ಗಬ್ಬೆದ್ದು ನಾರುತ್ತಿದೆ ಇಂದಿರಾ ಕ್ಯಾಂಟೀನ್‌: ಕ್ಯಾಂಟೀನ್‌ ಒಳಗೆ ನುಗ್ಗಿದ ಚರಂಡಿ ನೀರು !

ಗಬ್ಬೆದ್ದು ನಾರುತ್ತಿದೆ ಇಂದಿರಾ ಕ್ಯಾಂಟೀನ್‌: ಕ್ಯಾಂಟೀನ್‌ ಒಳಗೆ ನುಗ್ಗಿದ ಚರಂಡಿ ನೀರು !

Published : Sep 08, 2023, 02:40 PM IST

ಬಡವರು ಉಪವಾಸದಿಂದ ಮಲಗಬಾರದು. ಕಡಿಮೆ ದರದಲ್ಲಿ ಮೂರು ಹೊತ್ತು ಹೊಟ್ಟೆ ತುಂಬಾ ಊಟ ಮಾಡ್ಬೇಕು ಅನ್ನೋದು ಸಿಎಂ ಸಿದ್ದರಾಮಯ್ಯನವರು ಕನಸು. ಎರಡನೇ ಸಲ ಸಿಎಂ ಆದಮೇಲಂತೂ ಬಂದ್ ಆಗಿದ್ದ ಇಂದಿರಾ ಕ್ಯಾಂಟೀನ್‌ಗಳು ಮತ್ತೆ ಓಪನ್ ಆಗ್ತಿವೆ. ಆದ್ರೆ, ಆ ಜಿಲ್ಲೆಯಲ್ಲಿರೋ ಏಕೈಕ ಇಂದಿರಾ ಕ್ಯಾಂಟೀನ್ ಗಬ್ಬೆದ್ದು ನಾರುತ್ತಿದೆ. 

ಸಿಎಂ ಸಿದ್ದರಾಮಯ್ಯ(Siddaramaiah) ನೇತೃತ್ವದ ಸರ್ಕಾರ 2013ರಲ್ಲಿ ಅಧಿಕಾರಕ್ಕೆ ಬಂದ ಮೇಲೆ ಬಡವರು ಉಪವಾಸದಿಂದ ಬಳಲಬಾರದು ಅಂತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್(Indira Canteen) ಯೋಜನೆ ಜಾರಿಗೆ ತಂದ್ರು, ಆದ್ರೆ, ನಂತರ ಅಧಿಕಾರಕ್ಕೆ ಬಂದ ಬಿಜೆಪಿ(BJP) ಸರ್ಕಾರ ಕೆಲವು ವರ್ಷ ಬಂದ್ ಮಾಡಿತ್ತು. ಇಂದು ಮತ್ತೆ ಸಿದ್ದರಾಮಯ್ಯ ಅವ್ರು ಸಿಎಂ ಆಗಿದ್ದು, ಮತ್ತೆ ಬಡವರ ಹೊಟ್ಟೆ ತುಂಬಿಸುವ ಯೋಜನೆ ಜಾರಿಯಾಗಿದೆ. ಆದ್ರೆ ಬಡವರು, ಕೂಲಿ ಕಾರ್ಮಿಕರು ಹಾಗೂ ನಿರ್ಗತಿಕರಿಗೆ ಮೂರು ಹೊತ್ತು ಹೊಟ್ಟೆ ತುಂಬಿಸುವ ಮಹತ್ವಾಕಾಂಕ್ಷೆ ಯೋಜನೆಯ ಇಂದಿರಾ ಕ್ಯಾಂಟೀನ್ ಮಾತ್ರ ಯಾದಗಿರಿಯಲ್ಲಿ(Yadagiri) ಹಳ್ಳ ಹಿಡಿದಿದೆ ನೋಡಿ.

ಯಾದಗಿರಿ ನಗರದ ಹೃದಯಭಾಗವಾದ ಗಂಜ್ ಏರಿಯಾದಲ್ಲಿರುವ ಈ ಇಂದಿರಾ ಕ್ಯಾಂಟೀನ್ ದುರ್ವಾಸನೆಯಿಂದ ನಾರುವಂತಾಗಿದೆ. ಕ್ಯಾಂಟೀನ್ ಒಳಗಡೆ ಆವರಿಸಿಕೊಂಡ ಚರಂಡಿ ನೀರು ದುರ್ನಾತದಿಂದ ಸಾರ್ವಜನಿಕರು ಹೈರಾಣಾಗಿದ್ದಾರೆ. ಜನರು ಊಟ ಮಾಡುವಾಗ ಹಾಗೂ ಊಟ ಬಡಿಸುವ ಸಿಬ್ಬಂದಿ, ಮೂಗಿಗೆ ಬಟ್ಟೆ ಕಟ್ಟಿಕೊಂಡು ಊಟ ಮಾಡುವಂತಾಗಿದೆ. 
 
