ಕೇರಳದಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಸ್ಫೋಟಕ ಹೇಳಿಕೆ: ಪ್ರಾಣಿ ಬಲಿ ಕೊಟ್ಟು ಶತ್ರುಭೈರವಿ ಯಾಗದ ಬಗ್ಗೆ ತನಿಖೆ?

ಕೇರಳದಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಸ್ಫೋಟಕ ಹೇಳಿಕೆ: ಪ್ರಾಣಿ ಬಲಿ ಕೊಟ್ಟು ಶತ್ರುಭೈರವಿ ಯಾಗದ ಬಗ್ಗೆ ತನಿಖೆ?

Published : Jun 01, 2024, 12:44 PM ISTUpdated : Jun 01, 2024, 12:45 PM IST

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ನನ್ನ ವಿರುದ್ಧ ಹಾಗೂ ನಮ್ಮ ಸರ್ಕಾರದ ವಿರುದ್ಧ ಕೇರಳದಲ್ಲಿ ಶತ್ರುಭೈರವಿ ಯಾಗ ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದರು. ಘಟನೆ ಸಂಬಂಧ ಕೇರಳ ಸರ್ಕಾರ  ಅಲರ್ಟ್‌ ಆಗಿ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಿದೆ. 

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ (DK Shivakumar) ಅವರು ನನ್ನ ವಿರುದ್ಧ ಹಾಗೂ ನಮ್ಮ ಸರ್ಕಾರದ ವಿರುದ್ಧ ಕೇರಳದಲ್ಲಿ ಶತ್ರುಭೈರವಿ ಯಾಗ  (Shatrubhairavi Yaga) ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದರು. ಘಟನೆ ಸಂಬಂಧ ಕೇರಳ ಸರ್ಕಾರ (Kerala Govt) ಅಲರ್ಟ್‌ ಆಗಿ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಿದೆ. ಕೇರಳ ರಾಜ್ಯ ಗುಪ್ತಚರ ಹಾಗೂ ಪೊಲೀಸ್ ಇಲಾಖೆ ಮೂಲಕ ತನಿಖೆ ನಡೆಸಿದ್ದು, ಕೇರಳ ರಾಜ್ಯದ ಕಣ್ಣೂರು, ತಳಿಪರಂಬ ಭಾಗದಲ್ಲಿ ಮಾಹಿತಿ ಸಂಗ್ರಹ ಮಾಡಲಾಗಿದೆ. 

ಈ ನಡುವೆ ಪ್ರಾಣಿ ಬಲಿ ಕೊಟ್ಟು ಶತ್ರುಭೈರವಿ ಯಾಗ ನಡೆದಿದ್ಯಾ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದ್ದು, ಸಮಗ್ರ ಮಾಹಿತಿ ಸಂಗ್ರಹಿಸಿ ಕೇರಳ ಡಿಜಿಪಿಗೆ ವಿಶೇಷ ತಂಡ ವರದಿ ಸಲ್ಲಿಸಿದೆ. ತಳಿಪರಂ ರಾಜರಾಜೇಶ್ವರಂ, ಕಣ್ಣೂರು ಸುತ್ತಮುತ್ತ ಪ್ರದೇಶದಲ್ಲಿ ತನಿಖೆ ಮಾಡಲಾಗಿದ್ದು, ಯಾವುದೇ ಪ್ರಾಣಿ ಬಲಿ ಯಾಗ ನಡೆದಿಲ್ಲ ಎಂದು ಡಿಜಿಪಿಗೆ ವರದಿ ಸಲ್ಲಿಕೆ ಮಾಡಲಾಗಿದೆ. ಅಲ್ಲದೆ ಕರ್ನಾಟಕ ಪೊಲೀಸ್ ವಿಶೇಷ ತಂಡದಿಂದಲೂ ಗುಪ್ತವಾಗಿ ಮಾಹಿತಿ ಸಂಗ್ರಹ ಮಾಡಲಾಗಿದೆ. ಆದರೆ, ಯಾರ ತನಿಖೆಯಲ್ಲೂ ಸಹ ಈ ವಿಷಯ ಕಂಡುಬಂದಿಲ್ಲ. 

ಈ ನಡುವೆ ಡಿಕೆಶಿ ಆರೋಪವನ್ನು ಕೇರಳ ದೇವಸ್ವಂ ಬೋರ್ಡ್ (Kerala Devaswam Board) ಸಚಿವ ರಾಧಾಕೃಷ್ಣನ್‌ ತಳ್ಳಿಹಾಕಿದ್ದಾರೆ.  ಕೇರಳದ ಯಾವುದೇ ದೇವಸ್ಥಾನಗಳಲ್ಲಿ ಪ್ರಾಣಿ ಬಲಿ ನಡೆಯಲ್ಲ ಅಂತ ಸ್ಪಷ್ಟನೆ ಸಹ ನಿಡಿದ್ದಾರೆ. ಜೊತೆಗೆ ಡಿಕೆಶಿ ಆರೋಪವನ್ನು ತಳಿಪರಂ ಶ್ರೀರಾಜರಾಜೇಶ್ವರಂ ದೇಗುಲ ಅಲ್ಲಗೆಳೆದಿದೆ. ದೇವಸ್ವಂ ಬೋರ್ಡ್ ಅಧೀನದ ದೇಗುಲಗಳಲ್ಲಿ ಪ್ರಾಣಿ ಬಲಿ ಮಾಡಲ್ಲ, ಪ್ರಾಣಿ ಬಲಿ ಒಳಗೊಂಡ ಯಾವುದೇ ಪೂಜೆ ಅಥವಾ ನೈವೇದ್ಯ ಮಾಡಲ್ಲ ಎಂದು ತಿಳಿಸಲಾಗಿದೆ. 
 
ಇನ್ನು ಸಿಎಂ ಮತ್ತು ನನ್ನ ವಿರುದ್ಧ ಕೇರಳದಲ್ಲಿ ಶತ್ರುಭೈರವಿ ಯಾಗ ಮಾಡಲಾಗಿದೆ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಶತ್ರು ಸಂಹಾರಕ್ಕಾಗಿ ಮಾಡುತ್ತಿರುವ ಶತ್ರು ಭೈರವಿ ಯಾಗ ಎಂದಿದ್ದ ಡಿಕೆಶಿ ಯಾಗದಲ್ಲಿ ಮೇಕೆ, ಹಂದಿ, ಕುರಿ, ಬಲಿ ಕೊಟ್ಟಿದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ವೀಕ್ಷಿಸಿ;  Lok Sabha elections 2024: ಕ್ಲೈಮ್ಯಾಕ್ಸ್ ಹಂತ ತಲುಪಿದ ಲೋಕಸಭಾ ಮಹಾಸಮರ: ಇಂದೇ ಹೊರಬೀಳಲಿದೆ ಎಕ್ಸಿಟ್ ಪೋಲ್ ಭವಿಷ್ಯ!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!