Covid 19 Spike: ಕೊಪ್ಪಳದ 9 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!

Covid 19 Spike: ಕೊಪ್ಪಳದ 9 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!

Published : Jan 25, 2022, 09:39 AM IST

*ಕೊಪ್ಪಳ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಸ್ಪೋಟ
* 9 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ
*100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೋವಿಡ್‌ 19
 

ಕೊಪ್ಪಳ (ಜ. 25): ರಾಜ್ಯದಲ್ಲಿ ಕೊರೋನಾ(Covid 19)ಸೋಂಕು ತೀವ್ರಗೊಳ್ಳುತ್ತಿದ್ದು, 3ನೇ ಅಲೆಯಲ್ಲಿಯೇ ಅತಿ ಹೆಚ್ಚು 32 ಸಾವು, ಅತಿ ಹೆಚ್ಚು ಪಾಸಿಟಿವಿಟಿ ದರ ಶೇ.33 ಸೋಮವಾರ ದಾಖಲಾಗಿದೆ. ಅಲ್ಲದೆ, ಬರೋಬ್ಬರಿ 16 ಜಿಲ್ಲೆಗಳಲ್ಲಿ ಸೋಂಕಿತರ ಸಾವು ವರದಿಯಾಗಿದೆ. ಈ ಮಧ್ಯೆ ಕೊಪ್ಪಳದಲ್ಲಿ (Koppal) ವಿವಿಧ ಶಾಲಾ ಕಾಲೇಜುಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಬೆನ್ನಲ್ಲೇ ಜಿಲ್ಲೆಯ 9 ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. 100ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ದೃಡಪಟ್ಟಿದೆ. 

ಇದನ್ನೂ ಓದಿ: Corona Cases 3ನೇ ಅಲೆಯಲ್ಲೇ ಗರಿಷ್ಠ: ಕರ್ನಾಟಕದಲ್ಲಿ 32 ಸಾವು, ಶೇ.33 ಪಾಸಿಟಿವಿಟಿ!

ಜನವರಿ 22ರಿಂದ ಜನವರಿ 26ರ ವರೆಗೆ 9 ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೋವಿಡ್‌ ಸೋಂಕು ದೃಡಪಟ್ಟ ವಿದ್ಯಾರ್ಥಿಗಳನ್ನು ನಗರದ ಹೊರವಲಯದಲ್ಲಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಿಸಲಾಗಿದೆ. ಇನ್ನು ರಾಜ್ಯದಲ್ಲಿ(Karnataka) ಸೋಮವಾರ 46,426 ಮಂದಿ ಸೋಂಕಿತರಾಗಿದ್ದು, ಹಾವೇರಿಯಲ್ಲಿ(Haveri) 10 ವರ್ಷದ ಬಾಲಕಿ ಸೇರಿ 32 ಸೋಂಕಿತರು ಸಾವಿಗೀಡಾಗಿದ್ದಾರೆ. 41,703 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3.16 ಲಕ್ಷ ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more