ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ

ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ

Published : Nov 14, 2023, 10:34 AM IST

ದೀಪಾವಳಿ ಹಬ್ಬಕ್ಕೆ ಎಲ್ಲೆಲ್ಲೂ ದೀಪ, ಪಟಾಕಿಗಳ ಸಂಭ್ರಮವಿರುತ್ತದೆ. ಆದ್ರೆ ಕೊಪ್ಪಳದಲ್ಲಿ ಕುರಿಗಾಹಿಗಳು ದೀಪದ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ. ಮನೆ ಮಂದಿಯೆಲ್ಲ ಕುರಿಗಳನ್ನು ಪೂಜಿಸಿ, ಕುರಿ ಹಟ್ಟಿಯಲ್ಲೇ ಊಟ ಸವಿಯುತ್ತಾರೆ. 
 

ಕುರಿಗಳಿಗೆ ಬಣ್ಣದ ಅಲಂಕಾರ.. ಹಟ್ಟಿಗೆ ತೆಂಗಿನಗರಿ, ಕಬ್ಬಿನಿಂದ ಸಿಂಗಾರ. ಮನೆ ಮಂದಿಯೆಲ್ಲ ಸೇರಿ ಪೂಜಿಸಿ, ಹಬ್ಬದ ಊಟ ಸವಿಯೋಯೋದೇ ಚೆಂದ.ಇದು ಉತ್ತರ ಕರ್ನಾಟಕದ ದೀಪಾಳಿಯ ಸ್ಪೆಷಲ್. ದೀಪಾವಳಿ (Deepavali) ಬಂತಂದ್ರೆ ಸಾಕು ಕುರಿಗಾಹಿಗಳಿಗೆ(shepherds) ಖುಷಿಯೋ ಖುಷಿ. ಮಕ್ಕಳಿಗಂತೂ ಕುರಿಗಳನ್ನ ಅಲಂಕರಿಸೋದೇ ಒಂದು ಸಂಭ್ರಮ. ಹೌದು ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ದೀಪಾವಳಿ ದಿನ ಕುರಿಗಾಹಿಗಳು ಇಂಥದ್ದೊಂದು ವಿಭಿನ್ನ ಆಚರಣೆ ಮಾಡಿಕೊಂಡು  ಬಂದಿದ್ದಾರೆ. ಬಲಿ ಪಾಡ್ಯ ದಿನ ತಮ್ಮ ಹಟ್ಟಿಯಲ್ಲಿನ ಕುರಿಗಳಿಗೆಲ್ಲ ಬಣ್ಣ ಹಚ್ಚಿ, ಅಲಂಕಾರ ಮಾಡಿ, ಹೂವಿನ ಹಾರ ಹಾಕುತ್ತಾರೆ. ಕುರಿ ಹಟ್ಟಿಯನ್ನೂ ಅಲಂಕರಿಸಿ ಪೂಜೆ ಮಾಡುತ್ತಾರೆ. ದೇವರಾದ ಬೀರಪ್ಪ ನೀನೇ ಎಂದು ಕುರಿಗಳಿಗೆ ಪೂಜಿಸುವ ಸಂಪ್ರದಾಯ ತಲೆತಲಾಂತರಗಳಿಂದ ನಡೆದುಕೊಂಡು ಬಂದಿದೆ. ಗಂಡಸರು, ಮಕ್ಕಳೆಲ್ಲ ಕುರಿ ಹಟ್ಟಿ, ಕುರಿಗಳನ್ನು ಸಿಂಗರಿಸಿದ್ರೆ, ಇತ್ತ ಹೆಣ್ಣು ಮಕ್ಕಳು ತರಹೇವಾರಿ ಅಡುಗೆ ಸಿದ್ಧಪಡಿಸುತ್ತಾರೆ. ಮನೆಯಲ್ಲಿ  ಸಿದ್ಧಪಡಿಸಿದ ಹೋಳಿಗೆ, ಹುಗ್ಗಿ, ಸಿಹಿ ಪದಾರ್ಥಗಳನ್ನು ಕಟ್ಟಿಕೊಂಡು ಕುರಿ ಹಟ್ಟಿಗೆ ಬರ್ತಾರೆ. ಕುಟುಂಬ ಸದಸ್ಯರೆಲ್ಲಾ ಒಟ್ಟುಗೂಡಿ ಕುರಿಗಳಿಗೆ ಪೂಜಿಸಿ, ಲಕ್ಷ್ಮೀಗೆ ನಮಿಸುತ್ತಾರೆ.. ಜಾನಪದ ಹಾಡುಗಳನ್ನು ಹಾಡಿ ಸಂಭ್ರಮಿಸುತ್ತಾರೆ. ಬಳಿಕ ಮನೆಯಿಂದ ತಂದ ಅಡುಗೆಯನ್ನು ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಊಟ ಮಾಡುತ್ತಾರೆ.. ಇಡೀ ದಿನ ಹಟ್ಟಿಯಲ್ಲೇ ಕಾಲ ಕಳೆಯುತ್ತಾ ಸಂಭ್ರಮಿಸುತ್ತಾರೆ.

ಇದನ್ನೂ ವೀಕ್ಷಿಸಿ:  ಉತ್ತರಕನ್ನಡದಲ್ಲಿ ಬಲಿ ಚಕ್ರವರ್ತಿಯ ವಿಶಿಷ್ಟ ಆರಾಧನೆ: ಪ್ರಾದೇಶಿಕವಾಗಿ ಭಿನ್ನವಾಗಿ ಬೆಳಕಿನ ಹಬ್ಬ ಆಚರಣೆ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more