ಮಳೆಯ ಕಣ್ಣಾಮುಚ್ಚಾಲೆಯಿಂದ ರೋಗಗಳಿಗೆ ಆಹ್ವಾನ: ಉಡುಪಿಯಲ್ಲಿ ಮಲೇರಿಯಾ, ಡೆಂಘೀ ಭೀತಿ !

ಮಳೆಯ ಕಣ್ಣಾಮುಚ್ಚಾಲೆಯಿಂದ ರೋಗಗಳಿಗೆ ಆಹ್ವಾನ: ಉಡುಪಿಯಲ್ಲಿ ಮಲೇರಿಯಾ, ಡೆಂಘೀ ಭೀತಿ !

Published : Aug 28, 2023, 10:41 AM IST

ಸಾಂಕ್ರಾಮಿಕ ರೋಗಕ್ಕೆ ಉಡುಪಿಯಲ್ಲಿ ಜನ ತತ್ತರಿಸಿ ಹೋಗಿದ್ದಾರೆ. ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ಜನ ಡೆಂಗ್ಯೂ, ಮಲೇರಿಯಾಗೆ ತುತ್ತಾಗುತ್ತಿದ್ದಾರೆ. ಅದರಲ್ಲೂ ವಲಸೆ ಕಾರ್ಮಿಕರಲ್ಲೇ ಹೆಚ್ಚಾಗಿ ಕಂಡುಬರ್ತಿದ್ದು, ಇದು ಆತಂಕವನ್ನು ಶುರು ಮಾಡಿದೆ.

ಒಂದೆಡೆ ಬಿಟ್ಟು ಬಿಟ್ಟು ಸುರಿಯುವ ಮಳೆ..ಮತ್ತೊಂದೆಡೆ ಚರಂಡಿಯಲ್ಲಿ ನಿಂತ ನೀರು. ಸೊಳ್ಳೆಗಳ ಕಾಟಕ್ಕೆ ಬೇಸತ್ತ ಜನ. ಈ ದೃಶ್ಯ ಕಂಡು ಬಂದಿದ್ದು ಉಡುಪಿಯಲ್ಲಿ(Udupi). ಈ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರೇ ಹೆಚ್ಚಾಗಿದ್ದಾರೆ. ಜೋಪಡಿ, ಗುಡಿಸಿನಲ್ಲೇ ಜೀವನ ಮಾಡೋರೇ ಜಾಸ್ತಿ. ಈ ಕುಟುಂಬಗಳಿಗೆ ಈಗ ಸಾಂಕ್ರಾಮಿಕ ರೋಗಗಳ( diseases) ಭೀತಿ ಶುರುವಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 22 ಮಲೇರಿಯಾ ಜೊತೆಗೆ 75 ಡೆಂಘೀ ಪ್ರಕರಣ ದಾಖಲಾಗಿವೆ. ಹವಾಮಾನ ಬದಲಾವಣೆಗೆ ಶೀತ,ಕೆಮ್ಮು, ಜ್ವರ ವ್ಯಾಪಕವಾಗಿದೆ. ಸಂತೆಕಟ್ಟೆ, ಕಲ್ಸಂಕ ಭಾಗದಲ್ಲಿ ಹೆಚ್ಚಿನ ಮಲೇರಿಯಾ(malaria) ದೃಢಪಟ್ಟಿದೆ. ಉಡುಪಿ ಜಿಲ್ಲೆಯಾದ್ಯಂತ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ನಗರ, ಗ್ರಾಮಾಂತರ ಭಾಗದಲ್ಲಿ ಬಿಡುವಿಲ್ಲದೇ ಸುತ್ತಾಡುತ್ತಿದ್ದಾರೆ. ಮಲೇರಿಯಾ, ಡೆಂಘೀ ರೋಗಲಕ್ಷಣಗಳು ಗ್ರಾಮೀಣ ಭಾಗಕ್ಕಿಂತಲೂ ನಗರ ಭಾಗದಲ್ಲಿ ಹೆಚ್ಚು ವರದಿಯಾಗುತ್ತಿದ್ದು ಶುಚಿತ್ವಕ್ಕೆ ಹೆಚ್ಚು ಗಮನ ಕೊಡಬೇಕು ಅಂತಾ ಆರೋಗ್ಯಾಧಿಕಾರಿ ಡಾ.ಪ್ರಶಾಂತ್ ಭಟ್ ಎಚ್ಚರಿಸಿದ್ದಾರೆ. ಉಡುಪಿಯಲ್ಲಿ ಜೂನ್‌ ಅಂತ್ಯಕ್ಕೆ 45 ಡೆಂಘೀ ಪ್ರಕರಣಗಳಿದ್ದವು. ಆಗಸ್ಟ್‌ನಲ್ಲಿ ಡೆಂಘೀ ಕೇಸ್‌ಗಳ ಸಂಖ್ಯೆ 75 ಏರಿಕೆಯಾಗಿದೆ.

ಇದನ್ನೂ ವೀಕ್ಷಿಸಿ:  ಕಾವೇರಿ ಸಂಘರ್ಷಕ್ಕೆ ಇಂದು ನಿರ್ಣಾಯಕ ದಿನ: ಕಾವೇರಿ ನಿಯಂತ್ರಣಾ ಸಮಿತಿಯಿಂದ ಹೈವೋಲ್ಟೇಜ್ ಸಭೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more