ರಾಯಚೂರಲ್ಲಿ ಬಂಜಾರ ಸಮುದಾಯದ ದೀಪಾವಳಿ ಆಚರಣೆ ಸ್ಪೆಷಲ್: ಪೂಜೆ ಪುನಸ್ಕಾರ..ಮನೆಮನೆಗಳಲ್ಲೂ ಹಬ್ಬದ ಸಂಭ್ರಮ

ರಾಯಚೂರಲ್ಲಿ ಬಂಜಾರ ಸಮುದಾಯದ ದೀಪಾವಳಿ ಆಚರಣೆ ಸ್ಪೆಷಲ್: ಪೂಜೆ ಪುನಸ್ಕಾರ..ಮನೆಮನೆಗಳಲ್ಲೂ ಹಬ್ಬದ ಸಂಭ್ರಮ

Published : Nov 13, 2023, 11:21 AM IST

ನಾಡಿನಾದ್ಯಂತ್ಯ ಬೆಳಕಿನ ಹಬ್ಬ ದೀಪವಳಿ ಸಂಭ್ರಮ ಕಳೆಗಟ್ಟಿದೆ. ಈ ದೀಪಾವಳಿ ಹಬ್ಬವನ್ನ ಒಂದು ಪ್ರದೇಶದಲ್ಲಿ ಒಂದೊಂದು ರೀತಿ ಆಚರಿಸುತ್ತಾರೆ. ಅದರಲ್ಲೂ ಬಿಸಿಲುನಾಡು ರಾಯಚೂರು ಜಿಲ್ಲೆಯ ಬಂಜಾರ ಸಮುದಾಯದ ದೀಪಾವಳಿ ಹಬ್ಬದ ಆಚರಣೆ ನೋಡಲು ಎರಡು ಕಣ್ಣು ಸಾಲದು. 
 

