ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

Published : Sep 02, 2023, 10:44 AM IST

ಅದು ಮಾಜಿ ಸಿಎಂ ತವರು ಜಿಲ್ಲೆ. ಅಲ್ಲಿ ವ್ಯವಸಾಯವೇ ಅನ್ನದಾತರ ಉಸಿರು. ಆದ್ರೆ ಅದೇ ಜಿಲ್ಲೆಯ 8 ತಾಲೂಕಿಗಳಿಗೆ ಬರದ ಛಾಯೇ ಆವರಿಸಿದೆ. ಬೆಳೆದ ಬೆಳೆಯನ್ನೇ ರೈತರು ನಾಶ ಮಾಡ್ತಿದ್ರೆ. ಇತ್ತ ಹನಿ ನೀರಿಗೂ ಸಂಕಷ್ಟ ಎದುರಾಗಿದೆ.
 

ಹಾವೇರಿ ಅಂದ್ರೆ ಕೃಷಿ ಪ್ರಧಾನ ಜಿಲ್ಲೆಯಾಗಿದೆ. ವ್ಯವಸಾಯವೇ ಇಲ್ಲಿನ ಅನ್ನದಾತರ ಉಸಿರು. ಆದ್ರೆ ಮಳೆಗಾಲದಲ್ಲಿ ರೈತರು(Farmer) ಆಕಾಶದತ್ತ ಮುಖ ಮಾಡುವ ಪರಿಸ್ಥಿತಿ ಎದುರಾಗಿದೆ. ಯಾವಾಗ ವರುಣ ಕೃಪೆ ತೋರಿಸುತ್ತಾನೆ ಅಂತಾ ಕಾದು ಕುಳಿತ್ತಿದ್ದಾರೆ. ಕಳೆದು ಎರಡು ವರ್ಷದಿಂದ ವಿಪರೀತ ಮಳೆ(Rain) ಸುರಿಯುತ್ತಿದ್ದ ಹಾವೇರಿಯಲ್ಲಿ(Haveri) ಈ ಬಾರಿ ಬರದ ಪರಿಸ್ಥಿತಿ ಎದುರಾಗಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಮೆಕ್ಕೆಜೋಳ, ಹತ್ತಿ, ಶೇಂಗಾ, ತೊಗರಿ ಬೆಳೆದ ರೈತರು ಮಳೆಗಾಗಿ ಕಾದು ಕುಳಿತಿದ್ದಾರೆ. ಆದ್ರೆ ಒಂದು ತಿಂಗಳಿಂದ ಮಳೆಯ ದರ್ಶನವಾಗಿಲ್ಲ. ಇಡೀ ಜಿಲ್ಲೆಯಲ್ಲಿ ಬರದ ಕಾರ್ಮೋಡ ಆವರಿಸಿದೆ. ಜೂನ್‌ನಿಂದ ಆಗಸ್ಟ್‌ವರೆಗೂ ಶೇ.25ರಷ್ಟು ಮಳೆ ಕೊರತೆಯಾಗಿದ್ದು, ಬರ(Drought)ಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರು ಆಗ್ರಹಿಸಿದ್ದಾರೆ. ಬೆಳೆ ಮಾತ್ರವಲ್ಲ ಕುಡಿಯೋ ನೀರಿಗೂ ಹಾಹಾಕಾರ ಶುರುವಾಗಿದೆ. ಜಿಲ್ಲೆಯಲ್ಲಿ ಹರಿಯುವ ವರದಾ, ತುಂಗಭದ್ರಾ, ಧರ್ಮಾ, ಕುಮದ್ವತಿ ನದಿಗಳಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿ ಅಂತರ್ಜಲ ಮಟ್ಟ ಕುಸಿದು ಕೊಳವೆಬಾವಿಗಳು ಬತ್ತಿಹೋಗುತ್ತಿವೆ. ಆರಂಭದಲ್ಲಿ ಬಿದ್ದ ಮಳೆಗೆ ಸಾಲ ಮಾಡಿ ರೈತರು ಬಿತ್ತನೆ ಮಾಡಿದ್ದಾರೆ. ಆದ್ರೀಗ ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರಿಗೆ ಬ್ಯಾಂಕ್‌ಗಳು ಸಾಲ ತೀರಿಸುವಂತೆ ನೋಟಿಸ್ ಕೊಡ್ತಿದ್ದಾರೆ. ರೈತರಿಗೆ ಇಷ್ಟೆಲ್ಲಾ ಸಮಸ್ಯೆ ಆದ್ರೂ ಕೃಷಿ ಇಲಾಖೆ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ..ಜಿಲ್ಲೆಯಲ್ಲಿ ಎಷ್ಟು ಬೆಳೆ ನಷ್ಟವಾಗಿದೆ ಅನ್ನೋ ಅಂದಾಜಿಲ್ಲ.

ಇದನ್ನೂ ವೀಕ್ಷಿಸಿ:  ಸೂರ್ಯನತ್ತ ‘ಆದಿತ್ಯ ಎಲ್-1’ ಉಡಾವಣೆಗೆ ಕ್ಷಣಗಣನೆ: ಶ್ರೀಹರಿಕೋಟಾದಿಂದ ರಾಕೆಟ್ ಉಡ್ಡಯನ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more