ರಾಯಚೂರಲ್ಲಿ ಬಂಜಾರ ಸಮುದಾಯದ ದೀಪಾವಳಿ ಆಚರಣೆ ಸ್ಪೆಷಲ್: ಪೂಜೆ ಪುನಸ್ಕಾರ..ಮನೆಮನೆಗಳಲ್ಲೂ ಹಬ್ಬದ ಸಂಭ್ರಮ

ರಾಯಚೂರಲ್ಲಿ ಬಂಜಾರ ಸಮುದಾಯದ ದೀಪಾವಳಿ ಆಚರಣೆ ಸ್ಪೆಷಲ್: ಪೂಜೆ ಪುನಸ್ಕಾರ..ಮನೆಮನೆಗಳಲ್ಲೂ ಹಬ್ಬದ ಸಂಭ್ರಮ

Published : Nov 13, 2023, 11:21 AM IST

ನಾಡಿನಾದ್ಯಂತ್ಯ ಬೆಳಕಿನ ಹಬ್ಬ ದೀಪವಳಿ ಸಂಭ್ರಮ ಕಳೆಗಟ್ಟಿದೆ. ಈ ದೀಪಾವಳಿ ಹಬ್ಬವನ್ನ ಒಂದು ಪ್ರದೇಶದಲ್ಲಿ ಒಂದೊಂದು ರೀತಿ ಆಚರಿಸುತ್ತಾರೆ. ಅದರಲ್ಲೂ ಬಿಸಿಲುನಾಡು ರಾಯಚೂರು ಜಿಲ್ಲೆಯ ಬಂಜಾರ ಸಮುದಾಯದ ದೀಪಾವಳಿ ಹಬ್ಬದ ಆಚರಣೆ ನೋಡಲು ಎರಡು ಕಣ್ಣು ಸಾಲದು. 
 

