Mangaluru: ಕಾರಿಂಜೇಶ್ವರ ಸುತ್ತ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆಗೆ ಜಿಲ್ಲಾಡಳಿತದಿಂದ ಬ್ರೇಕ್

Mangaluru: ಕಾರಿಂಜೇಶ್ವರ ಸುತ್ತ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆಗೆ ಜಿಲ್ಲಾಡಳಿತದಿಂದ ಬ್ರೇಕ್

Suvarna News   | Asianet News
Published : Mar 04, 2022, 04:58 PM ISTUpdated : Mar 04, 2022, 05:45 PM IST

ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನ ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲಿ ಒಂದು. ಪ್ರಕೃತಿಯ ಮಡಿಲಲ್ಲಿ ಬೃಹದಾಕಾರವಾಗಿ ನಿಂತಿರುವ ಕಲ್ಲಿನ ಮೇಲೆ ಇರುವ ಈ ಕಾರಣಿಕ ದೇವಸ್ಥಾನದ ಆಸುಪಾಸಿನಲ್ಲಿ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆ ನಡೆಯುತಿತ್ತು. 
 

ದಕ್ಷಿಣ ಕನ್ನಡ (ಮಾ. 04):  ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನ ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲಿ ಒಂದು. ಪ್ರಕೃತಿಯ ಮಡಿಲಲ್ಲಿ ಬೃಹದಾಕಾರವಾಗಿ ನಿಂತಿರುವ ಕಲ್ಲಿನ ಮೇಲೆ ಇರುವ ಈ ಕಾರಣಿಕ ದೇವಸ್ಥಾನದ ಆಸುಪಾಸಿನಲ್ಲಿ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆ ನಡೆಯುತಿತ್ತು. 

ದೇಗುಲದ ನಾಲ್ಕು ಸುತ್ತಲೂ ಕಲ್ಲು ಗಣಿಗಾರಿಕೆಯ ಸ್ಫೋಟದಿಂದ ದೇಗುಲ ಬಿರುಕು ಬಿಟ್ಟಿತ್ತು. ಸ್ಫೋಟದ ಸಂದರ್ಭ ಭಗವಂತನ ವಿಗ್ರಹವೇ ಕಂಪನ ಆದಂತಾಗುತ್ತಿತ್ತು. ಹೀಗಾಗಿ ಕಾವಳ ಮೂಡೂರು ಗ್ರಾಮ ಮತ್ತು ಕಾವಳ ಪಡೂರು ಗ್ರಾಮಗಳಲ್ಲಿದ್ದ ಈ ಕಲ್ಲು ಗಣಿಗಾರಿಕೆ ವಿರುದ್ದ ಸ್ಥಳೀಯರು, ದೇವಸ್ಥಾನದ ಭಕ್ತಾಧಿಗಳು ಬೃಹತ್ ಪ್ರತಿಭಟನೆ, ಹೋರಾಟ ನಡೆಸಿದ್ದರು. ಇದೀಗ ದೂರಿನ ಹಿನ್ನೆಲೆಯಲ್ಲಿ 03 ಕಪ್ಪು ಕಲ್ಲು ಗಣಿಗಾರಿಕೆಗೆ ಜಿಲ್ಲಾಡಳಿತ ಬೀಗ ಜಡಿದಿದೆ.

ಒಂದು ಕಲ್ಲು ಕೋರೆಯಲ್ಲಿ ಪರವಾಣಿಗೆದಾರ ತನ್ನ ಪರವಾನಿಗೆಯ ವ್ಯಾಪ್ತಿ ಮೀರಿ ಸುಮಾರು 3.28 ಎಕ್ರೆ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದು ಜಿಲ್ಲಾಡಳಿತದ ತನಿಖೆ ಸಂದರ್ಭ ಗೊತ್ತಾಗಿತ್ತು. ಹೀಗಾಗಿ 8,12,87,198 ರೂ. ದಂಡ ಪಾವತಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೂಚಿಸಿದ್ದು, ದಂಡ ಪಾವತಿಸದ ಕಾರಣ ಆ ಗಣಿಗಾರಿಕೆಯನ್ನು ಬಂದ್ ಮಾಡಲಾಗಿದೆ. 

ಅನಧಿಕೃತ ಗಣಿಗಾರಿಕೆ ನಡೆಸಿರುವ ಮಾಲಿಕರ ವಿರುದ್ಧ ಬಂಟ್ವಾಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಹ ದಾಖಲಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಪರವಾನಿಗೆದಾರ ಗೋಮಾಳ ಜಾಗವನ್ನು ಅತಿಕ್ರಮಿಸಿ ಗಣಿಗಾರಿಕೆ ನಡೆಸುತ್ತಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಆ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಗುತ್ತಿಗೆದಾರ ಮೃತಪಟ್ಟಿದ್ದರು ಅದೇ ಗಣಿಗಾರಿಕೆ ಪ್ರದೇಶದಲ್ಲಿ ಅನಧಿಕೃತವಾಗಿ ಬೇರೆ ವ್ಯಕ್ತಿ ಗಣಿಗಾರಿಕೆ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅದನ್ನು ಸ್ಥಗಿತಗೊಳಿಸಲಾಗಿದೆ.

ಸದ್ಯ ದೇವಸ್ಥಾನದ ಆಸುಪಾಸು ಕಾರ್ಯಚರಿಸುತ್ತಿದ್ದ ಮೂರು ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಮುಂದೆ ದೇವಸ್ಥಾನಕ್ಕೆ ಯಾವುದೇ ಧಕ್ಕೆ ಭಾರದ ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆ ನಡೆಸದಂತೆ ಎಚ್ಚರಿಕೆಯನ್ನು ಜಿಲ್ಲಾಡಳಿತ ವಹಿಸಿದೆ. ಒಟ್ಟಿನಲ್ಲಿ ಇನ್ಮುಂದೆಯಾದ್ರು ಸಾವಿರಾರು ವರ್ಷಗಳ ಇತಿಹಾಸವಿರುವ ದೇವಸ್ಥಾನಕ್ಕೆ ರಕ್ಷಣೆ ಸಿಗಲಿ ಎಂಬುದೇ ನಮ್ಮ ಆಶಯ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more