ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

Published : Sep 02, 2023, 10:44 AM IST

ಅದು ಮಾಜಿ ಸಿಎಂ ತವರು ಜಿಲ್ಲೆ. ಅಲ್ಲಿ ವ್ಯವಸಾಯವೇ ಅನ್ನದಾತರ ಉಸಿರು. ಆದ್ರೆ ಅದೇ ಜಿಲ್ಲೆಯ 8 ತಾಲೂಕಿಗಳಿಗೆ ಬರದ ಛಾಯೇ ಆವರಿಸಿದೆ. ಬೆಳೆದ ಬೆಳೆಯನ್ನೇ ರೈತರು ನಾಶ ಮಾಡ್ತಿದ್ರೆ. ಇತ್ತ ಹನಿ ನೀರಿಗೂ ಸಂಕಷ್ಟ ಎದುರಾಗಿದೆ.
 

ಹಾವೇರಿ ಅಂದ್ರೆ ಕೃಷಿ ಪ್ರಧಾನ ಜಿಲ್ಲೆಯಾಗಿದೆ. ವ್ಯವಸಾಯವೇ ಇಲ್ಲಿನ ಅನ್ನದಾತರ ಉಸಿರು. ಆದ್ರೆ ಮಳೆಗಾಲದಲ್ಲಿ ರೈತರು(Farmer) ಆಕಾಶದತ್ತ ಮುಖ ಮಾಡುವ ಪರಿಸ್ಥಿತಿ ಎದುರಾಗಿದೆ. ಯಾವಾಗ ವರುಣ ಕೃಪೆ ತೋರಿಸುತ್ತಾನೆ ಅಂತಾ ಕಾದು ಕುಳಿತ್ತಿದ್ದಾರೆ. ಕಳೆದು ಎರಡು ವರ್ಷದಿಂದ ವಿಪರೀತ ಮಳೆ(Rain) ಸುರಿಯುತ್ತಿದ್ದ ಹಾವೇರಿಯಲ್ಲಿ(Haveri) ಈ ಬಾರಿ ಬರದ ಪರಿಸ್ಥಿತಿ ಎದುರಾಗಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಮೆಕ್ಕೆಜೋಳ, ಹತ್ತಿ, ಶೇಂಗಾ, ತೊಗರಿ ಬೆಳೆದ ರೈತರು ಮಳೆಗಾಗಿ ಕಾದು ಕುಳಿತಿದ್ದಾರೆ. ಆದ್ರೆ ಒಂದು ತಿಂಗಳಿಂದ ಮಳೆಯ ದರ್ಶನವಾಗಿಲ್ಲ. ಇಡೀ ಜಿಲ್ಲೆಯಲ್ಲಿ ಬರದ ಕಾರ್ಮೋಡ ಆವರಿಸಿದೆ. ಜೂನ್‌ನಿಂದ ಆಗಸ್ಟ್‌ವರೆಗೂ ಶೇ.25ರಷ್ಟು ಮಳೆ ಕೊರತೆಯಾಗಿದ್ದು, ಬರ(Drought)ಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರು ಆಗ್ರಹಿಸಿದ್ದಾರೆ. ಬೆಳೆ ಮಾತ್ರವಲ್ಲ ಕುಡಿಯೋ ನೀರಿಗೂ ಹಾಹಾಕಾರ ಶುರುವಾಗಿದೆ. ಜಿಲ್ಲೆಯಲ್ಲಿ ಹರಿಯುವ ವರದಾ, ತುಂಗಭದ್ರಾ, ಧರ್ಮಾ, ಕುಮದ್ವತಿ ನದಿಗಳಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿ ಅಂತರ್ಜಲ ಮಟ್ಟ ಕುಸಿದು ಕೊಳವೆಬಾವಿಗಳು ಬತ್ತಿಹೋಗುತ್ತಿವೆ. ಆರಂಭದಲ್ಲಿ ಬಿದ್ದ ಮಳೆಗೆ ಸಾಲ ಮಾಡಿ ರೈತರು ಬಿತ್ತನೆ ಮಾಡಿದ್ದಾರೆ. ಆದ್ರೀಗ ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರಿಗೆ ಬ್ಯಾಂಕ್‌ಗಳು ಸಾಲ ತೀರಿಸುವಂತೆ ನೋಟಿಸ್ ಕೊಡ್ತಿದ್ದಾರೆ. ರೈತರಿಗೆ ಇಷ್ಟೆಲ್ಲಾ ಸಮಸ್ಯೆ ಆದ್ರೂ ಕೃಷಿ ಇಲಾಖೆ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ..ಜಿಲ್ಲೆಯಲ್ಲಿ ಎಷ್ಟು ಬೆಳೆ ನಷ್ಟವಾಗಿದೆ ಅನ್ನೋ ಅಂದಾಜಿಲ್ಲ.

ಇದನ್ನೂ ವೀಕ್ಷಿಸಿ:  ಸೂರ್ಯನತ್ತ ‘ಆದಿತ್ಯ ಎಲ್-1’ ಉಡಾವಣೆಗೆ ಕ್ಷಣಗಣನೆ: ಶ್ರೀಹರಿಕೋಟಾದಿಂದ ರಾಕೆಟ್ ಉಡ್ಡಯನ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more