ಎಲ್ಲೆಲ್ಲೂ ಹಣತೆಗಳ ಸಾಲು..ಹೂವಿನ ಅಲಂಕಾರ..ವಿಶೇಷ ಪೂಜೆ ಪುನಸ್ಕಾರ.. ಮನೆಮನೆಗಳಲ್ಲೂ ದೀಪಾವಳಿ(Deepavali) ಹಬ್ಬದ ಸಂಭ್ರಮ..ಇದು ಬಂಜಾರ ಸಮುದಾಯದ ತಾಂಡಾಗಳಲ್ಲಿನ ದೀಪಾವಳಿ ಸಂಭ್ರಮದ ಝಲಕ್. ಬೆಳಕಿನ ಹಬ್ಬವನ್ನು ನಾಡಿನೆಲ್ಲೆಡೆ ಅವರವರ ಸಾಂಪ್ರಾದಾಯದಂತೆ ಆಚರಿಸುತ್ತಾರೆ. ರಾಯಚೂರು(Raichur) ಜಿಲ್ಲೆಯ ತಾಂಡಾಗಳಲ್ಲಿ ಬಂಜಾರ ಸಮುದಾಯವೂ(Banjara community) ದೀಪಾವಳಿ ಹಬ್ಬವನ್ನ ವಿಶೇಷ ಮತ್ತು ವಿಭಿನ್ನವಾಗಿ ಆಚರಿಸುತ್ತಾರೆ. ಮಹಿಳೆಯರು ಒಂದು ತಿಂಗಳುಗಳಿಂದ ಸಿದ್ಧತೆ ಮಾಡಿಕೊಂಡು ಹಬ್ಬ ಆಚರಿಸುತ್ತಾರೆ. ಮತ್ತೊಂದು ವಿಶೇಷವೆಂದರೆ ತಾಂಡಾ ಸದಸ್ಯರು ಅದೆಷ್ಟೇ ದೂರದ ಊರುಗಳಲ್ಲಿದ್ದರೂ ದೀಪಾವಳಿ ಹಬ್ಬಕ್ಕೆ ತಪ್ಪದೇ ಬಂದು ತಾಂಡಾ  ಸೇರಿಕೊಳ್ತಾರೆ. ಇನ್ನು ದೀಪಾವಳಿ ದಿನ ಗ್ರಾಮದ ಮುತ್ತೈದೆಯರೆಲ್ಲ ಭಾಜಾ ಭಜಂತ್ರಿಯೊಂದಿಗೆ ಗ್ರಾಮದ ಗಡಿವರೆಗೆ ಮೆರವಣಿಗೆ ಹೊರಡುತ್ತಾರೆ. ಈ ವೇಳೆ ಭಜನೆಗಳನ್ನು ಹಾಡುತ್ತಾ ಕುಣಿಯುತ್ತಾರೆ. ಈ ಮೆರವಣಿಗೆ ಗ್ರಾಮದ ಗಡಿ ತಲುಪುತ್ತಿದ್ದಂತೆ ಮದುವೆ ಆಗದ ಹುಡುಗಿಯರನ್ನು ಕಾಡಿಗೆ ಕಳುಹಿಸಿ ಉಳಿದವರು ಗ್ರಾಮಕ್ಕೆ ಹಿಂದಿರುಗುತ್ತಾರೆ. ಕಾಡಿಗೆ ತೆರಳಿದ ಹುಡುಗಿಯರು ದೇವರಿಗೆ ಪ್ರಿಯವಾದ ತಂಗಟಿ ಹೂವನ್ನು ಕೀಳುತ್ತಾರೆ. ಸಂಜೆವರೆಗೆ ಕಾಡಿನಲ್ಲಿ ಕಾಲ ಕಳೆಯುವ ಹುಡುಗಿಯರು ಕಳೆದ ವರ್ಷದ ನೋವು ನಲಿವುಗಳನ್ನು ಹಂಚಿಕೊಳ್ಳುತ್ತಾರೆ. ಆದ್ರೆ, ಕಾಡಿನಿಂದ ಗ್ರಾಮಕ್ಕೆ ಹಿಂದಿರುಗುವ ವೇಳೆ ಮಾತ್ರ ಅಕ್ಷರಶಃ ಕಣ್ಣೀರು ಹಾಕುತ್ತಾರೆ. ಆದ್ರೆ ಮುಂದಿನ ದೀಪಾವಳಿ ಒಳಗೆ ಮದುವೆ ಆಗುವ ಹುಡುಗಿಯರು ಮತ್ತೆ ಈ ತಂಗಟಿ ಹೂವು ಕೀಳುವ ಆಚರಣೆಯಲ್ಲಿ ಪಾಲ್ಗೊಳ್ಳಲು ಆಗುವುದಿಲ್ಲ. ಗೆಳತಿಯರೊಡನೆ ಸೇರಿ ತಿಂಗಳ ದೀಪಾವಳಿ ಆಚರಿಸಲು ಆಗುವುದಿಲ್ಲ ಎಂಬ ನೋವಿನೊಂದಿಗೆ ಯುವತಿಯರು ಒಬ್ಬರಿಗೊಬ್ಬರು ತಬ್ಬಿಕೊಂಡು ಭಾವುಕರಾಗುತ್ತಾರೆ. ಇತ್ತ ಸಂಜೆಯ ವೇಳೆ ಗ್ರಾಮದ ಲಾಲ್ ಮಂದಿರದಲ್ಲಿ ಸೇರಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಗೋ ಪೂಜೆ ಮಾಡಿ ದೀಪ ಬೆಳಗಿ ಪ್ರಾರ್ಥಿಸುತ್ತಾರೆ. ಬಳಿಕ ಮನೆ ಮನೆಗೂ ತೆರಳಿ ದೀಪ ಬೆಳಗಿಸಿ ದೀಪಾವಳಿಯ ಶುಭಾಶಯ ಕೋರುತ್ತಾರೆ.

ಇದನ್ನೂ ವೀಕ್ಷಿಸಿ:  ಗುಮ್ಮಟನಗರಿಯಲ್ಲಿ ಮೇಳೈಸಿದ ದೀಪಾವಳಿ ಸಂಭ್ರಮ: ಇಲ್ಲಿ ನೆರವೇರುತ್ತೆ ಸಗಣಿಯಿಂದ ತಯಾರಾದ ಗೊಂಬೆಗಳಿಗೆ ಪೂಜೆ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more