರೋಗಿಗಳಿಗೆ ಹೆಚ್ಚು ಅನುಕೂಲವಾಗಿದೆ. ಹೀಗಾಗಿ ಇದನ್ನು ಡಯಾರೈಸ್ ಎಂದು ಸಹ ಕರೆಯುತ್ತಾರೆ..

ಮಣ್ಣಿನ ಗುಣಮಟ್ಟ ಉತ್ತಮವಾಗಿರುವ ಕಡೆಗಳಲ್ಲಿ ಒಂದು ಎಕರೆಗೆ 35 ರಿಂದ 40 ಕ್ವಿಂಟಾಲ್ ವರೆಗು ಇಳುವರಿ ತೆಗೆಯಬಹುದಾಗಿದೆ. ಇತರ ತಳಿ ಭತ್ತದ ಬೆಳೆಯುವಾಗಿ ಕಳೆ ನಿರ್ವಹಣೆಗೆ ಎಕರೆಗೆ 7 ರಿಂದ 8  ಸಾವಿರ ರೂಪಾಯಿ ಖರ್ಚಾಗುತ್ತದೆ. ಆದರೆ ಐ.ಎನ್ಆರ್.ತಳಿಯ ಭತ್ತದ ಬೆಳೆಯಲ್ಲಿ ಕಳೆ ನಿರ್ವಹಣೆಗೆ 1ರಿಂದ 2 ಸಾವಿರ ರೂಪಾಯಿ ಸಾಕು ಎಂಬುಂದು ರೈತರ ಅಭಿಪ್ರಾಯವಾಗಿದ್ದು ಒಟ್ಟಾರೆ ಬೇರೆ ತಳಿಯ ಭತ್ತಕ್ಕೆ ತಗಲುವ ವೆಚ್ಚಕ್ಕಿಂದ ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ತೆಗೆಯಬಹುದು ಎಂಬುದನ್ನು ಜಿಲ್ಲೆಯ ರೈತರು ತೋರಿಸಿಕೊಟ್ಟಿದ್ದಾರೆ.
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more