ಎಲ್ಲೆಲ್ಲೂ ಹಣತೆಗಳ ಸಾಲು..ಹೂವಿನ ಅಲಂಕಾರ..ವಿಶೇಷ ಪೂಜೆ ಪುನಸ್ಕಾರ.. ಮನೆಮನೆಗಳಲ್ಲೂ ದೀಪಾವಳಿ(Deepavali) ಹಬ್ಬದ ಸಂಭ್ರಮ..ಇದು ಬಂಜಾರ ಸಮುದಾಯದ ತಾಂಡಾಗಳಲ್ಲಿನ ದೀಪಾವಳಿ ಸಂಭ್ರಮದ ಝಲಕ್. ಬೆಳಕಿನ ಹಬ್ಬವನ್ನು ನಾಡಿನೆಲ್ಲೆಡೆ ಅವರವರ ಸಾಂಪ್ರಾದಾಯದಂತೆ ಆಚರಿಸುತ್ತಾರೆ. ರಾಯಚೂರು(Raichur) ಜಿಲ್ಲೆಯ ತಾಂಡಾಗಳಲ್ಲಿ ಬಂಜಾರ ಸಮುದಾಯವೂ(Banjara community) ದೀಪಾವಳಿ ಹಬ್ಬವನ್ನ ವಿಶೇಷ ಮತ್ತು ವಿಭಿನ್ನವಾಗಿ ಆಚರಿಸುತ್ತಾರೆ. ಮಹಿಳೆಯರು ಒಂದು ತಿಂಗಳುಗಳಿಂದ ಸಿದ್ಧತೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ. ಮತ್ತೊಂದು ವಿಶೇಷವೆಂದರೆ ತಾಂಡಾ ಸದಸ್ಯರು ಅದೆಷ್ಟೇ ದೂರದ ಊರುಗಳಲ್ಲಿದ್ದರೂ ದೀಪಾವಳಿ ಹಬ್ಬಕ್ಕೆ ತಪ್ಪದೇ ಬಂದು ತಾಂಡಾ  ಸೇರಿಕೊಳ್ತಾರೆ. ಇನ್ನು ದೀಪಾವಳಿ ದಿನ ಗ್ರಾಮದ ಮುತ್ತೈದೆಯರೆಲ್ಲ ಭಾಜಾ ಭಜಂತ್ರಿಯೊಂದಿಗೆ ಗ್ರಾಮದ ಗಡಿವರೆಗೆ ಮೆರವಣಿಗೆ ಹೊರಡುತ್ತಾರೆ. ಈ ವೇಳೆ ಭಜನೆಗಳನ್ನು ಹಾಡುತ್ತಾ ಕುಣಿಯುತ್ತಾರೆ. ಈ ಮೆರವಣಿಗೆ ಗ್ರಾಮದ ಗಡಿ ತಲುಪುತ್ತಿದ್ದಂತೆ ಮದುವೆ ಆಗದ ಹುಡುಗಿಯರನ್ನು ಕಾಡಿಗೆ ಕಳುಹಿಸಿ ಉಳಿದವರು ಗ್ರಾಮಕ್ಕೆ ಹಿಂದಿರುಗುತ್ತಾರೆ. ಕಾಡಿಗೆ ತೆರಳಿದ ಹುಡುಗಿಯರು ದೇವರಿಗೆ ಪ್ರಿಯವಾದ ತಂಗಟಿ ಹೂವನ್ನು ಕೀಳುತ್ತಾರೆ. ಸಂಜೆವರೆಗೆ ಕಾಡಿನಲ್ಲಿ ಕಾಲ ಕಳೆಯುವ ಹುಡುಗಿಯರು ಕಳೆದ ವರ್ಷದ ನೋವು ನಲಿವುಗಳನ್ನು ಹಂಚಿಕೊಳ್ಳುತ್ತಾರೆ. ಆದ್ರೆ, ಕಾಡಿನಿಂದ ಗ್ರಾಮಕ್ಕೆ ಹಿಂದಿರುಗುವ ವೇಳೆ ಮಾತ್ರ ಅಕ್ಷರಶಃ ಕಣ್ಣೀರು ಹಾಕುತ್ತಾರೆ. ಆದ್ರೆ ಮುಂದಿನ ದೀಪಾವಳಿ ಒಳಗೆ ಮದುವೆ ಆಗುವ ಹುಡುಗಿಯರು ಮತ್ತೆ ಈ ತಂಗಟಿ ಹೂವು ಕೀಳುವ ಆಚರಣೆಯಲ್ಲಿ ಪಾಲ್ಗೊಳ್ಳಲು ಆಗುವುದಿಲ್ಲ. ಗೆಳತಿಯರೊಡನೆ ಸೇರಿ ತಿಂಗಳ ದೀಪಾವಳಿ ಆಚರಿಸಲು ಆಗುವುದಿಲ್ಲ ಎಂಬ ನೋವಿನೊಂದಿಗೆ ಯುವತಿಯರು ಒಬ್ಬರಿಗೊಬ್ಬರು ತಬ್ಬಿಕೊಂಡು ಭಾವುಕರಾಗುತ್ತಾರೆ. ಇತ್ತ ಸಂಜೆಯ ವೇಳೆ ಗ್ರಾಮದ ಲಾಲ್ ಮಂದಿರದಲ್ಲಿ ಸೇರಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಗೋ ಪೂಜೆ ಮಾಡಿ ದೀಪ ಬೆಳಗಿ ಪ್ರಾರ್ಥಿಸುತ್ತಾರೆ. ಬಳಿಕ ಮನೆ ಮನೆಗೂ ತೆರಳಿ ದೀಪ ಬೆಳಗಿಸಿ ದೀಪಾವಳಿಯ ಶುಭಾಶಯ ಕೋರುತ್ತಾರೆ.

ಇದನ್ನೂ ವೀಕ್ಷಿಸಿ:  ಗುಮ್ಮಟನಗರಿಯಲ್ಲಿ ಮೇಳೈಸಿದ ದೀಪಾವಳಿ ಸಂಭ್ರಮ: ಇಲ್ಲಿ ನೆರವೇರುತ್ತೆ ಸಗಣಿಯಿಂದ ತಯಾರಾದ ಗೊಂಬೆಗಳಿಗೆ ಪೂಜೆ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more