ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ

ಕುರಿಗಾಹಿಗಳಿಂದ ಸಂಭ್ರಮದ ದೀಪಾವಳಿ ಆಚರಣೆ: ಕುರಿಗಳಿಗೆ ಬಣ್ಣದ ಅಲಂಕಾರ ಮಾಡಿ ಸಡಗರ

Published : Nov 14, 2023, 10:34 AM IST

ದೀಪಾವಳಿ ಹಬ್ಬಕ್ಕೆ ಎಲ್ಲೆಲ್ಲೂ ದೀಪ, ಪಟಾಕಿಗಳ ಸಂಭ್ರಮವಿರುತ್ತದೆ. ಆದ್ರೆ ಕೊಪ್ಪಳದಲ್ಲಿ ಕುರಿಗಾಹಿಗಳು ದೀಪದ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ. ಮನೆ ಮಂದಿಯೆಲ್ಲ ಕುರಿಗಳನ್ನು ಪೂಜಿಸಿ, ಕುರಿ ಹಟ್ಟಿಯಲ್ಲೇ ಊಟ ಸವಿಯುತ್ತಾರೆ. 
 

ಕುರಿಗಳಿಗೆ ಬಣ್ಣದ ಅಲಂಕಾರ.. ಹಟ್ಟಿಗೆ ತೆಂಗಿನಗರಿ, ಕಬ್ಬಿನಿಂದ ಸಿಂಗಾರ. ಮನೆ ಮಂದಿಯೆಲ್ಲ ಸೇರಿ ಪೂಜಿಸಿ, ಹಬ್ಬದ ಊಟ ಸವಿಯೋಯೋದೇ ಚೆಂದ.ಇದು ಉತ್ತರ ಕರ್ನಾಟಕದ ದೀಪಾಳಿಯ ಸ್ಪೆಷಲ್. ದೀಪಾವಳಿ (Deepavali) ಬಂತಂದ್ರೆ ಸಾಕು ಕುರಿಗಾಹಿಗಳಿಗೆ(shepherds) ಖುಷಿಯೋ ಖುಷಿ. ಮಕ್ಕಳಿಗಂತೂ ಕುರಿಗಳನ್ನ ಅಲಂಕರಿಸೋದೇ ಒಂದು ಸಂಭ್ರಮ. ಹೌದು ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ದೀಪಾವಳಿ ದಿನ ಕುರಿಗಾಹಿಗಳು ಇಂಥದ್ದೊಂದು ವಿಭಿನ್ನ ಆಚರಣೆ ಮಾಡಿಕೊಂಡು  ಬಂದಿದ್ದಾರೆ. ಬಲಿ ಪಾಡ್ಯ ದಿನ ತಮ್ಮ ಹಟ್ಟಿಯಲ್ಲಿನ ಕುರಿಗಳಿಗೆಲ್ಲ ಬಣ್ಣ ಹಚ್ಚಿ, ಅಲಂಕಾರ ಮಾಡಿ, ಹೂವಿನ ಹಾರ ಹಾಕುತ್ತಾರೆ. ಕುರಿ ಹಟ್ಟಿಯನ್ನೂ ಅಲಂಕರಿಸಿ ಪೂಜೆ ಮಾಡುತ್ತಾರೆ. ದೇವರಾದ ಬೀರಪ್ಪ ನೀನೇ ಎಂದು ಕುರಿಗಳಿಗೆ ಪೂಜಿಸುವ ಸಂಪ್ರದಾಯ ತಲೆತಲಾಂತರಗಳಿಂದ ನಡೆದುಕೊಂಡು ಬಂದಿದೆ. ಗಂಡಸರು, ಮಕ್ಕಳೆಲ್ಲ ಕುರಿ ಹಟ್ಟಿ, ಕುರಿಗಳನ್ನು ಸಿಂಗರಿಸಿದ್ರೆ, ಇತ್ತ ಹೆಣ್ಣು ಮಕ್ಕಳು ತರಹೇವಾರಿ ಅಡುಗೆ ಸಿದ್ಧಪಡಿಸುತ್ತಾರೆ. ಮನೆಯಲ್ಲಿ  ಸಿದ್ಧಪಡಿಸಿದ ಹೋಳಿಗೆ, ಹುಗ್ಗಿ, ಸಿಹಿ ಪದಾರ್ಥಗಳನ್ನು ಕಟ್ಟಿಕೊಂಡು ಕುರಿ ಹಟ್ಟಿಗೆ ಬರ್ತಾರೆ. ಕುಟುಂಬ ಸದಸ್ಯರೆಲ್ಲಾ ಒಟ್ಟುಗೂಡಿ ಕುರಿಗಳಿಗೆ ಪೂಜಿಸಿ, ಲಕ್ಷ್ಮೀಗೆ ನಮಿಸುತ್ತಾರೆ.. ಜಾನಪದ ಹಾಡುಗಳನ್ನು ಹಾಡಿ ಸಂಭ್ರಮಿಸುತ್ತಾರೆ. ಬಳಿಕ ಮನೆಯಿಂದ ತಂದ ಅಡುಗೆಯನ್ನು ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಊಟ ಮಾಡುತ್ತಾರೆ.. ಇಡೀ ದಿನ ಹಟ್ಟಿಯಲ್ಲೇ ಕಾಲ ಕಳೆಯುತ್ತಾ ಸಂಭ್ರಮಿಸುತ್ತಾರೆ.

ಇದನ್ನೂ ವೀಕ್ಷಿಸಿ:  ಉತ್ತರಕನ್ನಡದಲ್ಲಿ ಬಲಿ ಚಕ್ರವರ್ತಿಯ ವಿಶಿಷ್ಟ ಆರಾಧನೆ: ಪ್ರಾದೇಶಿಕವಾಗಿ ಭಿನ್ನವಾಗಿ ಬೆಳಕಿನ ಹಬ್ಬ ಆಚರಣೆ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more