ಮಳೆ ..ಬೆಳೆ ಇಲ್ಲ..ಅನ್ನದಾತ ಕಂಗಾಲು: ರೈತರ ಕೈ ಸೇರದ ಬರ ಪರಿಹಾರ..!

ಮಳೆ ..ಬೆಳೆ ಇಲ್ಲ..ಅನ್ನದಾತ ಕಂಗಾಲು: ರೈತರ ಕೈ ಸೇರದ ಬರ ಪರಿಹಾರ..!

Published : Dec 07, 2023, 10:22 AM ISTUpdated : Dec 07, 2023, 10:23 AM IST

ಈ ಬಾರಿ ಮಳೆ ಕೈಕೊಟ್ಟ ಪರಿಣಾಮ ಅನ್ನದಾತರ ಬವಣೆ ಹೇಳತೀರದಾಗಿದೆ.ಚಾಮರಾಜನಗರ ಜಿಲ್ಲೆಯ ನಾಲ್ಕು ತಾಲೂಕುಗಳು ಬರ ಪೀಡಿತ ಅಂತ ಘೋಷಿಸಿದ್ರೂ ರೈತರಿಗೆ ಬರ ಪರಿಹಾರ ಮಾತ್ರ ಸಿಕ್ಕಿಲ್ಲ.

ಸಾಲಸೂಲ ಮಾಡಿ ಬಿತ್ತನೆ ಮಾಡಿದ ರೈತ. ಮಳೆಯಿಲ್ಲದೆ(Rain) ಸೊರಗಿದ ಬೆಳೆ. ದಿಕ್ಕು ತೋಚದೆ ಕಂಗಾಲಾದ ಅನ್ನದಾತ(Farmer). ಹೌದು, ಚಾಮರಾಜನಗರ(Chamarajanagar) ಜಿಲ್ಲೆ ವ್ಯಾಪ್ತಿಯ ರೈತರು ಮಳೆಯಿಲ್ಲದೆ ಬೆಳೆ(Crops)ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಅದರಲ್ಲೂ ಗುಂಡ್ಲುಪೇಟೆ ಹಾಗೂ ಕೊಳ್ಳೆಗಾಲ ತಾಲೂಕು ವ್ಯಾಪ್ತಿಯಲ್ಲಿ ಸಾವಿರಾರು ಎಕರೆ ಮೆಕ್ಕೆಜೋಳ, ಸೂರ್ಯಕಾಂತಿ, ಕಬ್ಬು ಬೆಳೆ ನೀರಿಲ್ಲದೆ ಒಣಗಿ ನಿಂತಿವೆ. ಈಗಾಗ್ಲೆ ಸರ್ಕಾರ ಕೊಳ್ಳೇಗಾಲ, ಗುಂಡ್ಲುಪೇಟೆ, ಹನೂರು, ಚಾಮರಾಜನಗರ ತಾಲೂಕುಗಳನ್ನ ಬರ ಪೀಡಿತ ಅಂತ ಘೋಷಿಸಿದೆ. ಅಲ್ಲದೆ ಪರಿಹಾರ ನೀಡುವುದಾಗಿ ಭರವಸೆ ನೀಡಿದೆ. ಆದ್ರೆ ಬರ ಅಧ್ಯಯನ ನಡೆಸಿ ತಿಂಗಳುಗಳು ಕಳೆದ್ರೂ ರೈತರ ಖಾತೆಗೆ ಒಂದೇ ಒಂದು ರೂಪಾಯಿ ಸಹ ಜಮೆ ಆಗಿಲ್ಲ. ಪರಿಹಾರದ ಭರವಸೆಯಲ್ಲಿದ್ದ ರೈತರು ಅತ್ತ ಸಾಲ ತೀರಿಸಲಾಗದೆ ಇತ್ತ ಬರ ಪರಿಹಾರವೂ ಸಿಗದೆ ಅಡಕತ್ತರಿಯಲ್ಲಿ ಸಿಲುಕಿದ್ದಾರೆ. ರೈತರಿಗೆ ಪರಿಹಾರದ ಭರವಸೆ ನೀಡಿದ್ದ ಸರ್ಕಾರ ಈಗ ಜಾಣ ಮೌನ ವಹಿಸಿದ್ದು, ಇದರಿಂದಾಗಿ ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರ ಶೀಘ್ರವೇ ಬರ ಪರಿಹಾರ ಬಿಡುಗಡೆ ಮಾಡಿ ನಮ್ಮ ನೆರವಿಗೆ  ನಿಲ್ಲಬೇಕು ಅನ್ನೋದು ರೈತರ ಆಗ್ರಹವಾಗಿದೆ. 

ಇದನ್ನೂ ವೀಕ್ಷಿಸಿ:  ಕುರುಗೋಡು ಪುರಸಭೆಯಲ್ಲಿ ದಾಖಲೆಗಳ ಗೋಲ್ಮಾಲ್..? ಪುರಸಭೆ ಸದಸ್ಯರಿಂದಲೇ ಬಯಲಾಯ್ತು ಕರಾಳ ಸತ್ಯ !

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more