ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

Published : Sep 02, 2023, 10:44 AM IST

ಅದು ಮಾಜಿ ಸಿಎಂ ತವರು ಜಿಲ್ಲೆ. ಅಲ್ಲಿ ವ್ಯವಸಾಯವೇ ಅನ್ನದಾತರ ಉಸಿರು. ಆದ್ರೆ ಅದೇ ಜಿಲ್ಲೆಯ 8 ತಾಲೂಕಿಗಳಿಗೆ ಬರದ ಛಾಯೇ ಆವರಿಸಿದೆ. ಬೆಳೆದ ಬೆಳೆಯನ್ನೇ ರೈತರು ನಾಶ ಮಾಡ್ತಿದ್ರೆ. ಇತ್ತ ಹನಿ ನೀರಿಗೂ ಸಂಕಷ್ಟ ಎದುರಾಗಿದೆ.
 

ಹಾವೇರಿ ಅಂದ್ರೆ ಕೃಷಿ ಪ್ರಧಾನ ಜಿಲ್ಲೆಯಾಗಿದೆ. ವ್ಯವಸಾಯವೇ ಇಲ್ಲಿನ ಅನ್ನದಾತರ ಉಸಿರು. ಆದ್ರೆ ಮಳೆಗಾಲದಲ್ಲಿ ರೈತರು(Farmer) ಆಕಾಶದತ್ತ ಮುಖ ಮಾಡುವ ಪರಿಸ್ಥಿತಿ ಎದುರಾಗಿದೆ. ಯಾವಾಗ ವರುಣ ಕೃಪೆ ತೋರಿಸುತ್ತಾನೆ ಅಂತಾ ಕಾದು ಕುಳಿತ್ತಿದ್ದಾರೆ. ಕಳೆದು ಎರಡು ವರ್ಷದಿಂದ ವಿಪರೀತ ಮಳೆ(Rain) ಸುರಿಯುತ್ತಿದ್ದ ಹಾವೇರಿಯಲ್ಲಿ(Haveri) ಈ ಬಾರಿ ಬರದ ಪರಿಸ್ಥಿತಿ ಎದುರಾಗಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಮೆಕ್ಕೆಜೋಳ, ಹತ್ತಿ, ಶೇಂಗಾ, ತೊಗರಿ ಬೆಳೆದ ರೈತರು ಮಳೆಗಾಗಿ ಕಾದು ಕುಳಿತಿದ್ದಾರೆ. ಆದ್ರೆ ಒಂದು ತಿಂಗಳಿಂದ ಮಳೆಯ ದರ್ಶನವಾಗಿಲ್ಲ. ಇಡೀ ಜಿಲ್ಲೆಯಲ್ಲಿ ಬರದ ಕಾರ್ಮೋಡ ಆವರಿಸಿದೆ. ಜೂನ್‌ನಿಂದ ಆಗಸ್ಟ್‌ವರೆಗೂ ಶೇ.25ರಷ್ಟು ಮಳೆ ಕೊರತೆಯಾಗಿದ್ದು, ಬರ(Drought)ಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರು ಆಗ್ರಹಿಸಿದ್ದಾರೆ. ಬೆಳೆ ಮಾತ್ರವಲ್ಲ ಕುಡಿಯೋ ನೀರಿಗೂ ಹಾಹಾಕಾರ ಶುರುವಾಗಿದೆ. ಜಿಲ್ಲೆಯಲ್ಲಿ ಹರಿಯುವ ವರದಾ, ತುಂಗಭದ್ರಾ, ಧರ್ಮಾ, ಕುಮದ್ವತಿ ನದಿಗಳಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿ ಅಂತರ್ಜಲ ಮಟ್ಟ ಕುಸಿದು ಕೊಳವೆಬಾವಿಗಳು ಬತ್ತಿಹೋಗುತ್ತಿವೆ. ಆರಂಭದಲ್ಲಿ ಬಿದ್ದ ಮಳೆಗೆ ಸಾಲ ಮಾಡಿ ರೈತರು ಬಿತ್ತನೆ ಮಾಡಿದ್ದಾರೆ. ಆದ್ರೀಗ ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರಿಗೆ ಬ್ಯಾಂಕ್‌ಗಳು ಸಾಲ ತೀರಿಸುವಂತೆ ನೋಟಿಸ್ ಕೊಡ್ತಿದ್ದಾರೆ. ರೈತರಿಗೆ ಇಷ್ಟೆಲ್ಲಾ ಸಮಸ್ಯೆ ಆದ್ರೂ ಕೃಷಿ ಇಲಾಖೆ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ..ಜಿಲ್ಲೆಯಲ್ಲಿ ಎಷ್ಟು ಬೆಳೆ ನಷ್ಟವಾಗಿದೆ ಅನ್ನೋ ಅಂದಾಜಿಲ್ಲ.

ಇದನ್ನೂ ವೀಕ್ಷಿಸಿ:  ಸೂರ್ಯನತ್ತ ‘ಆದಿತ್ಯ ಎಲ್-1’ ಉಡಾವಣೆಗೆ ಕ್ಷಣಗಣನೆ: ಶ್ರೀಹರಿಕೋಟಾದಿಂದ ರಾಕೆಟ್ ಉಡ್ಡಯನ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more