ದೀಪಾವಳಿ ವಿಭಿನ್ನವಾಗಿ ಆಚರಿಸುವ ಗೌಳಿ ಸಮುದಾಯ: ಬಲಿಪಾಡ್ಯಮಿ ದಿನ ಎಮ್ಮೆ, ಕೋಣ ಸಿಂಗರಿಸಿ ಸಂಭ್ರಮ

ದೀಪಾವಳಿ ವಿಭಿನ್ನವಾಗಿ ಆಚರಿಸುವ ಗೌಳಿ ಸಮುದಾಯ: ಬಲಿಪಾಡ್ಯಮಿ ದಿನ ಎಮ್ಮೆ, ಕೋಣ ಸಿಂಗರಿಸಿ ಸಂಭ್ರಮ

Published : Nov 10, 2023, 12:19 PM IST

ಕುಂದಾನಗರಿ ಬೆಳಗಾವಿ ಬಹುಭಾಷಿಕರಿಗೆ ನೆಲೆ ಕೊಟ್ಟಿರುವ ಜಿಲ್ಲೆ. ಈ ಕಾರಣಕ್ಕೆ ಬೆಳಗಾವಿಯಲ್ಲಿ  ಬಹುಭಾಷಾ ಸಂಸ್ಕೃತಿಯನ್ನ ಕಾಣಬಹುದು. ಯಾವುದೇ ಹಬ್ಬ ಇದ್ದರೂ ವಿಭಿನ್ನವಾಗಿ ಆಚರಿಸಲಾಗುತ್ತೆ.

ಬೆಳಗಾವಿಯ(Belagavi) ಗೌಳಿ ಸಮುದಾಯ ದೀಪಾವಳಿ ಹಬ್ಬವನ್ನು ವಿಭಿನ್ನವಾಗಿ ಆಚರಿಸುತ್ತದೆ. ಪ್ರತಿ ವರ್ಷದ ಬಲಿಪಾಢ್ಯಮಿ(Balipadyami) ದಿನ ಎಮ್ಮೆ–ಕೋಣಗಳನ್ನು ಸಿಂಗರಿಸಿ ಸಂಭ್ರಮಿಸುವುದೇ ಇಲ್ಲಿನ ವಿಶಿಷ್ಟ ಆಚರಣೆ. ಬದುಕಿನ ಅವಿಭಾಜ್ಯ ಅಂಗವಾದ ಎಮ್ಮೆಗಳು ಜೀವನಪೂರ್ತಿ ತಮ್ಮನ್ನು ಸಾಕುತ್ವೆ. ಅವುಗಳಿಗೆ ಕೃತಜ್ಞತೆ ಸಲ್ಲಿಸಲು ಪಾಡ್ಯದಂದು ಈ ಹಬ್ಬ ಆಚರಿಸಲಾಗುತ್ತೆ. ಇಲ್ಲಿನ ಕ್ಯಾಂಪ್ ಪ್ರದೇಶ, ಟಿಳಕವಾಡಿ, ಮಂಗಳವಾರ ಪೇಟೆ, ಚವಾಟ ಗಲ್ಲಿ, ಸರ್ದಾರ್ ಮೈದಾನ ಸೇರಿ ಹಲವಡೆ ಎಮ್ಮೆಗಳ ಓಟದ ಸ್ಪರ್ಧೆಯನ್ನು ಆಚರಿಸ್ತಾರೆ. ಇನ್ನು ಬಲಿಪಾಡ್ಯಮಿ ದಿನ  ಮನೆಯ ಅಂಗಳದಲ್ಲಿ ಕಿಚ್ಚು ಹಾಯಿಸುವುದೇ ತಡ, ಯುವಕರು ಎಮ್ಮೆಗಳ ಮುಂದೆ ಓಡಲು ಶುರು ಮಾಡುತ್ತಾರೆ. ಅವರನ್ನು ಬೆನ್ನಟ್ಟಿ ಎಮ್ಮೆಗಳೂ ಓಡುತ್ವೆ. ಎಮ್ಮೆಗಳ ಕಾಲಿಗೆ ಕಟ್ಟಿದ ಗೆಜ್ಜೆ, ಕೊರಳಿಗೆ ಹಾಕಿದ ಕವಡೆಯ  ಶಬ್ಧ ಕೇಳುವುದೇ ಇಲ್ಲಿನ ಜನಕ್ಕೆ ಆನಂದ . ಸಿಳ್ಳೆ, ಚಪ್ಪಾಳೆ, ಕೇಕೆ ಹಾಕಿದಾಗ ಗೌಳಿಗರಲ್ಲಿ ಮತ್ತಷ್ಟು ಹುಮ್ಮಸ್ಸು ಮೂಡುತ್ತೆ. ಬಹುಭಾಷಾ ಸಂಸ್ಕೃತಿ ಹೊಂದಿರುವ ಬೆಳಗಾವಿಯಲ್ಲಿ ಗುಜರಾತಿಗಳು, ಬಂಗಾಳಿಗಳು, ಬಿಹಾರಿಗಳು ಸೇರಿದಂತೆ ಉತ್ತರ ಭಾರತೀಯರು ಸಾವಿರಾರು ಸಂಖ್ಯೆಯಲ್ಲಿ ನೆಲೆಸಿದ್ದಾರೆ. ದೀಪಾವಳಿಯಲ್ಲಿ ಸ್ಥಳೀಯ ಧಾರ್ಮಿಕ ಪದ್ಧತಿ ಅನುಸರಿಸುವ ಜತೆಗೆ, ತಮ್ಮ ನಾಡಿನ ಸಂಸ್ಕೃತಿಯನ್ನೂ ಅನಾವರಣಗೊಳಿಸುತ್ತಾರೆ.

ಇದನ್ನೂ ವೀಕ್ಷಿಸಿ:  ಬೆಳಕಿನ ಹಬ್ಬ ದೀಪಾವಳಿಗೆ ರಾಜ್ಯಾದ್ಯಂತ ಸಿದ್ಧತೆ: ಬೆಂಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಿದ್ಧತೆ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more