ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

Published : Sep 02, 2023, 10:44 AM IST

ಅದು ಮಾಜಿ ಸಿಎಂ ತವರು ಜಿಲ್ಲೆ. ಅಲ್ಲಿ ವ್ಯವಸಾಯವೇ ಅನ್ನದಾತರ ಉಸಿರು. ಆದ್ರೆ ಅದೇ ಜಿಲ್ಲೆಯ 8 ತಾಲೂಕಿಗಳಿಗೆ ಬರದ ಛಾಯೇ ಆವರಿಸಿದೆ. ಬೆಳೆದ ಬೆಳೆಯನ್ನೇ ರೈತರು ನಾಶ ಮಾಡ್ತಿದ್ರೆ. ಇತ್ತ ಹನಿ ನೀರಿಗೂ ಸಂಕಷ್ಟ ಎದುರಾಗಿದೆ.
 

ಹಾವೇರಿ ಅಂದ್ರೆ ಕೃಷಿ ಪ್ರಧಾನ ಜಿಲ್ಲೆಯಾಗಿದೆ. ವ್ಯವಸಾಯವೇ ಇಲ್ಲಿನ ಅನ್ನದಾತರ ಉಸಿರು. ಆದ್ರೆ ಮಳೆಗಾಲದಲ್ಲಿ ರೈತರು(Farmer) ಆಕಾಶದತ್ತ ಮುಖ ಮಾಡುವ ಪರಿಸ್ಥಿತಿ ಎದುರಾಗಿದೆ. ಯಾವಾಗ ವರುಣ ಕೃಪೆ ತೋರಿಸುತ್ತಾನೆ ಅಂತಾ ಕಾದು ಕುಳಿತ್ತಿದ್ದಾರೆ. ಕಳೆದು ಎರಡು ವರ್ಷದಿಂದ ವಿಪರೀತ ಮಳೆ(Rain) ಸುರಿಯುತ್ತಿದ್ದ ಹಾವೇರಿಯಲ್ಲಿ(Haveri) ಈ ಬಾರಿ ಬರದ ಪರಿಸ್ಥಿತಿ ಎದುರಾಗಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಮೆಕ್ಕೆಜೋಳ, ಹತ್ತಿ, ಶೇಂಗಾ, ತೊಗರಿ ಬೆಳೆದ ರೈತರು ಮಳೆಗಾಗಿ ಕಾದು ಕುಳಿತಿದ್ದಾರೆ. ಆದ್ರೆ ಒಂದು ತಿಂಗಳಿಂದ ಮಳೆಯ ದರ್ಶನವಾಗಿಲ್ಲ. ಇಡೀ ಜಿಲ್ಲೆಯಲ್ಲಿ ಬರದ ಕಾರ್ಮೋಡ ಆವರಿಸಿದೆ. ಜೂನ್‌ನಿಂದ ಆಗಸ್ಟ್‌ವರೆಗೂ ಶೇ.25ರಷ್ಟು ಮಳೆ ಕೊರತೆಯಾಗಿದ್ದು, ಬರ(Drought)ಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರು ಆಗ್ರಹಿಸಿದ್ದಾರೆ. ಬೆಳೆ ಮಾತ್ರವಲ್ಲ ಕುಡಿಯೋ ನೀರಿಗೂ ಹಾಹಾಕಾರ ಶುರುವಾಗಿದೆ. ಜಿಲ್ಲೆಯಲ್ಲಿ ಹರಿಯುವ ವರದಾ, ತುಂಗಭದ್ರಾ, ಧರ್ಮಾ, ಕುಮದ್ವತಿ ನದಿಗಳಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿ ಅಂತರ್ಜಲ ಮಟ್ಟ ಕುಸಿದು ಕೊಳವೆಬಾವಿಗಳು ಬತ್ತಿಹೋಗುತ್ತಿವೆ. ಆರಂಭದಲ್ಲಿ ಬಿದ್ದ ಮಳೆಗೆ ಸಾಲ ಮಾಡಿ ರೈತರು ಬಿತ್ತನೆ ಮಾಡಿದ್ದಾರೆ. ಆದ್ರೀಗ ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರಿಗೆ ಬ್ಯಾಂಕ್‌ಗಳು ಸಾಲ ತೀರಿಸುವಂತೆ ನೋಟಿಸ್ ಕೊಡ್ತಿದ್ದಾರೆ. ರೈತರಿಗೆ ಇಷ್ಟೆಲ್ಲಾ ಸಮಸ್ಯೆ ಆದ್ರೂ ಕೃಷಿ ಇಲಾಖೆ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ..ಜಿಲ್ಲೆಯಲ್ಲಿ ಎಷ್ಟು ಬೆಳೆ ನಷ್ಟವಾಗಿದೆ ಅನ್ನೋ ಅಂದಾಜಿಲ್ಲ.

ಇದನ್ನೂ ವೀಕ್ಷಿಸಿ:  ಸೂರ್ಯನತ್ತ ‘ಆದಿತ್ಯ ಎಲ್-1’ ಉಡಾವಣೆಗೆ ಕ್ಷಣಗಣನೆ: ಶ್ರೀಹರಿಕೋಟಾದಿಂದ ರಾಕೆಟ್ ಉಡ್ಡಯನ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more