Mangaluru: ಕಾರಿಂಜೇಶ್ವರ ಸುತ್ತ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆಗೆ ಜಿಲ್ಲಾಡಳಿತದಿಂದ ಬ್ರೇಕ್

Mangaluru: ಕಾರಿಂಜೇಶ್ವರ ಸುತ್ತ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆಗೆ ಜಿಲ್ಲಾಡಳಿತದಿಂದ ಬ್ರೇಕ್

Published : Mar 04, 2022, 04:58 PM ISTUpdated : Mar 04, 2022, 05:45 PM IST

ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನ ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲಿ ಒಂದು. ಪ್ರಕೃತಿಯ ಮಡಿಲಲ್ಲಿ ಬೃಹದಾಕಾರವಾಗಿ ನಿಂತಿರುವ ಕಲ್ಲಿನ ಮೇಲೆ ಇರುವ ಈ ಕಾರಣಿಕ ದೇವಸ್ಥಾನದ ಆಸುಪಾಸಿನಲ್ಲಿ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆ ನಡೆಯುತಿತ್ತು. 
 

ದಕ್ಷಿಣ ಕನ್ನಡ (ಮಾ. 04):  ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನ ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲಿ ಒಂದು. ಪ್ರಕೃತಿಯ ಮಡಿಲಲ್ಲಿ ಬೃಹದಾಕಾರವಾಗಿ ನಿಂತಿರುವ ಕಲ್ಲಿನ ಮೇಲೆ ಇರುವ ಈ ಕಾರಣಿಕ ದೇವಸ್ಥಾನದ ಆಸುಪಾಸಿನಲ್ಲಿ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆ ನಡೆಯುತಿತ್ತು. 

ದೇಗುಲದ ನಾಲ್ಕು ಸುತ್ತಲೂ ಕಲ್ಲು ಗಣಿಗಾರಿಕೆಯ ಸ್ಫೋಟದಿಂದ ದೇಗುಲ ಬಿರುಕು ಬಿಟ್ಟಿತ್ತು. ಸ್ಫೋಟದ ಸಂದರ್ಭ ಭಗವಂತನ ವಿಗ್ರಹವೇ ಕಂಪನ ಆದಂತಾಗುತ್ತಿತ್ತು. ಹೀಗಾಗಿ ಕಾವಳ ಮೂಡೂರು ಗ್ರಾಮ ಮತ್ತು ಕಾವಳ ಪಡೂರು ಗ್ರಾಮಗಳಲ್ಲಿದ್ದ ಈ ಕಲ್ಲು ಗಣಿಗಾರಿಕೆ ವಿರುದ್ದ ಸ್ಥಳೀಯರು, ದೇವಸ್ಥಾನದ ಭಕ್ತಾಧಿಗಳು ಬೃಹತ್ ಪ್ರತಿಭಟನೆ, ಹೋರಾಟ ನಡೆಸಿದ್ದರು. ಇದೀಗ ದೂರಿನ ಹಿನ್ನೆಲೆಯಲ್ಲಿ 03 ಕಪ್ಪು ಕಲ್ಲು ಗಣಿಗಾರಿಕೆಗೆ ಜಿಲ್ಲಾಡಳಿತ ಬೀಗ ಜಡಿದಿದೆ.

ಒಂದು ಕಲ್ಲು ಕೋರೆಯಲ್ಲಿ ಪರವಾಣಿಗೆದಾರ ತನ್ನ ಪರವಾನಿಗೆಯ ವ್ಯಾಪ್ತಿ ಮೀರಿ ಸುಮಾರು 3.28 ಎಕ್ರೆ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದು ಜಿಲ್ಲಾಡಳಿತದ ತನಿಖೆ ಸಂದರ್ಭ ಗೊತ್ತಾಗಿತ್ತು. ಹೀಗಾಗಿ 8,12,87,198 ರೂ. ದಂಡ ಪಾವತಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೂಚಿಸಿದ್ದು, ದಂಡ ಪಾವತಿಸದ ಕಾರಣ ಆ ಗಣಿಗಾರಿಕೆಯನ್ನು ಬಂದ್ ಮಾಡಲಾಗಿದೆ. 

ಅನಧಿಕೃತ ಗಣಿಗಾರಿಕೆ ನಡೆಸಿರುವ ಮಾಲಿಕರ ವಿರುದ್ಧ ಬಂಟ್ವಾಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಹ ದಾಖಲಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಪರವಾನಿಗೆದಾರ ಗೋಮಾಳ ಜಾಗವನ್ನು ಅತಿಕ್ರಮಿಸಿ ಗಣಿಗಾರಿಕೆ ನಡೆಸುತ್ತಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಆ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಗುತ್ತಿಗೆದಾರ ಮೃತಪಟ್ಟಿದ್ದರು ಅದೇ ಗಣಿಗಾರಿಕೆ ಪ್ರದೇಶದಲ್ಲಿ ಅನಧಿಕೃತವಾಗಿ ಬೇರೆ ವ್ಯಕ್ತಿ ಗಣಿಗಾರಿಕೆ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅದನ್ನು ಸ್ಥಗಿತಗೊಳಿಸಲಾಗಿದೆ.

ಸದ್ಯ ದೇವಸ್ಥಾನದ ಆಸುಪಾಸು ಕಾರ್ಯಚರಿಸುತ್ತಿದ್ದ ಮೂರು ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಮುಂದೆ ದೇವಸ್ಥಾನಕ್ಕೆ ಯಾವುದೇ ಧಕ್ಕೆ ಭಾರದ ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆ ನಡೆಸದಂತೆ ಎಚ್ಚರಿಕೆಯನ್ನು ಜಿಲ್ಲಾಡಳಿತ ವಹಿಸಿದೆ. ಒಟ್ಟಿನಲ್ಲಿ ಇನ್ಮುಂದೆಯಾದ್ರು ಸಾವಿರಾರು ವರ್ಷಗಳ ಇತಿಹಾಸವಿರುವ ದೇವಸ್ಥಾನಕ್ಕೆ ರಕ್ಷಣೆ ಸಿಗಲಿ ಎಂಬುದೇ ನಮ್ಮ ಆಶಯ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more