Mangaluru: ಕಾರಿಂಜೇಶ್ವರ ಸುತ್ತ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆಗೆ ಜಿಲ್ಲಾಡಳಿತದಿಂದ ಬ್ರೇಕ್

Mangaluru: ಕಾರಿಂಜೇಶ್ವರ ಸುತ್ತ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆಗೆ ಜಿಲ್ಲಾಡಳಿತದಿಂದ ಬ್ರೇಕ್

Suvarna News   | Asianet News
Published : Mar 04, 2022, 04:58 PM ISTUpdated : Mar 04, 2022, 05:45 PM IST

ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನ ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲಿ ಒಂದು. ಪ್ರಕೃತಿಯ ಮಡಿಲಲ್ಲಿ ಬೃಹದಾಕಾರವಾಗಿ ನಿಂತಿರುವ ಕಲ್ಲಿನ ಮೇಲೆ ಇರುವ ಈ ಕಾರಣಿಕ ದೇವಸ್ಥಾನದ ಆಸುಪಾಸಿನಲ್ಲಿ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆ ನಡೆಯುತಿತ್ತು. 
 

ದಕ್ಷಿಣ ಕನ್ನಡ (ಮಾ. 04):  ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನ ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲಿ ಒಂದು. ಪ್ರಕೃತಿಯ ಮಡಿಲಲ್ಲಿ ಬೃಹದಾಕಾರವಾಗಿ ನಿಂತಿರುವ ಕಲ್ಲಿನ ಮೇಲೆ ಇರುವ ಈ ಕಾರಣಿಕ ದೇವಸ್ಥಾನದ ಆಸುಪಾಸಿನಲ್ಲಿ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆ ನಡೆಯುತಿತ್ತು. 

ದೇಗುಲದ ನಾಲ್ಕು ಸುತ್ತಲೂ ಕಲ್ಲು ಗಣಿಗಾರಿಕೆಯ ಸ್ಫೋಟದಿಂದ ದೇಗುಲ ಬಿರುಕು ಬಿಟ್ಟಿತ್ತು. ಸ್ಫೋಟದ ಸಂದರ್ಭ ಭಗವಂತನ ವಿಗ್ರಹವೇ ಕಂಪನ ಆದಂತಾಗುತ್ತಿತ್ತು. ಹೀಗಾಗಿ ಕಾವಳ ಮೂಡೂರು ಗ್ರಾಮ ಮತ್ತು ಕಾವಳ ಪಡೂರು ಗ್ರಾಮಗಳಲ್ಲಿದ್ದ ಈ ಕಲ್ಲು ಗಣಿಗಾರಿಕೆ ವಿರುದ್ದ ಸ್ಥಳೀಯರು, ದೇವಸ್ಥಾನದ ಭಕ್ತಾಧಿಗಳು ಬೃಹತ್ ಪ್ರತಿಭಟನೆ, ಹೋರಾಟ ನಡೆಸಿದ್ದರು. ಇದೀಗ ದೂರಿನ ಹಿನ್ನೆಲೆಯಲ್ಲಿ 03 ಕಪ್ಪು ಕಲ್ಲು ಗಣಿಗಾರಿಕೆಗೆ ಜಿಲ್ಲಾಡಳಿತ ಬೀಗ ಜಡಿದಿದೆ.

ಒಂದು ಕಲ್ಲು ಕೋರೆಯಲ್ಲಿ ಪರವಾಣಿಗೆದಾರ ತನ್ನ ಪರವಾನಿಗೆಯ ವ್ಯಾಪ್ತಿ ಮೀರಿ ಸುಮಾರು 3.28 ಎಕ್ರೆ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದು ಜಿಲ್ಲಾಡಳಿತದ ತನಿಖೆ ಸಂದರ್ಭ ಗೊತ್ತಾಗಿತ್ತು. ಹೀಗಾಗಿ 8,12,87,198 ರೂ. ದಂಡ ಪಾವತಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೂಚಿಸಿದ್ದು, ದಂಡ ಪಾವತಿಸದ ಕಾರಣ ಆ ಗಣಿಗಾರಿಕೆಯನ್ನು ಬಂದ್ ಮಾಡಲಾಗಿದೆ. 

ಅನಧಿಕೃತ ಗಣಿಗಾರಿಕೆ ನಡೆಸಿರುವ ಮಾಲಿಕರ ವಿರುದ್ಧ ಬಂಟ್ವಾಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಹ ದಾಖಲಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಪರವಾನಿಗೆದಾರ ಗೋಮಾಳ ಜಾಗವನ್ನು ಅತಿಕ್ರಮಿಸಿ ಗಣಿಗಾರಿಕೆ ನಡೆಸುತ್ತಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಆ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಗುತ್ತಿಗೆದಾರ ಮೃತಪಟ್ಟಿದ್ದರು ಅದೇ ಗಣಿಗಾರಿಕೆ ಪ್ರದೇಶದಲ್ಲಿ ಅನಧಿಕೃತವಾಗಿ ಬೇರೆ ವ್ಯಕ್ತಿ ಗಣಿಗಾರಿಕೆ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅದನ್ನು ಸ್ಥಗಿತಗೊಳಿಸಲಾಗಿದೆ.

ಸದ್ಯ ದೇವಸ್ಥಾನದ ಆಸುಪಾಸು ಕಾರ್ಯಚರಿಸುತ್ತಿದ್ದ ಮೂರು ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಮುಂದೆ ದೇವಸ್ಥಾನಕ್ಕೆ ಯಾವುದೇ ಧಕ್ಕೆ ಭಾರದ ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆ ನಡೆಸದಂತೆ ಎಚ್ಚರಿಕೆಯನ್ನು ಜಿಲ್ಲಾಡಳಿತ ವಹಿಸಿದೆ. ಒಟ್ಟಿನಲ್ಲಿ ಇನ್ಮುಂದೆಯಾದ್ರು ಸಾವಿರಾರು ವರ್ಷಗಳ ಇತಿಹಾಸವಿರುವ ದೇವಸ್ಥಾನಕ್ಕೆ ರಕ್ಷಣೆ ಸಿಗಲಿ ಎಂಬುದೇ ನಮ್ಮ ಆಶಯ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more