ದೀಪಾವಳಿ ವಿಭಿನ್ನವಾಗಿ ಆಚರಿಸುವ ಗೌಳಿ ಸಮುದಾಯ: ಬಲಿಪಾಡ್ಯಮಿ ದಿನ ಎಮ್ಮೆ, ಕೋಣ ಸಿಂಗರಿಸಿ ಸಂಭ್ರಮ

ದೀಪಾವಳಿ ವಿಭಿನ್ನವಾಗಿ ಆಚರಿಸುವ ಗೌಳಿ ಸಮುದಾಯ: ಬಲಿಪಾಡ್ಯಮಿ ದಿನ ಎಮ್ಮೆ, ಕೋಣ ಸಿಂಗರಿಸಿ ಸಂಭ್ರಮ

Published : Nov 10, 2023, 12:19 PM IST

ಕುಂದಾನಗರಿ ಬೆಳಗಾವಿ ಬಹುಭಾಷಿಕರಿಗೆ ನೆಲೆ ಕೊಟ್ಟಿರುವ ಜಿಲ್ಲೆ. ಈ ಕಾರಣಕ್ಕೆ ಬೆಳಗಾವಿಯಲ್ಲಿ  ಬಹುಭಾಷಾ ಸಂಸ್ಕೃತಿಯನ್ನ ಕಾಣಬಹುದು. ಯಾವುದೇ ಹಬ್ಬ ಇದ್ದರೂ ವಿಭಿನ್ನವಾಗಿ ಆಚರಿಸಲಾಗುತ್ತೆ.

ಬೆಳಗಾವಿಯ(Belagavi) ಗೌಳಿ ಸಮುದಾಯ ದೀಪಾವಳಿ ಹಬ್ಬವನ್ನು ವಿಭಿನ್ನವಾಗಿ ಆಚರಿಸುತ್ತದೆ. ಪ್ರತಿ ವರ್ಷದ ಬಲಿಪಾಢ್ಯಮಿ(Balipadyami) ದಿನ ಎಮ್ಮೆ–ಕೋಣಗಳನ್ನು ಸಿಂಗರಿಸಿ ಸಂಭ್ರಮಿಸುವುದೇ ಇಲ್ಲಿನ ವಿಶಿಷ್ಟ ಆಚರಣೆ. ಬದುಕಿನ ಅವಿಭಾಜ್ಯ ಅಂಗವಾದ ಎಮ್ಮೆಗಳು ಜೀವನಪೂರ್ತಿ ತಮ್ಮನ್ನು ಸಾಕುತ್ವೆ. ಅವುಗಳಿಗೆ ಕೃತಜ್ಞತೆ ಸಲ್ಲಿಸಲು ಪಾಡ್ಯದಂದು ಈ ಹಬ್ಬ ಆಚರಿಸಲಾಗುತ್ತೆ. ಇಲ್ಲಿನ ಕ್ಯಾಂಪ್ ಪ್ರದೇಶ, ಟಿಳಕವಾಡಿ, ಮಂಗಳವಾರ ಪೇಟೆ, ಚವಾಟ ಗಲ್ಲಿ, ಸರ್ದಾರ್ ಮೈದಾನ ಸೇರಿ ಹಲವಡೆ ಎಮ್ಮೆಗಳ ಓಟದ ಸ್ಪರ್ಧೆಯನ್ನು ಆಚರಿಸ್ತಾರೆ. ಇನ್ನು ಬಲಿಪಾಡ್ಯಮಿ ದಿನ  ಮನೆಯ ಅಂಗಳದಲ್ಲಿ ಕಿಚ್ಚು ಹಾಯಿಸುವುದೇ ತಡ, ಯುವಕರು ಎಮ್ಮೆಗಳ ಮುಂದೆ ಓಡಲು ಶುರು ಮಾಡುತ್ತಾರೆ. ಅವರನ್ನು ಬೆನ್ನಟ್ಟಿ ಎಮ್ಮೆಗಳೂ ಓಡುತ್ವೆ. ಎಮ್ಮೆಗಳ ಕಾಲಿಗೆ ಕಟ್ಟಿದ ಗೆಜ್ಜೆ, ಕೊರಳಿಗೆ ಹಾಕಿದ ಕವಡೆಯ  ಶಬ್ಧ ಕೇಳುವುದೇ ಇಲ್ಲಿನ ಜನಕ್ಕೆ ಆನಂದ . ಸಿಳ್ಳೆ, ಚಪ್ಪಾಳೆ, ಕೇಕೆ ಹಾಕಿದಾಗ ಗೌಳಿಗರಲ್ಲಿ ಮತ್ತಷ್ಟು ಹುಮ್ಮಸ್ಸು ಮೂಡುತ್ತೆ. ಬಹುಭಾಷಾ ಸಂಸ್ಕೃತಿ ಹೊಂದಿರುವ ಬೆಳಗಾವಿಯಲ್ಲಿ ಗುಜರಾತಿಗಳು, ಬಂಗಾಳಿಗಳು, ಬಿಹಾರಿಗಳು ಸೇರಿದಂತೆ ಉತ್ತರ ಭಾರತೀಯರು ಸಾವಿರಾರು ಸಂಖ್ಯೆಯಲ್ಲಿ ನೆಲೆಸಿದ್ದಾರೆ. ದೀಪಾವಳಿಯಲ್ಲಿ ಸ್ಥಳೀಯ ಧಾರ್ಮಿಕ ಪದ್ಧತಿ ಅನುಸರಿಸುವ ಜತೆಗೆ, ತಮ್ಮ ನಾಡಿನ ಸಂಸ್ಕೃತಿಯನ್ನೂ ಅನಾವರಣಗೊಳಿಸುತ್ತಾರೆ.

ಇದನ್ನೂ ವೀಕ್ಷಿಸಿ:  ಬೆಳಕಿನ ಹಬ್ಬ ದೀಪಾವಳಿಗೆ ರಾಜ್ಯಾದ್ಯಂತ ಸಿದ್ಧತೆ: ಬೆಂಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಿದ್ಧತೆ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more