ಉತ್ತರಕನ್ನಡದಲ್ಲಿ ಬಲಿ ಚಕ್ರವರ್ತಿಯ ವಿಶಿಷ್ಟ ಆರಾಧನೆ: ಪ್ರಾದೇಶಿಕವಾಗಿ ಭಿನ್ನವಾಗಿ ಬೆಳಕಿನ ಹಬ್ಬ ಆಚರಣೆ

ಉತ್ತರಕನ್ನಡದಲ್ಲಿ ಬಲಿ ಚಕ್ರವರ್ತಿಯ ವಿಶಿಷ್ಟ ಆರಾಧನೆ: ಪ್ರಾದೇಶಿಕವಾಗಿ ಭಿನ್ನವಾಗಿ ಬೆಳಕಿನ ಹಬ್ಬ ಆಚರಣೆ

Published : Nov 14, 2023, 10:19 AM IST

ದೀಪಗಳ ಹಬ್ಬ ದೀಪಾವಳಿ ನಾಡಿನೆಲ್ಲೆಡೆ ಆಚರಿಸಲಾಗುತ್ತೆ. ಆದ್ರೆ, ಹಬ್ಬದ ಆಚರಣೆಯ ಪದ್ಧತಿಗಳು ಮಾತ್ರ ಪ್ರಾದೇಶಿಕವಾಗಿ ಭಿನ್ನವಾಗಿರುತ್ತವೆ. ಉತ್ತರಕನ್ನಡ ಜಿಲ್ಲೆಯಲ್ಲಿ ದೀಪಾವಳಿ ದಿನ ಬಲಿ ಚಕ್ರವರ್ತಿಯನ್ನು ವಿಶೇಷವಾಗಿ ಆರಾಧಿಸಲಾಗುತ್ತದೆ. 
 

ದೀಪಾವಳಿ ಮಲೆನಾಡಿನ ಜನರಿಗೆ ದೊಡ್ಡ ಹಬ್ಬ. ಮಹಾವಿಷ್ಣುವಿನ ಪಾದದಿಂದ ಪಾತಾಳ ಸೇರಿದ ಬಲಿಚಕ್ರವರ್ತಿ(Bali)  ರೈತಾಪಿ ವರ್ಗದ ಆರಾಧ್ಯ ದೈವ. ಬಲಿಪಾಡ್ಯಮಿ ದಿನ ಬಲಿ ಚಕ್ರವರ್ತಿ ಮತ್ತೆ ಭೂಮಿಗೆ ಬರುತ್ತಾನೆ ಎಂಬುದು ಪ್ರತೀತಿ. ಆತನನ್ನು ಸ್ವಾಗತಿಸುವ ಸಂಭ್ರಮ ಮಲೆನಾಡಿನ ರೈತರದ್ದು(Farmers). ದೀಪಾವಳಿ ಹಬ್ಬದ(Deepavali festival) ಸಂದರ್ಭದಲ್ಲಿ ರೈತಾಪಿ ವರ್ಗದ ಆರಾಧ್ಯ ದೈವ ಬಲಿ ಚಕ್ರವರ್ತಿಯ ಆರಾಧನೆಯೇ ವಿಶೇಷ. ಉತ್ತರಕನ್ನಡ ಜಿಲ್ಲೆಯಲ್ಲಿ ಬಲಿ ಚಕ್ರವರ್ತಿಯನ್ನು ವಿಶಿಷ್ಠವಾಗಿ ಆರಾಧನೆ ನಡೆಸಲಾಗುತ್ತದೆ. ಬಲಿ ಚಕ್ರವರ್ತಿ ಭೂಮಿಯ ಒಡೆಯನಾಗಿದ್ದರಿಂದ ದೀಪಾವಳಿಯ ಸಂದರ್ಭ ಜೇಡಿ ಮಣ್ಣಿನಿಂದ ಬಲಿ‌ಚಕ್ರವರ್ತಿಯ ಮೂರ್ತಿ ನಿರ್ಮಾಣ ಮಾಡುತ್ತಾರೆ. ನರಕ ಚತುರ್ದಶಿ ಹಾಗೂ ಬಲಿ ಪಾಡ್ಯಮಿಯ ದಿನದಂದು ಬಲಿ ಚಕ್ರವರ್ತಿಯನ್ನು ವಿಶಿಷ್ಠ ರೀತಿಯಲ್ಲಿ ಪೂಜಿಸಲಾಗುತ್ತೆ. ದೀಪಾವಳಿಯ ಮೊದಲ ದಿನ ಬಲಿ ಚಕ್ರವರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಬಲಿಯ ಅಕ್ಕ ಪಕ್ಕ ಪ್ರತಿಷ್ಠಾಪಿಸಿದ ಮಣ್ಣಿನ ಮಡಕೆಯ ನೀರನ್ನು ಪ್ರೋಕ್ಷಣೆ ಮಾಡಿಕೊಳ್ಳುವುದು ರೂಢಿಯಲ್ಲಿದೆ. ಇನ್ನು ದೀಪಾವಳಿಯ ಬಳಿಕ ಬಲಿ ಮೂರ್ತಿ ವಿಸರ್ಜನೆಯಲ್ಲೂ ವಿಶೇಷತೆ ಇದೆ. ಸಾಮಾನ್ಯವಾಗಿ ಮಣ್ಣಿನ ಮೂರ್ತಿಗಳನ್ನು ನೀರಿನಲ್ಲಿ ವಿಸರ್ಜಿಸಿದರೆ, ಬಲಿಯ ಮೂರ್ತಿಯನ್ನು ಆರಾಧನೆಯ ಬಳಿಕ ಹುಲ್ಲಿನ ಬಣವೆಯ ನಡುವೆ ಹುದುಗಿಸಿಡಲಾಗುತ್ತೆ. ತ್ರೇತಾಯುಗದಲ್ಲಿ ವಿಷ್ಣುವಿನ ಅವತಾರವೆತ್ತಿದ ವಾಮನನಿಂದ ಬಲಿ ಪಾತಾಳಕ್ಕೆ ತುಳಿಯಲ್ಪಟ್ಟಿದ್ದ.. ಇದರ ಸಂಕೇತವಾಗಿ ದೀಪಾವಳಿ ವೇಳೆ ಹಿಂಡಲ ಕಾಯಿಯನ್ನು ಎಡಗಾಲಿನಿಂದ ತುಳಿಯುತ್ತಾರೆ. ಬಳಿಕ ಆ ಕಾಯಿಯ ಕಹಿ ತಿಂದು ಎಡಗೈನಲ್ಲಿ ಮನೆಯ ಛಾವಣಿ ಮೇಲೆ ಎಸೆಯಲಾಗುತ್ತದೆ. ದೇವರು ದುಷ್ಟಶಕ್ತಿಯನ್ನು ಭೂಮಿಯಿಂದ ಅಳಿಸಿದ ಸಂಕೇತವಾಗಿ ಇಂದಿಗೂ ಈ ಆಚರಣೆ ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  ಸರಿಗಮಪ ವೇದಿಕೆ ಮೇಲೆ ಕನ್ನಡ ಹಬ್ಬ..ಕನ್ನಡ ಹಾಡುಗಳ ರಸದೌತಣ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