Mangaluru: ಕಾರಿಂಜೇಶ್ವರ ಸುತ್ತ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆಗೆ ಜಿಲ್ಲಾಡಳಿತದಿಂದ ಬ್ರೇಕ್

Mangaluru: ಕಾರಿಂಜೇಶ್ವರ ಸುತ್ತ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆಗೆ ಜಿಲ್ಲಾಡಳಿತದಿಂದ ಬ್ರೇಕ್

Suvarna News   | Asianet News
Published : Mar 04, 2022, 04:58 PM ISTUpdated : Mar 04, 2022, 05:45 PM IST

ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನ ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲಿ ಒಂದು. ಪ್ರಕೃತಿಯ ಮಡಿಲಲ್ಲಿ ಬೃಹದಾಕಾರವಾಗಿ ನಿಂತಿರುವ ಕಲ್ಲಿನ ಮೇಲೆ ಇರುವ ಈ ಕಾರಣಿಕ ದೇವಸ್ಥಾನದ ಆಸುಪಾಸಿನಲ್ಲಿ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆ ನಡೆಯುತಿತ್ತು. 
 

ದಕ್ಷಿಣ ಕನ್ನಡ (ಮಾ. 04):  ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನ ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲಿ ಒಂದು. ಪ್ರಕೃತಿಯ ಮಡಿಲಲ್ಲಿ ಬೃಹದಾಕಾರವಾಗಿ ನಿಂತಿರುವ ಕಲ್ಲಿನ ಮೇಲೆ ಇರುವ ಈ ಕಾರಣಿಕ ದೇವಸ್ಥಾನದ ಆಸುಪಾಸಿನಲ್ಲಿ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆ ನಡೆಯುತಿತ್ತು. 

ದೇಗುಲದ ನಾಲ್ಕು ಸುತ್ತಲೂ ಕಲ್ಲು ಗಣಿಗಾರಿಕೆಯ ಸ್ಫೋಟದಿಂದ ದೇಗುಲ ಬಿರುಕು ಬಿಟ್ಟಿತ್ತು. ಸ್ಫೋಟದ ಸಂದರ್ಭ ಭಗವಂತನ ವಿಗ್ರಹವೇ ಕಂಪನ ಆದಂತಾಗುತ್ತಿತ್ತು. ಹೀಗಾಗಿ ಕಾವಳ ಮೂಡೂರು ಗ್ರಾಮ ಮತ್ತು ಕಾವಳ ಪಡೂರು ಗ್ರಾಮಗಳಲ್ಲಿದ್ದ ಈ ಕಲ್ಲು ಗಣಿಗಾರಿಕೆ ವಿರುದ್ದ ಸ್ಥಳೀಯರು, ದೇವಸ್ಥಾನದ ಭಕ್ತಾಧಿಗಳು ಬೃಹತ್ ಪ್ರತಿಭಟನೆ, ಹೋರಾಟ ನಡೆಸಿದ್ದರು. ಇದೀಗ ದೂರಿನ ಹಿನ್ನೆಲೆಯಲ್ಲಿ 03 ಕಪ್ಪು ಕಲ್ಲು ಗಣಿಗಾರಿಕೆಗೆ ಜಿಲ್ಲಾಡಳಿತ ಬೀಗ ಜಡಿದಿದೆ.

ಒಂದು ಕಲ್ಲು ಕೋರೆಯಲ್ಲಿ ಪರವಾಣಿಗೆದಾರ ತನ್ನ ಪರವಾನಿಗೆಯ ವ್ಯಾಪ್ತಿ ಮೀರಿ ಸುಮಾರು 3.28 ಎಕ್ರೆ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದು ಜಿಲ್ಲಾಡಳಿತದ ತನಿಖೆ ಸಂದರ್ಭ ಗೊತ್ತಾಗಿತ್ತು. ಹೀಗಾಗಿ 8,12,87,198 ರೂ. ದಂಡ ಪಾವತಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೂಚಿಸಿದ್ದು, ದಂಡ ಪಾವತಿಸದ ಕಾರಣ ಆ ಗಣಿಗಾರಿಕೆಯನ್ನು ಬಂದ್ ಮಾಡಲಾಗಿದೆ. 

ಅನಧಿಕೃತ ಗಣಿಗಾರಿಕೆ ನಡೆಸಿರುವ ಮಾಲಿಕರ ವಿರುದ್ಧ ಬಂಟ್ವಾಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಹ ದಾಖಲಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಪರವಾನಿಗೆದಾರ ಗೋಮಾಳ ಜಾಗವನ್ನು ಅತಿಕ್ರಮಿಸಿ ಗಣಿಗಾರಿಕೆ ನಡೆಸುತ್ತಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಆ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಗುತ್ತಿಗೆದಾರ ಮೃತಪಟ್ಟಿದ್ದರು ಅದೇ ಗಣಿಗಾರಿಕೆ ಪ್ರದೇಶದಲ್ಲಿ ಅನಧಿಕೃತವಾಗಿ ಬೇರೆ ವ್ಯಕ್ತಿ ಗಣಿಗಾರಿಕೆ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅದನ್ನು ಸ್ಥಗಿತಗೊಳಿಸಲಾಗಿದೆ.

ಸದ್ಯ ದೇವಸ್ಥಾನದ ಆಸುಪಾಸು ಕಾರ್ಯಚರಿಸುತ್ತಿದ್ದ ಮೂರು ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಮುಂದೆ ದೇವಸ್ಥಾನಕ್ಕೆ ಯಾವುದೇ ಧಕ್ಕೆ ಭಾರದ ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆ ನಡೆಸದಂತೆ ಎಚ್ಚರಿಕೆಯನ್ನು ಜಿಲ್ಲಾಡಳಿತ ವಹಿಸಿದೆ. ಒಟ್ಟಿನಲ್ಲಿ ಇನ್ಮುಂದೆಯಾದ್ರು ಸಾವಿರಾರು ವರ್ಷಗಳ ಇತಿಹಾಸವಿರುವ ದೇವಸ್ಥಾನಕ್ಕೆ ರಕ್ಷಣೆ ಸಿಗಲಿ ಎಂಬುದೇ ನಮ್ಮ ಆಶಯ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more