ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

Published : Sep 02, 2023, 10:44 AM IST

ಅದು ಮಾಜಿ ಸಿಎಂ ತವರು ಜಿಲ್ಲೆ. ಅಲ್ಲಿ ವ್ಯವಸಾಯವೇ ಅನ್ನದಾತರ ಉಸಿರು. ಆದ್ರೆ ಅದೇ ಜಿಲ್ಲೆಯ 8 ತಾಲೂಕಿಗಳಿಗೆ ಬರದ ಛಾಯೇ ಆವರಿಸಿದೆ. ಬೆಳೆದ ಬೆಳೆಯನ್ನೇ ರೈತರು ನಾಶ ಮಾಡ್ತಿದ್ರೆ. ಇತ್ತ ಹನಿ ನೀರಿಗೂ ಸಂಕಷ್ಟ ಎದುರಾಗಿದೆ.
 

ಹಾವೇರಿ ಅಂದ್ರೆ ಕೃಷಿ ಪ್ರಧಾನ ಜಿಲ್ಲೆಯಾಗಿದೆ. ವ್ಯವಸಾಯವೇ ಇಲ್ಲಿನ ಅನ್ನದಾತರ ಉಸಿರು. ಆದ್ರೆ ಮಳೆಗಾಲದಲ್ಲಿ ರೈತರು(Farmer) ಆಕಾಶದತ್ತ ಮುಖ ಮಾಡುವ ಪರಿಸ್ಥಿತಿ ಎದುರಾಗಿದೆ. ಯಾವಾಗ ವರುಣ ಕೃಪೆ ತೋರಿಸುತ್ತಾನೆ ಅಂತಾ ಕಾದು ಕುಳಿತ್ತಿದ್ದಾರೆ. ಕಳೆದು ಎರಡು ವರ್ಷದಿಂದ ವಿಪರೀತ ಮಳೆ(Rain) ಸುರಿಯುತ್ತಿದ್ದ ಹಾವೇರಿಯಲ್ಲಿ(Haveri) ಈ ಬಾರಿ ಬರದ ಪರಿಸ್ಥಿತಿ ಎದುರಾಗಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಮೆಕ್ಕೆಜೋಳ, ಹತ್ತಿ, ಶೇಂಗಾ, ತೊಗರಿ ಬೆಳೆದ ರೈತರು ಮಳೆಗಾಗಿ ಕಾದು ಕುಳಿತಿದ್ದಾರೆ. ಆದ್ರೆ ಒಂದು ತಿಂಗಳಿಂದ ಮಳೆಯ ದರ್ಶನವಾಗಿಲ್ಲ. ಇಡೀ ಜಿಲ್ಲೆಯಲ್ಲಿ ಬರದ ಕಾರ್ಮೋಡ ಆವರಿಸಿದೆ. ಜೂನ್‌ನಿಂದ ಆಗಸ್ಟ್‌ವರೆಗೂ ಶೇ.25ರಷ್ಟು ಮಳೆ ಕೊರತೆಯಾಗಿದ್ದು, ಬರ(Drought)ಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರು ಆಗ್ರಹಿಸಿದ್ದಾರೆ. ಬೆಳೆ ಮಾತ್ರವಲ್ಲ ಕುಡಿಯೋ ನೀರಿಗೂ ಹಾಹಾಕಾರ ಶುರುವಾಗಿದೆ. ಜಿಲ್ಲೆಯಲ್ಲಿ ಹರಿಯುವ ವರದಾ, ತುಂಗಭದ್ರಾ, ಧರ್ಮಾ, ಕುಮದ್ವತಿ ನದಿಗಳಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿ ಅಂತರ್ಜಲ ಮಟ್ಟ ಕುಸಿದು ಕೊಳವೆಬಾವಿಗಳು ಬತ್ತಿಹೋಗುತ್ತಿವೆ. ಆರಂಭದಲ್ಲಿ ಬಿದ್ದ ಮಳೆಗೆ ಸಾಲ ಮಾಡಿ ರೈತರು ಬಿತ್ತನೆ ಮಾಡಿದ್ದಾರೆ. ಆದ್ರೀಗ ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರಿಗೆ ಬ್ಯಾಂಕ್‌ಗಳು ಸಾಲ ತೀರಿಸುವಂತೆ ನೋಟಿಸ್ ಕೊಡ್ತಿದ್ದಾರೆ. ರೈತರಿಗೆ ಇಷ್ಟೆಲ್ಲಾ ಸಮಸ್ಯೆ ಆದ್ರೂ ಕೃಷಿ ಇಲಾಖೆ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ..ಜಿಲ್ಲೆಯಲ್ಲಿ ಎಷ್ಟು ಬೆಳೆ ನಷ್ಟವಾಗಿದೆ ಅನ್ನೋ ಅಂದಾಜಿಲ್ಲ.

ಇದನ್ನೂ ವೀಕ್ಷಿಸಿ:  ಸೂರ್ಯನತ್ತ ‘ಆದಿತ್ಯ ಎಲ್-1’ ಉಡಾವಣೆಗೆ ಕ್ಷಣಗಣನೆ: ಶ್ರೀಹರಿಕೋಟಾದಿಂದ ರಾಕೆಟ್ ಉಡ್ಡಯನ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more