ದೀಪಾವಳಿ ವಿಭಿನ್ನವಾಗಿ ಆಚರಿಸುವ ಗೌಳಿ ಸಮುದಾಯ: ಬಲಿಪಾಡ್ಯಮಿ ದಿನ ಎಮ್ಮೆ, ಕೋಣ ಸಿಂಗರಿಸಿ ಸಂಭ್ರಮ

ದೀಪಾವಳಿ ವಿಭಿನ್ನವಾಗಿ ಆಚರಿಸುವ ಗೌಳಿ ಸಮುದಾಯ: ಬಲಿಪಾಡ್ಯಮಿ ದಿನ ಎಮ್ಮೆ, ಕೋಣ ಸಿಂಗರಿಸಿ ಸಂಭ್ರಮ

Published : Nov 10, 2023, 12:19 PM IST

ಕುಂದಾನಗರಿ ಬೆಳಗಾವಿ ಬಹುಭಾಷಿಕರಿಗೆ ನೆಲೆ ಕೊಟ್ಟಿರುವ ಜಿಲ್ಲೆ. ಈ ಕಾರಣಕ್ಕೆ ಬೆಳಗಾವಿಯಲ್ಲಿ  ಬಹುಭಾಷಾ ಸಂಸ್ಕೃತಿಯನ್ನ ಕಾಣಬಹುದು. ಯಾವುದೇ ಹಬ್ಬ ಇದ್ದರೂ ವಿಭಿನ್ನವಾಗಿ ಆಚರಿಸಲಾಗುತ್ತೆ.

ಬೆಳಗಾವಿಯ(Belagavi) ಗೌಳಿ ಸಮುದಾಯ ದೀಪಾವಳಿ ಹಬ್ಬವನ್ನು ವಿಭಿನ್ನವಾಗಿ ಆಚರಿಸುತ್ತದೆ. ಪ್ರತಿ ವರ್ಷದ ಬಲಿಪಾಢ್ಯಮಿ(Balipadyami) ದಿನ ಎಮ್ಮೆ–ಕೋಣಗಳನ್ನು ಸಿಂಗರಿಸಿ ಸಂಭ್ರಮಿಸುವುದೇ ಇಲ್ಲಿನ ವಿಶಿಷ್ಟ ಆಚರಣೆ. ಬದುಕಿನ ಅವಿಭಾಜ್ಯ ಅಂಗವಾದ ಎಮ್ಮೆಗಳು ಜೀವನಪೂರ್ತಿ ತಮ್ಮನ್ನು ಸಾಕುತ್ವೆ. ಅವುಗಳಿಗೆ ಕೃತಜ್ಞತೆ ಸಲ್ಲಿಸಲು ಪಾಡ್ಯದಂದು ಈ ಹಬ್ಬ ಆಚರಿಸಲಾಗುತ್ತೆ. ಇಲ್ಲಿನ ಕ್ಯಾಂಪ್ ಪ್ರದೇಶ, ಟಿಳಕವಾಡಿ, ಮಂಗಳವಾರ ಪೇಟೆ, ಚವಾಟ ಗಲ್ಲಿ, ಸರ್ದಾರ್ ಮೈದಾನ ಸೇರಿ ಹಲವಡೆ ಎಮ್ಮೆಗಳ ಓಟದ ಸ್ಪರ್ಧೆಯನ್ನು ಆಚರಿಸ್ತಾರೆ. ಇನ್ನು ಬಲಿಪಾಡ್ಯಮಿ ದಿನ  ಮನೆಯ ಅಂಗಳದಲ್ಲಿ ಕಿಚ್ಚು ಹಾಯಿಸುವುದೇ ತಡ, ಯುವಕರು ಎಮ್ಮೆಗಳ ಮುಂದೆ ಓಡಲು ಶುರು ಮಾಡುತ್ತಾರೆ. ಅವರನ್ನು ಬೆನ್ನಟ್ಟಿ ಎಮ್ಮೆಗಳೂ ಓಡುತ್ವೆ. ಎಮ್ಮೆಗಳ ಕಾಲಿಗೆ ಕಟ್ಟಿದ ಗೆಜ್ಜೆ, ಕೊರಳಿಗೆ ಹಾಕಿದ ಕವಡೆಯ  ಶಬ್ಧ ಕೇಳುವುದೇ ಇಲ್ಲಿನ ಜನಕ್ಕೆ ಆನಂದ . ಸಿಳ್ಳೆ, ಚಪ್ಪಾಳೆ, ಕೇಕೆ ಹಾಕಿದಾಗ ಗೌಳಿಗರಲ್ಲಿ ಮತ್ತಷ್ಟು ಹುಮ್ಮಸ್ಸು ಮೂಡುತ್ತೆ. ಬಹುಭಾಷಾ ಸಂಸ್ಕೃತಿ ಹೊಂದಿರುವ ಬೆಳಗಾವಿಯಲ್ಲಿ ಗುಜರಾತಿಗಳು, ಬಂಗಾಳಿಗಳು, ಬಿಹಾರಿಗಳು ಸೇರಿದಂತೆ ಉತ್ತರ ಭಾರತೀಯರು ಸಾವಿರಾರು ಸಂಖ್ಯೆಯಲ್ಲಿ ನೆಲೆಸಿದ್ದಾರೆ. ದೀಪಾವಳಿಯಲ್ಲಿ ಸ್ಥಳೀಯ ಧಾರ್ಮಿಕ ಪದ್ಧತಿ ಅನುಸರಿಸುವ ಜತೆಗೆ, ತಮ್ಮ ನಾಡಿನ ಸಂಸ್ಕೃತಿಯನ್ನೂ ಅನಾವರಣಗೊಳಿಸುತ್ತಾರೆ.

ಇದನ್ನೂ ವೀಕ್ಷಿಸಿ:  ಬೆಳಕಿನ ಹಬ್ಬ ದೀಪಾವಳಿಗೆ ರಾಜ್ಯಾದ್ಯಂತ ಸಿದ್ಧತೆ: ಬೆಂಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಿದ್ಧತೆ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more