ಬಣ್ಣ ಬಣ್ಣದ ಹಣತೆ..ಒಂದಕ್ಕಿಂತ ಒಂದು ಸುಂದರ: ವಿಶೇಷ ಚೇತನ ಮಕ್ಕಳ ಪ್ರತಿಭೆಗೆ ಭಾರೀ ಪ್ರೋತ್ಸಾಹ

ಬಣ್ಣ ಬಣ್ಣದ ಹಣತೆ..ಒಂದಕ್ಕಿಂತ ಒಂದು ಸುಂದರ: ವಿಶೇಷ ಚೇತನ ಮಕ್ಕಳ ಪ್ರತಿಭೆಗೆ ಭಾರೀ ಪ್ರೋತ್ಸಾಹ

Published : Nov 13, 2023, 11:33 AM IST

ದೀಪಾವಳಿ ಕತ್ತಲಿನಿಂದ ಬೆಳಕಿನೆಡೆಗೆ. ನಿತ್ಯ ಬದುಕಿನಿಂದ ಹೊಸತನದ ಬದುಕಿಗೆ ದಾರಿ ತೋರಿಸೋ ಸಂಭ್ರಮದ ಹಬ್ಬ. ಮಕ್ಕಳ ಪಾಲಿಗಂತೂ ದೀಪಾವಳಿ ದೀಪ ಹಚ್ಚಿ ಎಲ್ಲರೂ ಸೇರಿ ಪಟಾಕಿ ಸಿಡಿಸಿ  ಸಂಭ್ರಮಿಸೋ ದಿವಸ. ಇಲ್ಲೊಂದು ಶಾಲೆಯ ಮಕ್ಕಳಿಗೆ ಹಣತೆಯೇ ಬಾಳ ಬೆಳಕಾಗಿದೆ.
 

ಬಣ್ಣ ಬಣ್ಣದ ಹಣತೆ. ಒಂದಕ್ಕಿಂತ ಒಂದು ಸುಂದರ..ಬೆಳಕಿನ ಹಬ್ಬದ ಸಂಭ್ರ ಇಮ್ಮಡಿ ಗೊಳಿಸುವ ಈ ಸ್ಪೆಷಲ್ ಹಣತೆಗಳಿಗೆ(Deepa) ಡಿಮ್ಯಾಂಡಪ್ಪೋ ಡಿಮ್ಯಾಂಡ್. ಮಾರುಕಟ್ಟೆಯಲ್ಲಿ ಸಿಗುವ ಇತರೆ ಹಣತೆಗಳಿಗಿಂತ ಈ ಹಣತೆಗಳು ಡಿಫರೆಂಟ್ ಆಗಿ ಕಾಣುತ್ತವೆ.. ಅಷ್ಟೇ ಅಲ್ಲ ಈ ಸ್ಪೆಷಲ್ ಹಣತೆ ಹಿಂದೆಯೂ ಒಂದು ವಿಶೇಷತೆ ಇದೆ.. ಹೀಗೆ ಬಣ್ಣ ಬಣ್ಣರ ರೂಪ ಪಡೆದ ಹಣತೆಗಳ ಹಿಂದಿರೋದಿ ವಿಶೇಷ ಚೇತನರು( Specialized Children). ಮಂಗಳೂರಿನ (Mangalore) ವಿಠೋಬ ಟೆಂಪಲ್ ರೋಡ್ನಲ್ಲಿರುವ ನವಚೇತನ ವಿಶೇಷ ಶಾಲೆಯ ಮಕ್ಕಳ ಕೈಯ್ಯಲ್ಲಿ ಮೂಡಿ ಬಂದ ಹಣತೆಗಳಿವು. ತಮ್ಮನ್ನು ತಾವೇ ನಿಭಾಯಿಸಲಾಗದ ವಿಶೇಷ ಚೇತನ ಮಕ್ಕಳು ಈ ಹಣತೆಗಳನ್ನು ತಯಾರಿಸಿದ್ದು ವಿಶೇಷ. ನವಚೇತನ ವಿಶೇಷ ಸ್ಕೂಲ್ನ ಮಕ್ಕಳಿಗೆ ಸುಮಾರು 20 ವರ್ಷಗಳಿಂದ ಇಂತಹ ಕರ ಕುಶಲ ತಯಾರಿಯ ತರಬೇತಿ ನೀಡಲಾಗುತ್ತಿದೆ. ಕೇವಲ ಹಣತೆ ಮಾತ್ರವಲ್ಲದೆ, ವೆಡ್ಡಿಂಗ್ ಕಾರ್ಡ್, ಸ್ವೀಟ್ ಬಾಕ್ಸ್, ಗಿಫ್ಟ್ ಬಾಕ್ಸ್ಗಳನ್ನೂ ತಯಾರಿಸೋದು ಗೊತ್ತು.ವಿಶೇಷ ಚೇತನ ಮಕ್ಕಳ ವಿಶೇಷ ಪ್ರತಿಭೆಗೆ ಪ್ರೋತ್ಸಾಹ ನೀಡುತ್ತಿರುವ ಜನ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇದು ಮಕ್ಕಳ ಕೌಶಲ್ಯಾಭಿವೃದ್ಧಿ ಜೊತೆಗೆ ಆರ್ಥಿಕ ಭದ್ರತೆಯನ್ನೂ ನೀಡುತ್ತಿದೆ. ಹಣತೆ ಇಲ್ಲದೆ ದೀಪಾವಳಿ ಹಬ್ಬ ಪೂರ್ಣವಾಗೋದಿಲ್ಲ.ಬೆಳಕಿನ ಹಬ್ಬವನ್ನು ಸಂಭ್ರಮಿಸಲು ಈ ವಿಶೇಷ ಚೇತನರ ಸ್ಪೆಷಲ್ ಹಣತೆಯನ್ನೇ ಖರೀದಿ ಮಾಡ್ತಿದ್ದಾರೆ. ಶಾಲೆಗೆ ಭೇಟಿ ನೀಡಿ ಕೆಲವರು ಹಣತೆ ಖರೀದಿ ಮಾಡಿದ್ರೆ, ಉಳಿದ ಹಣತೆಗಳನ್ನು ಮಾರುಕಟ್ಟೆಯಲ್ಲಿ ಮಾರಟಕ್ಕಿಡಲಾಗಿದೆ.

ಇದನ್ನೂ ವೀಕ್ಷಿಸಿ:  ರಾಯಚೂರಲ್ಲಿ ಬಂಜಾರ ಸಮುದಾಯದ ದೀಪಾವಳಿ ಆಚರಣೆ ಸ್ಪೆಷಲ್: ಪೂಜೆ ಪುನಸ್ಕಾರ..ಮನೆಮನೆಗಳಲ್ಲೂ ಹಬ್ಬದ ಸಂಭ್ರಮ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!