ಏನಾಗಲಿದೆ ಡಿಕೆಶಿ ಅಕ್ರಮ ಆಸ್ತಿ ಪ್ರಕರಣ..? ತನಿಖೆ ಬಗ್ಗೆ ಮಾಜಿ ಸ್ಪೀಕರ್ ಕೊಟ್ಟ ಉತ್ತರ ಏನು..?

ಏನಾಗಲಿದೆ ಡಿಕೆಶಿ ಅಕ್ರಮ ಆಸ್ತಿ ಪ್ರಕರಣ..? ತನಿಖೆ ಬಗ್ಗೆ ಮಾಜಿ ಸ್ಪೀಕರ್ ಕೊಟ್ಟ ಉತ್ತರ ಏನು..?

Published : Nov 26, 2023, 01:02 PM IST

ಸರ್ಕಾರದ ನಡೆ ಬಗ್ಗೆ ಕಾನೂನು ಹೇಳೋದೇನು..?
ಇಂದಿಗೂ ನಿಂತಿಲ್ಲ ಸರ್ಕಾರದ ಮೇಲೆ ವಾಗ್ದಾಳಿ..!
ಬಿಟ್ಟೂ ಬಿಡದೇ ಕಾಡೋದೇಕೆ ಡಿಕೆಗೆ ಕಂಟಕ..?

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar) ಅವರ ಮೇಲೆ ಇರೋ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನ ಸಿಬಿಐ(CBI) ತನಿಖೆಯಿಂದ ವಾಪಸ್ ಪಡೆದ ಮೇಲೆ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಕಾಂಗ್ರೆಸ್ ತಮ್ಮ ಸರ್ಕಾರದ ನಿರ್ಧಾರವನ್ನ ಸಮರ್ಥನೆ ಮಾಡಿಕೊಳ್ತಾ ಇದ್ರೆ ಅತ್ತ ಬಿಜೆಪಿ(BJP) ಜೆಡಿಎಸ್ ಸರ್ಕಾರದ ವಿರುದ್ಧ ಸಮರ ಸಾರಿವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲೆ ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿರೋ ದೊಡ್ಡ ಆರೋಪವಿದೆ. ಇದೇ ವಿಚಾರಕ್ಕೆ ಅವರು ತಿಹಾರ್ ಜೈಲು ವಾಸವನ್ನೂ ಅನುಭವಿಸಿದ್ದಾರೆ. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಅವರ ಮೇಲಿನ ಆರೋಪದ ತನಿಖೆ ಮಾಡೋಕೆ ಸಿಬಿಐಗೆ ಆದೇಶ ನೀಡಿತ್ತು. ಈಗ ಆ ಆದೇಶವನ್ನ ಸಿದ್ದು ಸರ್ಕಾರ ವಾಪಸ್ ಪಡೆದಿರೋದು ಚರ್ಚೆಗೆ ಗ್ರಾಸವಾಗಿದೆ. ಹಿಂದಿನ ಸರ್ಕಾರ ನಿಯಮ ಬಾಹಿರವಾಗಿ ಆದೇಶ ಮಾಡಿತ್ತು. ಶಾಸಕರಾಗಿದ್ದ ಡಿಕೆ ಶಿವಕುಮಾರ್ ಮೇಲೆ ತನಿಖೆಗೆ ಆದೇಶ ಕೊಡೋಕೆ ಸಭಾಪತಿಗಳ ಅನುಮತಿ ಪಡದೇ ಇರ್ಲಿಲ್ಲಾ. ಮೌಕಿಕ ಆದೇಶಕ್ಕೆ ಯಾವುದೇ ಬೆಲೆಯಿಲ್ಲ. ಬರವಣಿಗೆಯಲ್ಲಿ ಆದೇಶವೂ ಇಲ್ಲ. ಹೀಗಾಗಿ ನಿಯಮಗಳನ್ನ ಗಾಳಿಗೆ ತೂರಿ ಡಿಕೆಶಿ ಮೇಲೆ ರಾಜಕೀಯ ದ್ವೇಷ ಸಾಧಿಸೋಕೆ ಬಿಜೆಪಿಗರು ಹೋಗಿದ್ದರು. ನಿಯಮ ಬಾಹಿರವಾಗಿ ಅನುಮತಿ ಕೊಟ್ಟಿದ್ದಾರೆ ಎಂಬ ಕಾರಣಕ್ಕೆ ಸಿಬಿಐ ತನಿಖೆಯನ್ನ ವಾಪಸ್ ಪಡೆಯಲಾಗಿದೆ ಅನ್ನೋದು ಕಾಂಗ್ರೆಸ್ ವಾದ. ಆದ್ರೆ ಆಗಿನ ಸಭಾಪತಿಗಳಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಇದೊಂದು ಆರೋಪಕ್ಕೆ ಉತ್ತರ ಕೊಟ್ಟಿದ್ದಾರೆ. ತಮ್ಮ ನಿರ್ಣಯ ಮಾಡಿಕೊಳ್ಳೋಕೆ ಸ್ಪೀಕರ್ ಸ್ಥಾನವನ್ನ ದುರ್ಬಳಕೆ ಮಾಡಿಕೊಂಡಿರೋದು ದುರ್ದೈವದ ಸಂಗತಿ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಗಂಡ ಜೈಲಿಗೆ.. ಹೆಂಡತಿ ಪರಲೋಕಕ್ಕೆ..ಮಕ್ಕಳು ಅನಾಥ..! ಪ್ರೀತಿಸಿದವಳನ್ನು ಪತಿರಾಯ ಕೊಂದಿದ್ದೇಕೆ ?

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more