ಇಲ್ಲಿ ಪ್ರತಿ ದಿನ ಪ್ರತಿದಿನ ಬೆಳಗ್ಗೆ ಹೊತ್ತು 300ಕ್ಕೂ ಹೆಚ್ಚು ಜನರು ತಿಂಡಿ ಸೇವಿಸ್ತಾರೆ. 400ಕ್ಕೂ ಅಧಿಕ ಜನರು ಮಧ್ಯಾಹ್ನದ ಊಟ ಸೇವಿಸ್ತಾರೆ. ರಾತ್ರಿ ವೇಳೆಯೂ ಹಲವು ಜನರು ಕಡಿಮೆ ದರದಲ್ಲಿ ಊಟ ಮಾಡಿ ಹೊಟ್ಟೆ ತುಂಬಿಸಿಕೊಳ್ತಾರೆ. ಆದ್ರೆ, ಕ್ಯಾಂಟೀನ್ನಲ್ಲಿ ಸರಿಯಾದ ಮೆನ್ಯು ಬೋರ್ಡ್ ಇಲ್ಲ. ಜನರಿಗೆ ಗೊತ್ತಾಗಲು ಇಂದಿರಾ ಕ್ಯಾಂಟೀನ್ ಹೆಸರೇ ಇಲ್ಲ. ಲೈಟ್ ಇಲ್ಲ, ಈ ಯೋಜನೆಯನ್ನ ನಗರಸಭೆ ಹಳ್ಳ ಹಿಡಿಸಿ ಹಾಕಿದೆ.

ಈ ಇಂದಿರಾ ಕ್ಯಾಂಟೀನ್ ಅನ್ನು ವಿಜಯಪುರ ಮೂಲದ ವ್ಯಕ್ತಿಯೊಬ್ಬ ಗುತ್ತಿಗೆ ಪಡೆದಿದ್ದಾನೆ. ಆದ್ರೆ ಸರ್ಕಾರ ಕಳೆದ ಎಂಟು ತಿಂಗಳಿಂದ ಗುತ್ತಿಗೆದಾರರ ಹಣವನ್ನು ಸಹ ಬಿಡುಗಡೆ ಮಾಡಿಲ್ಲ. ಗುತ್ತಿಗೆದಾರ ಕೂಡ ತನ್ನ ಸ್ವಂತ ಹಣದಿಂದ ಇಂದಿರಾ ಕ್ಯಾಂಟೀನ್ ಅನ್ನು ನಿರ್ವಹಣೆ ಮಾಡ್ತಿದ್ದಾರೆ. ಇದು ಗುತ್ತಿಗೆದಾರಿಗೆ ಒಂದು ಕಡೆ ಸಂಕಟವಾಗಿದೆ. ಇದರಿಂದಾಗಿ ಸರಿಯಾಗಿ ಅಂದ್ರೆ ಮೆನ್ಯುಗೆ ತಕ್ಕಂತೆ ಊಟ ಹಾಗೂ ತಿಂಡಿ ಸಿಗ್ತಿಲ್ಲ. ಸರ್ಕಾರ ಸರಿಯಾಗಿ ಹಣವನ್ನು ಸಹ ನೀಡಿದ್ರೆ ಅವ್ರು ಕೂಡ ವ್ಯವಸ್ಥಿತವಾದ ಊಟ ಹಾಗೂ ತಿಂಡಿಯನ್ನು ನೀಡ್ತಿದ್ರು, ಆದ್ರೆ ಸರ್ಕಾರದ ನಿರ್ಲಕ್ಷ್ಯತನದಿಂದ ಜನರ ಹೊಟ್ಟೆಗೆ ಸರಿಯಾದ ಊಟ ಸಿಗ್ತಿಲ್ಲ.

ಇದನ್ನೂ ವೀಕ್ಷಿಸಿ:  ಜಿ-20 ಸಭೆ: ಹೆಲಿಕಾಪ್ಟರ್‌ನಿಂದ ಲಕ್ಸುರಿ ಕಾರ್ ತನಕ..ಹೇಗಿರಲಿದೆ ಭದ್ರತೆ ?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?