ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

Published : Sep 02, 2023, 10:44 AM IST

ಅದು ಮಾಜಿ ಸಿಎಂ ತವರು ಜಿಲ್ಲೆ. ಅಲ್ಲಿ ವ್ಯವಸಾಯವೇ ಅನ್ನದಾತರ ಉಸಿರು. ಆದ್ರೆ ಅದೇ ಜಿಲ್ಲೆಯ 8 ತಾಲೂಕಿಗಳಿಗೆ ಬರದ ಛಾಯೇ ಆವರಿಸಿದೆ. ಬೆಳೆದ ಬೆಳೆಯನ್ನೇ ರೈತರು ನಾಶ ಮಾಡ್ತಿದ್ರೆ. ಇತ್ತ ಹನಿ ನೀರಿಗೂ ಸಂಕಷ್ಟ ಎದುರಾಗಿದೆ.
 

ಹಾವೇರಿ ಅಂದ್ರೆ ಕೃಷಿ ಪ್ರಧಾನ ಜಿಲ್ಲೆಯಾಗಿದೆ. ವ್ಯವಸಾಯವೇ ಇಲ್ಲಿನ ಅನ್ನದಾತರ ಉಸಿರು. ಆದ್ರೆ ಮಳೆಗಾಲದಲ್ಲಿ ರೈತರು(Farmer) ಆಕಾಶದತ್ತ ಮುಖ ಮಾಡುವ ಪರಿಸ್ಥಿತಿ ಎದುರಾಗಿದೆ. ಯಾವಾಗ ವರುಣ ಕೃಪೆ ತೋರಿಸುತ್ತಾನೆ ಅಂತಾ ಕಾದು ಕುಳಿತ್ತಿದ್ದಾರೆ. ಕಳೆದು ಎರಡು ವರ್ಷದಿಂದ ವಿಪರೀತ ಮಳೆ(Rain) ಸುರಿಯುತ್ತಿದ್ದ ಹಾವೇರಿಯಲ್ಲಿ(Haveri) ಈ ಬಾರಿ ಬರದ ಪರಿಸ್ಥಿತಿ ಎದುರಾಗಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಮೆಕ್ಕೆಜೋಳ, ಹತ್ತಿ, ಶೇಂಗಾ, ತೊಗರಿ ಬೆಳೆದ ರೈತರು ಮಳೆಗಾಗಿ ಕಾದು ಕುಳಿತಿದ್ದಾರೆ. ಆದ್ರೆ ಒಂದು ತಿಂಗಳಿಂದ ಮಳೆಯ ದರ್ಶನವಾಗಿಲ್ಲ. ಇಡೀ ಜಿಲ್ಲೆಯಲ್ಲಿ ಬರದ ಕಾರ್ಮೋಡ ಆವರಿಸಿದೆ. ಜೂನ್‌ನಿಂದ ಆಗಸ್ಟ್‌ವರೆಗೂ ಶೇ.25ರಷ್ಟು ಮಳೆ ಕೊರತೆಯಾಗಿದ್ದು, ಬರ(Drought)ಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರು ಆಗ್ರಹಿಸಿದ್ದಾರೆ. ಬೆಳೆ ಮಾತ್ರವಲ್ಲ ಕುಡಿಯೋ ನೀರಿಗೂ ಹಾಹಾಕಾರ ಶುರುವಾಗಿದೆ. ಜಿಲ್ಲೆಯಲ್ಲಿ ಹರಿಯುವ ವರದಾ, ತುಂಗಭದ್ರಾ, ಧರ್ಮಾ, ಕುಮದ್ವತಿ ನದಿಗಳಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿ ಅಂತರ್ಜಲ ಮಟ್ಟ ಕುಸಿದು ಕೊಳವೆಬಾವಿಗಳು ಬತ್ತಿಹೋಗುತ್ತಿವೆ. ಆರಂಭದಲ್ಲಿ ಬಿದ್ದ ಮಳೆಗೆ ಸಾಲ ಮಾಡಿ ರೈತರು ಬಿತ್ತನೆ ಮಾಡಿದ್ದಾರೆ. ಆದ್ರೀಗ ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರಿಗೆ ಬ್ಯಾಂಕ್‌ಗಳು ಸಾಲ ತೀರಿಸುವಂತೆ ನೋಟಿಸ್ ಕೊಡ್ತಿದ್ದಾರೆ. ರೈತರಿಗೆ ಇಷ್ಟೆಲ್ಲಾ ಸಮಸ್ಯೆ ಆದ್ರೂ ಕೃಷಿ ಇಲಾಖೆ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ..ಜಿಲ್ಲೆಯಲ್ಲಿ ಎಷ್ಟು ಬೆಳೆ ನಷ್ಟವಾಗಿದೆ ಅನ್ನೋ ಅಂದಾಜಿಲ್ಲ.

ಇದನ್ನೂ ವೀಕ್ಷಿಸಿ:  ಸೂರ್ಯನತ್ತ ‘ಆದಿತ್ಯ ಎಲ್-1’ ಉಡಾವಣೆಗೆ ಕ್ಷಣಗಣನೆ: ಶ್ರೀಹರಿಕೋಟಾದಿಂದ ರಾಕೆಟ್ ಉಡ್ಡಯನ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more