Covid 19 Spike: ಕೊಪ್ಪಳದ 9 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!

Covid 19 Spike: ಕೊಪ್ಪಳದ 9 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!

Published : Jan 25, 2022, 09:39 AM IST

*ಕೊಪ್ಪಳ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಸ್ಪೋಟ
* 9 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ
*100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೋವಿಡ್‌ 19
 

ಕೊಪ್ಪಳ (ಜ. 25): ರಾಜ್ಯದಲ್ಲಿ ಕೊರೋನಾ(Covid 19)ಸೋಂಕು ತೀವ್ರಗೊಳ್ಳುತ್ತಿದ್ದು, 3ನೇ ಅಲೆಯಲ್ಲಿಯೇ ಅತಿ ಹೆಚ್ಚು 32 ಸಾವು, ಅತಿ ಹೆಚ್ಚು ಪಾಸಿಟಿವಿಟಿ ದರ ಶೇ.33 ಸೋಮವಾರ ದಾಖಲಾಗಿದೆ. ಅಲ್ಲದೆ, ಬರೋಬ್ಬರಿ 16 ಜಿಲ್ಲೆಗಳಲ್ಲಿ ಸೋಂಕಿತರ ಸಾವು ವರದಿಯಾಗಿದೆ. ಈ ಮಧ್ಯೆ ಕೊಪ್ಪಳದಲ್ಲಿ (Koppal) ವಿವಿಧ ಶಾಲಾ ಕಾಲೇಜುಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಬೆನ್ನಲ್ಲೇ ಜಿಲ್ಲೆಯ 9 ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. 100ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ದೃಡಪಟ್ಟಿದೆ. 

ಇದನ್ನೂ ಓದಿ: Corona Cases 3ನೇ ಅಲೆಯಲ್ಲೇ ಗರಿಷ್ಠ: ಕರ್ನಾಟಕದಲ್ಲಿ 32 ಸಾವು, ಶೇ.33 ಪಾಸಿಟಿವಿಟಿ!

ಜನವರಿ 22ರಿಂದ ಜನವರಿ 26ರ ವರೆಗೆ 9 ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೋವಿಡ್‌ ಸೋಂಕು ದೃಡಪಟ್ಟ ವಿದ್ಯಾರ್ಥಿಗಳನ್ನು ನಗರದ ಹೊರವಲಯದಲ್ಲಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಿಸಲಾಗಿದೆ. ಇನ್ನು ರಾಜ್ಯದಲ್ಲಿ(Karnataka) ಸೋಮವಾರ 46,426 ಮಂದಿ ಸೋಂಕಿತರಾಗಿದ್ದು, ಹಾವೇರಿಯಲ್ಲಿ(Haveri) 10 ವರ್ಷದ ಬಾಲಕಿ ಸೇರಿ 32 ಸೋಂಕಿತರು ಸಾವಿಗೀಡಾಗಿದ್ದಾರೆ. 41,703 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3.16 ಲಕ್ಷ ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more