ದೀಪಾವಳಿ ವಿಭಿನ್ನವಾಗಿ ಆಚರಿಸುವ ಗೌಳಿ ಸಮುದಾಯ: ಬಲಿಪಾಡ್ಯಮಿ ದಿನ ಎಮ್ಮೆ, ಕೋಣ ಸಿಂಗರಿಸಿ ಸಂಭ್ರಮ

ದೀಪಾವಳಿ ವಿಭಿನ್ನವಾಗಿ ಆಚರಿಸುವ ಗೌಳಿ ಸಮುದಾಯ: ಬಲಿಪಾಡ್ಯಮಿ ದಿನ ಎಮ್ಮೆ, ಕೋಣ ಸಿಂಗರಿಸಿ ಸಂಭ್ರಮ

Published : Nov 10, 2023, 12:19 PM IST

ಕುಂದಾನಗರಿ ಬೆಳಗಾವಿ ಬಹುಭಾಷಿಕರಿಗೆ ನೆಲೆ ಕೊಟ್ಟಿರುವ ಜಿಲ್ಲೆ. ಈ ಕಾರಣಕ್ಕೆ ಬೆಳಗಾವಿಯಲ್ಲಿ  ಬಹುಭಾಷಾ ಸಂಸ್ಕೃತಿಯನ್ನ ಕಾಣಬಹುದು. ಯಾವುದೇ ಹಬ್ಬ ಇದ್ದರೂ ವಿಭಿನ್ನವಾಗಿ ಆಚರಿಸಲಾಗುತ್ತೆ.

ಬೆಳಗಾವಿಯ(Belagavi) ಗೌಳಿ ಸಮುದಾಯ ದೀಪಾವಳಿ ಹಬ್ಬವನ್ನು ವಿಭಿನ್ನವಾಗಿ ಆಚರಿಸುತ್ತದೆ. ಪ್ರತಿ ವರ್ಷದ ಬಲಿಪಾಢ್ಯಮಿ(Balipadyami) ದಿನ ಎಮ್ಮೆ–ಕೋಣಗಳನ್ನು ಸಿಂಗರಿಸಿ ಸಂಭ್ರಮಿಸುವುದೇ ಇಲ್ಲಿನ ವಿಶಿಷ್ಟ ಆಚರಣೆ. ಬದುಕಿನ ಅವಿಭಾಜ್ಯ ಅಂಗವಾದ ಎಮ್ಮೆಗಳು ಜೀವನಪೂರ್ತಿ ತಮ್ಮನ್ನು ಸಾಕುತ್ವೆ. ಅವುಗಳಿಗೆ ಕೃತಜ್ಞತೆ ಸಲ್ಲಿಸಲು ಪಾಡ್ಯದಂದು ಈ ಹಬ್ಬ ಆಚರಿಸಲಾಗುತ್ತೆ. ಇಲ್ಲಿನ ಕ್ಯಾಂಪ್ ಪ್ರದೇಶ, ಟಿಳಕವಾಡಿ, ಮಂಗಳವಾರ ಪೇಟೆ, ಚವಾಟ ಗಲ್ಲಿ, ಸರ್ದಾರ್ ಮೈದಾನ ಸೇರಿ ಹಲವಡೆ ಎಮ್ಮೆಗಳ ಓಟದ ಸ್ಪರ್ಧೆಯನ್ನು ಆಚರಿಸ್ತಾರೆ. ಇನ್ನು ಬಲಿಪಾಡ್ಯಮಿ ದಿನ  ಮನೆಯ ಅಂಗಳದಲ್ಲಿ ಕಿಚ್ಚು ಹಾಯಿಸುವುದೇ ತಡ, ಯುವಕರು ಎಮ್ಮೆಗಳ ಮುಂದೆ ಓಡಲು ಶುರು ಮಾಡುತ್ತಾರೆ. ಅವರನ್ನು ಬೆನ್ನಟ್ಟಿ ಎಮ್ಮೆಗಳೂ ಓಡುತ್ವೆ. ಎಮ್ಮೆಗಳ ಕಾಲಿಗೆ ಕಟ್ಟಿದ ಗೆಜ್ಜೆ, ಕೊರಳಿಗೆ ಹಾಕಿದ ಕವಡೆಯ  ಶಬ್ಧ ಕೇಳುವುದೇ ಇಲ್ಲಿನ ಜನಕ್ಕೆ ಆನಂದ . ಸಿಳ್ಳೆ, ಚಪ್ಪಾಳೆ, ಕೇಕೆ ಹಾಕಿದಾಗ ಗೌಳಿಗರಲ್ಲಿ ಮತ್ತಷ್ಟು ಹುಮ್ಮಸ್ಸು ಮೂಡುತ್ತೆ. ಬಹುಭಾಷಾ ಸಂಸ್ಕೃತಿ ಹೊಂದಿರುವ ಬೆಳಗಾವಿಯಲ್ಲಿ ಗುಜರಾತಿಗಳು, ಬಂಗಾಳಿಗಳು, ಬಿಹಾರಿಗಳು ಸೇರಿದಂತೆ ಉತ್ತರ ಭಾರತೀಯರು ಸಾವಿರಾರು ಸಂಖ್ಯೆಯಲ್ಲಿ ನೆಲೆಸಿದ್ದಾರೆ. ದೀಪಾವಳಿಯಲ್ಲಿ ಸ್ಥಳೀಯ ಧಾರ್ಮಿಕ ಪದ್ಧತಿ ಅನುಸರಿಸುವ ಜತೆಗೆ, ತಮ್ಮ ನಾಡಿನ ಸಂಸ್ಕೃತಿಯನ್ನೂ ಅನಾವರಣಗೊಳಿಸುತ್ತಾರೆ.

ಇದನ್ನೂ ವೀಕ್ಷಿಸಿ:  ಬೆಳಕಿನ ಹಬ್ಬ ದೀಪಾವಳಿಗೆ ರಾಜ್ಯಾದ್ಯಂತ ಸಿದ್ಧತೆ: ಬೆಂಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಿದ್ಧತೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more