ಕೇರಳದಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಸ್ಫೋಟಕ ಹೇಳಿಕೆ: ಪ್ರಾಣಿ ಬಲಿ ಕೊಟ್ಟು ಶತ್ರುಭೈರವಿ ಯಾಗದ ಬಗ್ಗೆ ತನಿಖೆ?

ಕೇರಳದಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಸ್ಫೋಟಕ ಹೇಳಿಕೆ: ಪ್ರಾಣಿ ಬಲಿ ಕೊಟ್ಟು ಶತ್ರುಭೈರವಿ ಯಾಗದ ಬಗ್ಗೆ ತನಿಖೆ?

Published : Jun 01, 2024, 12:44 PM ISTUpdated : Jun 01, 2024, 12:45 PM IST

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ನನ್ನ ವಿರುದ್ಧ ಹಾಗೂ ನಮ್ಮ ಸರ್ಕಾರದ ವಿರುದ್ಧ ಕೇರಳದಲ್ಲಿ ಶತ್ರುಭೈರವಿ ಯಾಗ ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದರು. ಘಟನೆ ಸಂಬಂಧ ಕೇರಳ ಸರ್ಕಾರ  ಅಲರ್ಟ್‌ ಆಗಿ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಿದೆ. 

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ (DK Shivakumar) ಅವರು ನನ್ನ ವಿರುದ್ಧ ಹಾಗೂ ನಮ್ಮ ಸರ್ಕಾರದ ವಿರುದ್ಧ ಕೇರಳದಲ್ಲಿ ಶತ್ರುಭೈರವಿ ಯಾಗ  (Shatrubhairavi Yaga) ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದರು. ಘಟನೆ ಸಂಬಂಧ ಕೇರಳ ಸರ್ಕಾರ (Kerala Govt) ಅಲರ್ಟ್‌ ಆಗಿ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಿದೆ. ಕೇರಳ ರಾಜ್ಯ ಗುಪ್ತಚರ ಹಾಗೂ ಪೊಲೀಸ್ ಇಲಾಖೆ ಮೂಲಕ ತನಿಖೆ ನಡೆಸಿದ್ದು, ಕೇರಳ ರಾಜ್ಯದ ಕಣ್ಣೂರು, ತಳಿಪರಂಬ ಭಾಗದಲ್ಲಿ ಮಾಹಿತಿ ಸಂಗ್ರಹ ಮಾಡಲಾಗಿದೆ. 

ಈ ನಡುವೆ ಪ್ರಾಣಿ ಬಲಿ ಕೊಟ್ಟು ಶತ್ರುಭೈರವಿ ಯಾಗ ನಡೆದಿದ್ಯಾ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದ್ದು, ಸಮಗ್ರ ಮಾಹಿತಿ ಸಂಗ್ರಹಿಸಿ ಕೇರಳ ಡಿಜಿಪಿಗೆ ವಿಶೇಷ ತಂಡ ವರದಿ ಸಲ್ಲಿಸಿದೆ. ತಳಿಪರಂ ರಾಜರಾಜೇಶ್ವರಂ, ಕಣ್ಣೂರು ಸುತ್ತಮುತ್ತ ಪ್ರದೇಶದಲ್ಲಿ ತನಿಖೆ ಮಾಡಲಾಗಿದ್ದು, ಯಾವುದೇ ಪ್ರಾಣಿ ಬಲಿ ಯಾಗ ನಡೆದಿಲ್ಲ ಎಂದು ಡಿಜಿಪಿಗೆ ವರದಿ ಸಲ್ಲಿಕೆ ಮಾಡಲಾಗಿದೆ. ಅಲ್ಲದೆ ಕರ್ನಾಟಕ ಪೊಲೀಸ್ ವಿಶೇಷ ತಂಡದಿಂದಲೂ ಗುಪ್ತವಾಗಿ ಮಾಹಿತಿ ಸಂಗ್ರಹ ಮಾಡಲಾಗಿದೆ. ಆದರೆ, ಯಾರ ತನಿಖೆಯಲ್ಲೂ ಸಹ ಈ ವಿಷಯ ಕಂಡುಬಂದಿಲ್ಲ. 

ಈ ನಡುವೆ ಡಿಕೆಶಿ ಆರೋಪವನ್ನು ಕೇರಳ ದೇವಸ್ವಂ ಬೋರ್ಡ್ (Kerala Devaswam Board) ಸಚಿವ ರಾಧಾಕೃಷ್ಣನ್‌ ತಳ್ಳಿಹಾಕಿದ್ದಾರೆ.  ಕೇರಳದ ಯಾವುದೇ ದೇವಸ್ಥಾನಗಳಲ್ಲಿ ಪ್ರಾಣಿ ಬಲಿ ನಡೆಯಲ್ಲ ಅಂತ ಸ್ಪಷ್ಟನೆ ಸಹ ನಿಡಿದ್ದಾರೆ. ಜೊತೆಗೆ ಡಿಕೆಶಿ ಆರೋಪವನ್ನು ತಳಿಪರಂ ಶ್ರೀರಾಜರಾಜೇಶ್ವರಂ ದೇಗುಲ ಅಲ್ಲಗೆಳೆದಿದೆ. ದೇವಸ್ವಂ ಬೋರ್ಡ್ ಅಧೀನದ ದೇಗುಲಗಳಲ್ಲಿ ಪ್ರಾಣಿ ಬಲಿ ಮಾಡಲ್ಲ, ಪ್ರಾಣಿ ಬಲಿ ಒಳಗೊಂಡ ಯಾವುದೇ ಪೂಜೆ ಅಥವಾ ನೈವೇದ್ಯ ಮಾಡಲ್ಲ ಎಂದು ತಿಳಿಸಲಾಗಿದೆ. 
 
ಇನ್ನು ಸಿಎಂ ಮತ್ತು ನನ್ನ ವಿರುದ್ಧ ಕೇರಳದಲ್ಲಿ ಶತ್ರುಭೈರವಿ ಯಾಗ ಮಾಡಲಾಗಿದೆ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಶತ್ರು ಸಂಹಾರಕ್ಕಾಗಿ ಮಾಡುತ್ತಿರುವ ಶತ್ರು ಭೈರವಿ ಯಾಗ ಎಂದಿದ್ದ ಡಿಕೆಶಿ ಯಾಗದಲ್ಲಿ ಮೇಕೆ, ಹಂದಿ, ಕುರಿ, ಬಲಿ ಕೊಟ್ಟಿದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ವೀಕ್ಷಿಸಿ;  Lok Sabha elections 2024: ಕ್ಲೈಮ್ಯಾಕ್ಸ್ ಹಂತ ತಲುಪಿದ ಲೋಕಸಭಾ ಮಹಾಸಮರ: ಇಂದೇ ಹೊರಬೀಳಲಿದೆ ಎಕ್ಸಿಟ್ ಪೋಲ್ ಭವಿಷ್ಯ!

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!