ಕೇರಳದಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಸ್ಫೋಟಕ ಹೇಳಿಕೆ: ಪ್ರಾಣಿ ಬಲಿ ಕೊಟ್ಟು ಶತ್ರುಭೈರವಿ ಯಾಗದ ಬಗ್ಗೆ ತನಿಖೆ?

ಕೇರಳದಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಸ್ಫೋಟಕ ಹೇಳಿಕೆ: ಪ್ರಾಣಿ ಬಲಿ ಕೊಟ್ಟು ಶತ್ರುಭೈರವಿ ಯಾಗದ ಬಗ್ಗೆ ತನಿಖೆ?

Published : Jun 01, 2024, 12:44 PM ISTUpdated : Jun 01, 2024, 12:45 PM IST

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ನನ್ನ ವಿರುದ್ಧ ಹಾಗೂ ನಮ್ಮ ಸರ್ಕಾರದ ವಿರುದ್ಧ ಕೇರಳದಲ್ಲಿ ಶತ್ರುಭೈರವಿ ಯಾಗ ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದರು. ಘಟನೆ ಸಂಬಂಧ ಕೇರಳ ಸರ್ಕಾರ  ಅಲರ್ಟ್‌ ಆಗಿ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಿದೆ. 

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ (DK Shivakumar) ಅವರು ನನ್ನ ವಿರುದ್ಧ ಹಾಗೂ ನಮ್ಮ ಸರ್ಕಾರದ ವಿರುದ್ಧ ಕೇರಳದಲ್ಲಿ ಶತ್ರುಭೈರವಿ ಯಾಗ  (Shatrubhairavi Yaga) ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದರು. ಘಟನೆ ಸಂಬಂಧ ಕೇರಳ ಸರ್ಕಾರ (Kerala Govt) ಅಲರ್ಟ್‌ ಆಗಿ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಿದೆ. ಕೇರಳ ರಾಜ್ಯ ಗುಪ್ತಚರ ಹಾಗೂ ಪೊಲೀಸ್ ಇಲಾಖೆ ಮೂಲಕ ತನಿಖೆ ನಡೆಸಿದ್ದು, ಕೇರಳ ರಾಜ್ಯದ ಕಣ್ಣೂರು, ತಳಿಪರಂಬ ಭಾಗದಲ್ಲಿ ಮಾಹಿತಿ ಸಂಗ್ರಹ ಮಾಡಲಾಗಿದೆ. 

ಈ ನಡುವೆ ಪ್ರಾಣಿ ಬಲಿ ಕೊಟ್ಟು ಶತ್ರುಭೈರವಿ ಯಾಗ ನಡೆದಿದ್ಯಾ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದ್ದು, ಸಮಗ್ರ ಮಾಹಿತಿ ಸಂಗ್ರಹಿಸಿ ಕೇರಳ ಡಿಜಿಪಿಗೆ ವಿಶೇಷ ತಂಡ ವರದಿ ಸಲ್ಲಿಸಿದೆ. ತಳಿಪರಂ ರಾಜರಾಜೇಶ್ವರಂ, ಕಣ್ಣೂರು ಸುತ್ತಮುತ್ತ ಪ್ರದೇಶದಲ್ಲಿ ತನಿಖೆ ಮಾಡಲಾಗಿದ್ದು, ಯಾವುದೇ ಪ್ರಾಣಿ ಬಲಿ ಯಾಗ ನಡೆದಿಲ್ಲ ಎಂದು ಡಿಜಿಪಿಗೆ ವರದಿ ಸಲ್ಲಿಕೆ ಮಾಡಲಾಗಿದೆ. ಅಲ್ಲದೆ ಕರ್ನಾಟಕ ಪೊಲೀಸ್ ವಿಶೇಷ ತಂಡದಿಂದಲೂ ಗುಪ್ತವಾಗಿ ಮಾಹಿತಿ ಸಂಗ್ರಹ ಮಾಡಲಾಗಿದೆ. ಆದರೆ, ಯಾರ ತನಿಖೆಯಲ್ಲೂ ಸಹ ಈ ವಿಷಯ ಕಂಡುಬಂದಿಲ್ಲ. 

ಈ ನಡುವೆ ಡಿಕೆಶಿ ಆರೋಪವನ್ನು ಕೇರಳ ದೇವಸ್ವಂ ಬೋರ್ಡ್ (Kerala Devaswam Board) ಸಚಿವ ರಾಧಾಕೃಷ್ಣನ್‌ ತಳ್ಳಿಹಾಕಿದ್ದಾರೆ.  ಕೇರಳದ ಯಾವುದೇ ದೇವಸ್ಥಾನಗಳಲ್ಲಿ ಪ್ರಾಣಿ ಬಲಿ ನಡೆಯಲ್ಲ ಅಂತ ಸ್ಪಷ್ಟನೆ ಸಹ ನಿಡಿದ್ದಾರೆ. ಜೊತೆಗೆ ಡಿಕೆಶಿ ಆರೋಪವನ್ನು ತಳಿಪರಂ ಶ್ರೀರಾಜರಾಜೇಶ್ವರಂ ದೇಗುಲ ಅಲ್ಲಗೆಳೆದಿದೆ. ದೇವಸ್ವಂ ಬೋರ್ಡ್ ಅಧೀನದ ದೇಗುಲಗಳಲ್ಲಿ ಪ್ರಾಣಿ ಬಲಿ ಮಾಡಲ್ಲ, ಪ್ರಾಣಿ ಬಲಿ ಒಳಗೊಂಡ ಯಾವುದೇ ಪೂಜೆ ಅಥವಾ ನೈವೇದ್ಯ ಮಾಡಲ್ಲ ಎಂದು ತಿಳಿಸಲಾಗಿದೆ. 
 
ಇನ್ನು ಸಿಎಂ ಮತ್ತು ನನ್ನ ವಿರುದ್ಧ ಕೇರಳದಲ್ಲಿ ಶತ್ರುಭೈರವಿ ಯಾಗ ಮಾಡಲಾಗಿದೆ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಶತ್ರು ಸಂಹಾರಕ್ಕಾಗಿ ಮಾಡುತ್ತಿರುವ ಶತ್ರು ಭೈರವಿ ಯಾಗ ಎಂದಿದ್ದ ಡಿಕೆಶಿ ಯಾಗದಲ್ಲಿ ಮೇಕೆ, ಹಂದಿ, ಕುರಿ, ಬಲಿ ಕೊಟ್ಟಿದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ವೀಕ್ಷಿಸಿ;  Lok Sabha elections 2024: ಕ್ಲೈಮ್ಯಾಕ್ಸ್ ಹಂತ ತಲುಪಿದ ಲೋಕಸಭಾ ಮಹಾಸಮರ: ಇಂದೇ ಹೊರಬೀಳಲಿದೆ ಎಕ್ಸಿಟ್ ಪೋಲ್ ಭವಿಷ್ಯ!

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!