ದೀಪಾವಳಿ ವಿಭಿನ್ನವಾಗಿ ಆಚರಿಸುವ ಗೌಳಿ ಸಮುದಾಯ: ಬಲಿಪಾಡ್ಯಮಿ ದಿನ ಎಮ್ಮೆ, ಕೋಣ ಸಿಂಗರಿಸಿ ಸಂಭ್ರಮ

ದೀಪಾವಳಿ ವಿಭಿನ್ನವಾಗಿ ಆಚರಿಸುವ ಗೌಳಿ ಸಮುದಾಯ: ಬಲಿಪಾಡ್ಯಮಿ ದಿನ ಎಮ್ಮೆ, ಕೋಣ ಸಿಂಗರಿಸಿ ಸಂಭ್ರಮ

Published : Nov 10, 2023, 12:19 PM IST

ಕುಂದಾನಗರಿ ಬೆಳಗಾವಿ ಬಹುಭಾಷಿಕರಿಗೆ ನೆಲೆ ಕೊಟ್ಟಿರುವ ಜಿಲ್ಲೆ. ಈ ಕಾರಣಕ್ಕೆ ಬೆಳಗಾವಿಯಲ್ಲಿ  ಬಹುಭಾಷಾ ಸಂಸ್ಕೃತಿಯನ್ನ ಕಾಣಬಹುದು. ಯಾವುದೇ ಹಬ್ಬ ಇದ್ದರೂ ವಿಭಿನ್ನವಾಗಿ ಆಚರಿಸಲಾಗುತ್ತೆ.

ಬೆಳಗಾವಿಯ(Belagavi) ಗೌಳಿ ಸಮುದಾಯ ದೀಪಾವಳಿ ಹಬ್ಬವನ್ನು ವಿಭಿನ್ನವಾಗಿ ಆಚರಿಸುತ್ತದೆ. ಪ್ರತಿ ವರ್ಷದ ಬಲಿಪಾಢ್ಯಮಿ(Balipadyami) ದಿನ ಎಮ್ಮೆ–ಕೋಣಗಳನ್ನು ಸಿಂಗರಿಸಿ ಸಂಭ್ರಮಿಸುವುದೇ ಇಲ್ಲಿನ ವಿಶಿಷ್ಟ ಆಚರಣೆ. ಬದುಕಿನ ಅವಿಭಾಜ್ಯ ಅಂಗವಾದ ಎಮ್ಮೆಗಳು ಜೀವನಪೂರ್ತಿ ತಮ್ಮನ್ನು ಸಾಕುತ್ವೆ. ಅವುಗಳಿಗೆ ಕೃತಜ್ಞತೆ ಸಲ್ಲಿಸಲು ಪಾಡ್ಯದಂದು ಈ ಹಬ್ಬ ಆಚರಿಸಲಾಗುತ್ತೆ. ಇಲ್ಲಿನ ಕ್ಯಾಂಪ್ ಪ್ರದೇಶ, ಟಿಳಕವಾಡಿ, ಮಂಗಳವಾರ ಪೇಟೆ, ಚವಾಟ ಗಲ್ಲಿ, ಸರ್ದಾರ್ ಮೈದಾನ ಸೇರಿ ಹಲವಡೆ ಎಮ್ಮೆಗಳ ಓಟದ ಸ್ಪರ್ಧೆಯನ್ನು ಆಚರಿಸ್ತಾರೆ. ಇನ್ನು ಬಲಿಪಾಡ್ಯಮಿ ದಿನ  ಮನೆಯ ಅಂಗಳದಲ್ಲಿ ಕಿಚ್ಚು ಹಾಯಿಸುವುದೇ ತಡ, ಯುವಕರು ಎಮ್ಮೆಗಳ ಮುಂದೆ ಓಡಲು ಶುರು ಮಾಡುತ್ತಾರೆ. ಅವರನ್ನು ಬೆನ್ನಟ್ಟಿ ಎಮ್ಮೆಗಳೂ ಓಡುತ್ವೆ. ಎಮ್ಮೆಗಳ ಕಾಲಿಗೆ ಕಟ್ಟಿದ ಗೆಜ್ಜೆ, ಕೊರಳಿಗೆ ಹಾಕಿದ ಕವಡೆಯ  ಶಬ್ಧ ಕೇಳುವುದೇ ಇಲ್ಲಿನ ಜನಕ್ಕೆ ಆನಂದ . ಸಿಳ್ಳೆ, ಚಪ್ಪಾಳೆ, ಕೇಕೆ ಹಾಕಿದಾಗ ಗೌಳಿಗರಲ್ಲಿ ಮತ್ತಷ್ಟು ಹುಮ್ಮಸ್ಸು ಮೂಡುತ್ತೆ. ಬಹುಭಾಷಾ ಸಂಸ್ಕೃತಿ ಹೊಂದಿರುವ ಬೆಳಗಾವಿಯಲ್ಲಿ ಗುಜರಾತಿಗಳು, ಬಂಗಾಳಿಗಳು, ಬಿಹಾರಿಗಳು ಸೇರಿದಂತೆ ಉತ್ತರ ಭಾರತೀಯರು ಸಾವಿರಾರು ಸಂಖ್ಯೆಯಲ್ಲಿ ನೆಲೆಸಿದ್ದಾರೆ. ದೀಪಾವಳಿಯಲ್ಲಿ ಸ್ಥಳೀಯ ಧಾರ್ಮಿಕ ಪದ್ಧತಿ ಅನುಸರಿಸುವ ಜತೆಗೆ, ತಮ್ಮ ನಾಡಿನ ಸಂಸ್ಕೃತಿಯನ್ನೂ ಅನಾವರಣಗೊಳಿಸುತ್ತಾರೆ.

ಇದನ್ನೂ ವೀಕ್ಷಿಸಿ:  ಬೆಳಕಿನ ಹಬ್ಬ ದೀಪಾವಳಿಗೆ ರಾಜ್ಯಾದ್ಯಂತ ಸಿದ್ಧತೆ: ಬೆಂಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಿದ್ಧತೆ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more