ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

Published : Sep 02, 2023, 10:44 AM IST

ಅದು ಮಾಜಿ ಸಿಎಂ ತವರು ಜಿಲ್ಲೆ. ಅಲ್ಲಿ ವ್ಯವಸಾಯವೇ ಅನ್ನದಾತರ ಉಸಿರು. ಆದ್ರೆ ಅದೇ ಜಿಲ್ಲೆಯ 8 ತಾಲೂಕಿಗಳಿಗೆ ಬರದ ಛಾಯೇ ಆವರಿಸಿದೆ. ಬೆಳೆದ ಬೆಳೆಯನ್ನೇ ರೈತರು ನಾಶ ಮಾಡ್ತಿದ್ರೆ. ಇತ್ತ ಹನಿ ನೀರಿಗೂ ಸಂಕಷ್ಟ ಎದುರಾಗಿದೆ.
 

ಹಾವೇರಿ ಅಂದ್ರೆ ಕೃಷಿ ಪ್ರಧಾನ ಜಿಲ್ಲೆಯಾಗಿದೆ. ವ್ಯವಸಾಯವೇ ಇಲ್ಲಿನ ಅನ್ನದಾತರ ಉಸಿರು. ಆದ್ರೆ ಮಳೆಗಾಲದಲ್ಲಿ ರೈತರು(Farmer) ಆಕಾಶದತ್ತ ಮುಖ ಮಾಡುವ ಪರಿಸ್ಥಿತಿ ಎದುರಾಗಿದೆ. ಯಾವಾಗ ವರುಣ ಕೃಪೆ ತೋರಿಸುತ್ತಾನೆ ಅಂತಾ ಕಾದು ಕುಳಿತ್ತಿದ್ದಾರೆ. ಕಳೆದು ಎರಡು ವರ್ಷದಿಂದ ವಿಪರೀತ ಮಳೆ(Rain) ಸುರಿಯುತ್ತಿದ್ದ ಹಾವೇರಿಯಲ್ಲಿ(Haveri) ಈ ಬಾರಿ ಬರದ ಪರಿಸ್ಥಿತಿ ಎದುರಾಗಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಮೆಕ್ಕೆಜೋಳ, ಹತ್ತಿ, ಶೇಂಗಾ, ತೊಗರಿ ಬೆಳೆದ ರೈತರು ಮಳೆಗಾಗಿ ಕಾದು ಕುಳಿತಿದ್ದಾರೆ. ಆದ್ರೆ ಒಂದು ತಿಂಗಳಿಂದ ಮಳೆಯ ದರ್ಶನವಾಗಿಲ್ಲ. ಇಡೀ ಜಿಲ್ಲೆಯಲ್ಲಿ ಬರದ ಕಾರ್ಮೋಡ ಆವರಿಸಿದೆ. ಜೂನ್‌ನಿಂದ ಆಗಸ್ಟ್‌ವರೆಗೂ ಶೇ.25ರಷ್ಟು ಮಳೆ ಕೊರತೆಯಾಗಿದ್ದು, ಬರ(Drought)ಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರು ಆಗ್ರಹಿಸಿದ್ದಾರೆ. ಬೆಳೆ ಮಾತ್ರವಲ್ಲ ಕುಡಿಯೋ ನೀರಿಗೂ ಹಾಹಾಕಾರ ಶುರುವಾಗಿದೆ. ಜಿಲ್ಲೆಯಲ್ಲಿ ಹರಿಯುವ ವರದಾ, ತುಂಗಭದ್ರಾ, ಧರ್ಮಾ, ಕುಮದ್ವತಿ ನದಿಗಳಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿ ಅಂತರ್ಜಲ ಮಟ್ಟ ಕುಸಿದು ಕೊಳವೆಬಾವಿಗಳು ಬತ್ತಿಹೋಗುತ್ತಿವೆ. ಆರಂಭದಲ್ಲಿ ಬಿದ್ದ ಮಳೆಗೆ ಸಾಲ ಮಾಡಿ ರೈತರು ಬಿತ್ತನೆ ಮಾಡಿದ್ದಾರೆ. ಆದ್ರೀಗ ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರಿಗೆ ಬ್ಯಾಂಕ್‌ಗಳು ಸಾಲ ತೀರಿಸುವಂತೆ ನೋಟಿಸ್ ಕೊಡ್ತಿದ್ದಾರೆ. ರೈತರಿಗೆ ಇಷ್ಟೆಲ್ಲಾ ಸಮಸ್ಯೆ ಆದ್ರೂ ಕೃಷಿ ಇಲಾಖೆ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ..ಜಿಲ್ಲೆಯಲ್ಲಿ ಎಷ್ಟು ಬೆಳೆ ನಷ್ಟವಾಗಿದೆ ಅನ್ನೋ ಅಂದಾಜಿಲ್ಲ.

ಇದನ್ನೂ ವೀಕ್ಷಿಸಿ:  ಸೂರ್ಯನತ್ತ ‘ಆದಿತ್ಯ ಎಲ್-1’ ಉಡಾವಣೆಗೆ ಕ್ಷಣಗಣನೆ: ಶ್ರೀಹರಿಕೋಟಾದಿಂದ ರಾಕೆಟ್ ಉಡ್ಡಯನ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more