ರಾಯಚೂರಲ್ಲಿ ಬಂಜಾರ ಸಮುದಾಯದ ದೀಪಾವಳಿ ಆಚರಣೆ ಸ್ಪೆಷಲ್: ಪೂಜೆ ಪುನಸ್ಕಾರ..ಮನೆಮನೆಗಳಲ್ಲೂ ಹಬ್ಬದ ಸಂಭ್ರಮ

ರಾಯಚೂರಲ್ಲಿ ಬಂಜಾರ ಸಮುದಾಯದ ದೀಪಾವಳಿ ಆಚರಣೆ ಸ್ಪೆಷಲ್: ಪೂಜೆ ಪುನಸ್ಕಾರ..ಮನೆಮನೆಗಳಲ್ಲೂ ಹಬ್ಬದ ಸಂಭ್ರಮ

Published : Nov 13, 2023, 11:21 AM IST

ನಾಡಿನಾದ್ಯಂತ್ಯ ಬೆಳಕಿನ ಹಬ್ಬ ದೀಪವಳಿ ಸಂಭ್ರಮ ಕಳೆಗಟ್ಟಿದೆ. ಈ ದೀಪಾವಳಿ ಹಬ್ಬವನ್ನ ಒಂದು ಪ್ರದೇಶದಲ್ಲಿ ಒಂದೊಂದು ರೀತಿ ಆಚರಿಸುತ್ತಾರೆ. ಅದರಲ್ಲೂ ಬಿಸಿಲುನಾಡು ರಾಯಚೂರು ಜಿಲ್ಲೆಯ ಬಂಜಾರ ಸಮುದಾಯದ ದೀಪಾವಳಿ ಹಬ್ಬದ ಆಚರಣೆ ನೋಡಲು ಎರಡು ಕಣ್ಣು ಸಾಲದು. 
 

