ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ

ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ

Published : Nov 14, 2023, 10:34 AM IST

ದೀಪಾವಳಿ ಹಬ್ಬಕ್ಕೆ ಎಲ್ಲೆಲ್ಲೂ ದೀಪ, ಪಟಾಕಿಗಳ ಸಂಭ್ರಮವಿರುತ್ತದೆ. ಆದ್ರೆ ಕೊಪ್ಪಳದಲ್ಲಿ ಕುರಿಗಾಹಿಗಳು ದೀಪದ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ. ಮನೆ ಮಂದಿಯೆಲ್ಲ ಕುರಿಗಳನ್ನು ಪೂಜಿಸಿ, ಕುರಿ ಹಟ್ಟಿಯಲ್ಲೇ ಊಟ ಸವಿಯುತ್ತಾರೆ. 
 

ಕುರಿಗಳಿಗೆ ಬಣ್ಣದ ಅಲಂಕಾರ.. ಹಟ್ಟಿಗೆ ತೆಂಗಿನಗರಿ, ಕಬ್ಬಿನಿಂದ ಸಿಂಗಾರ. ಮನೆ ಮಂದಿಯೆಲ್ಲ ಸೇರಿ ಪೂಜಿಸಿ, ಹಬ್ಬದ ಊಟ ಸವಿಯೋಯೋದೇ ಚೆಂದ.ಇದು ಉತ್ತರ ಕರ್ನಾಟಕದ ದೀಪಾಳಿಯ ಸ್ಪೆಷಲ್. ದೀಪಾವಳಿ (Deepavali) ಬಂತಂದ್ರೆ ಸಾಕು ಕುರಿಗಾಹಿಗಳಿಗೆ(shepherds) ಖುಷಿಯೋ ಖುಷಿ. ಮಕ್ಕಳಿಗಂತೂ ಕುರಿಗಳನ್ನ ಅಲಂಕರಿಸೋದೇ ಒಂದು ಸಂಭ್ರಮ. ಹೌದು ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ದೀಪಾವಳಿ ದಿನ ಕುರಿಗಾಹಿಗಳು ಇಂಥದ್ದೊಂದು ವಿಭಿನ್ನ ಆಚರಣೆ ಮಾಡಿಕೊಂಡು  ಬಂದಿದ್ದಾರೆ. ಬಲಿ ಪಾಡ್ಯ ದಿನ ತಮ್ಮ ಹಟ್ಟಿಯಲ್ಲಿನ ಕುರಿಗಳಿಗೆಲ್ಲ ಬಣ್ಣ ಹಚ್ಚಿ, ಅಲಂಕಾರ ಮಾಡಿ, ಹೂವಿನ ಹಾರ ಹಾಕುತ್ತಾರೆ. ಕುರಿ ಹಟ್ಟಿಯನ್ನೂ ಅಲಂಕರಿಸಿ ಪೂಜೆ ಮಾಡುತ್ತಾರೆ. ದೇವರಾದ ಬೀರಪ್ಪ ನೀನೇ ಎಂದು ಕುರಿಗಳಿಗೆ ಪೂಜಿಸುವ ಸಂಪ್ರದಾಯ ತಲೆತಲಾಂತರಗಳಿಂದ ನಡೆದುಕೊಂಡು ಬಂದಿದೆ. ಗಂಡಸರು, ಮಕ್ಕಳೆಲ್ಲ ಕುರಿ ಹಟ್ಟಿ, ಕುರಿಗಳನ್ನು ಸಿಂಗರಿಸಿದ್ರೆ, ಇತ್ತ ಹೆಣ್ಣು ಮಕ್ಕಳು ತರಹೇವಾರಿ ಅಡುಗೆ ಸಿದ್ಧಪಡಿಸುತ್ತಾರೆ. ಮನೆಯಲ್ಲಿ  ಸಿದ್ಧಪಡಿಸಿದ ಹೋಳಿಗೆ, ಹುಗ್ಗಿ, ಸಿಹಿ ಪದಾರ್ಥಗಳನ್ನು ಕಟ್ಟಿಕೊಂಡು ಕುರಿ ಹಟ್ಟಿಗೆ ಬರ್ತಾರೆ. ಕುಟುಂಬ ಸದಸ್ಯರೆಲ್ಲಾ ಒಟ್ಟುಗೂಡಿ ಕುರಿಗಳಿಗೆ ಪೂಜಿಸಿ, ಲಕ್ಷ್ಮೀಗೆ ನಮಿಸುತ್ತಾರೆ.. ಜಾನಪದ ಹಾಡುಗಳನ್ನು ಹಾಡಿ ಸಂಭ್ರಮಿಸುತ್ತಾರೆ. ಬಳಿಕ ಮನೆಯಿಂದ ತಂದ ಅಡುಗೆಯನ್ನು ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಊಟ ಮಾಡುತ್ತಾರೆ.. ಇಡೀ ದಿನ ಹಟ್ಟಿಯಲ್ಲೇ ಕಾಲ ಕಳೆಯುತ್ತಾ ಸಂಭ್ರಮಿಸುತ್ತಾರೆ.

ಇದನ್ನೂ ವೀಕ್ಷಿಸಿ:  ಉತ್ತರಕನ್ನಡದಲ್ಲಿ ಬಲಿ ಚಕ್ರವರ್ತಿಯ ವಿಶಿಷ್ಟ ಆರಾಧನೆ: ಪ್ರಾದೇಶಿಕವಾಗಿ ಭಿನ್ನವಾಗಿ ಬೆಳಕಿನ ಹಬ್ಬ ಆಚರಣೆ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more