ಎಲ್ಲೆಲ್ಲೂ ಹಣತೆಗಳ ಸಾಲು..ಹೂವಿನ ಅಲಂಕಾರ..ವಿಶೇಷ ಪೂಜೆ ಪುನಸ್ಕಾರ.. ಮನೆಮನೆಗಳಲ್ಲೂ ದೀಪಾವಳಿ(Deepavali) ಹಬ್ಬದ ಸಂಭ್ರಮ..ಇದು ಬಂಜಾರ ಸಮುದಾಯದ ತಾಂಡಾಗಳಲ್ಲಿನ ದೀಪಾವಳಿ ಸಂಭ್ರಮದ ಝಲಕ್. ಬೆಳಕಿನ ಹಬ್ಬವನ್ನು ನಾಡಿನೆಲ್ಲೆಡೆ ಅವರವರ ಸಾಂಪ್ರಾದಾಯದಂತೆ ಆಚರಿಸುತ್ತಾರೆ. ರಾಯಚೂರು(Raichur) ಜಿಲ್ಲೆಯ ತಾಂಡಾಗಳಲ್ಲಿ ಬಂಜಾರ ಸಮುದಾಯವೂ(Banjara community) ದೀಪಾವಳಿ ಹಬ್ಬವನ್ನ ವಿಶೇಷ ಮತ್ತು ವಿಭಿನ್ನವಾಗಿ ಆಚರಿಸುತ್ತಾರೆ. ಮಹಿಳೆಯರು ಒಂದು ತಿಂಗಳುಗಳಿಂದ ಸಿದ್ಧತೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ. ಮತ್ತೊಂದು ವಿಶೇಷವೆಂದರೆ ತಾಂಡಾ ಸದಸ್ಯರು ಅದೆಷ್ಟೇ ದೂರದ ಊರುಗಳಲ್ಲಿದ್ದರೂ ದೀಪಾವಳಿ ಹಬ್ಬಕ್ಕೆ ತಪ್ಪದೇ ಬಂದು ತಾಂಡಾ  ಸೇರಿಕೊಳ್ತಾರೆ. ಇನ್ನು ದೀಪಾವಳಿ ದಿನ ಗ್ರಾಮದ ಮುತ್ತೈದೆಯರೆಲ್ಲ ಭಾಜಾ ಭಜಂತ್ರಿಯೊಂದಿಗೆ ಗ್ರಾಮದ ಗಡಿವರೆಗೆ ಮೆರವಣಿಗೆ ಹೊರಡುತ್ತಾರೆ. ಈ ವೇಳೆ ಭಜನೆಗಳನ್ನು ಹಾಡುತ್ತಾ ಕುಣಿಯುತ್ತಾರೆ. ಈ ಮೆರವಣಿಗೆ ಗ್ರಾಮದ ಗಡಿ ತಲುಪುತ್ತಿದ್ದಂತೆ ಮದುವೆ ಆಗದ ಹುಡುಗಿಯರನ್ನು ಕಾಡಿಗೆ ಕಳುಹಿಸಿ ಉಳಿದವರು ಗ್ರಾಮಕ್ಕೆ ಹಿಂದಿರುಗುತ್ತಾರೆ. ಕಾಡಿಗೆ ತೆರಳಿದ ಹುಡುಗಿಯರು ದೇವರಿಗೆ ಪ್ರಿಯವಾದ ತಂಗಟಿ ಹೂವನ್ನು ಕೀಳುತ್ತಾರೆ. ಸಂಜೆವರೆಗೆ ಕಾಡಿನಲ್ಲಿ ಕಾಲ ಕಳೆಯುವ ಹುಡುಗಿಯರು ಕಳೆದ ವರ್ಷದ ನೋವು ನಲಿವುಗಳನ್ನು ಹಂಚಿಕೊಳ್ಳುತ್ತಾರೆ. ಆದ್ರೆ, ಕಾಡಿನಿಂದ ಗ್ರಾಮಕ್ಕೆ ಹಿಂದಿರುಗುವ ವೇಳೆ ಮಾತ್ರ ಅಕ್ಷರಶಃ ಕಣ್ಣೀರು ಹಾಕುತ್ತಾರೆ. ಆದ್ರೆ ಮುಂದಿನ ದೀಪಾವಳಿ ಒಳಗೆ ಮದುವೆ ಆಗುವ ಹುಡುಗಿಯರು ಮತ್ತೆ ಈ ತಂಗಟಿ ಹೂವು ಕೀಳುವ ಆಚರಣೆಯಲ್ಲಿ ಪಾಲ್ಗೊಳ್ಳಲು ಆಗುವುದಿಲ್ಲ. ಗೆಳತಿಯರೊಡನೆ ಸೇರಿ ತಿಂಗಳ ದೀಪಾವಳಿ ಆಚರಿಸಲು ಆಗುವುದಿಲ್ಲ ಎಂಬ ನೋವಿನೊಂದಿಗೆ ಯುವತಿಯರು ಒಬ್ಬರಿಗೊಬ್ಬರು ತಬ್ಬಿಕೊಂಡು ಭಾವುಕರಾಗುತ್ತಾರೆ. ಇತ್ತ ಸಂಜೆಯ ವೇಳೆ ಗ್ರಾಮದ ಲಾಲ್ ಮಂದಿರದಲ್ಲಿ ಸೇರಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಗೋ ಪೂಜೆ ಮಾಡಿ ದೀಪ ಬೆಳಗಿ ಪ್ರಾರ್ಥಿಸುತ್ತಾರೆ. ಬಳಿಕ ಮನೆ ಮನೆಗೂ ತೆರಳಿ ದೀಪ ಬೆಳಗಿಸಿ ದೀಪಾವಳಿಯ ಶುಭಾಶಯ ಕೋರುತ್ತಾರೆ.

ಇದನ್ನೂ ವೀಕ್ಷಿಸಿ:  ಗುಮ್ಮಟನಗರಿಯಲ್ಲಿ ಮೇಳೈಸಿದ ದೀಪಾವಳಿ ಸಂಭ್ರಮ: ಇಲ್ಲಿ ನೆರವೇರುತ್ತೆ ಸಗಣಿಯಿಂದ ತಯಾರಾದ ಗೊಂಬೆಗಳಿಗೆ ಪೂಜೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more