ಮಳೆ ..ಬೆಳೆ ಇಲ್ಲ..ಅನ್ನದಾತ ಕಂಗಾಲು: ರೈತರ ಕೈ ಸೇರದ ಬರ ಪರಿಹಾರ..!

ಮಳೆ ..ಬೆಳೆ ಇಲ್ಲ..ಅನ್ನದಾತ ಕಂಗಾಲು: ರೈತರ ಕೈ ಸೇರದ ಬರ ಪರಿಹಾರ..!

Published : Dec 07, 2023, 10:22 AM ISTUpdated : Dec 07, 2023, 10:23 AM IST

ಈ ಬಾರಿ ಮಳೆ ಕೈಕೊಟ್ಟ ಪರಿಣಾಮ ಅನ್ನದಾತರ ಬವಣೆ ಹೇಳತೀರದಾಗಿದೆ.ಚಾಮರಾಜನಗರ ಜಿಲ್ಲೆಯ ನಾಲ್ಕು ತಾಲೂಕುಗಳು ಬರ ಪೀಡಿತ ಅಂತ ಘೋಷಿಸಿದ್ರೂ ರೈತರಿಗೆ ಬರ ಪರಿಹಾರ ಮಾತ್ರ ಸಿಕ್ಕಿಲ್ಲ.

ಸಾಲಸೂಲ ಮಾಡಿ ಬಿತ್ತನೆ ಮಾಡಿದ ರೈತ. ಮಳೆಯಿಲ್ಲದೆ(Rain) ಸೊರಗಿದ ಬೆಳೆ. ದಿಕ್ಕು ತೋಚದೆ ಕಂಗಾಲಾದ ಅನ್ನದಾತ(Farmer). ಹೌದು, ಚಾಮರಾಜನಗರ(Chamarajanagar) ಜಿಲ್ಲೆ ವ್ಯಾಪ್ತಿಯ ರೈತರು ಮಳೆಯಿಲ್ಲದೆ ಬೆಳೆ(Crops)ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಅದರಲ್ಲೂ ಗುಂಡ್ಲುಪೇಟೆ ಹಾಗೂ ಕೊಳ್ಳೆಗಾಲ ತಾಲೂಕು ವ್ಯಾಪ್ತಿಯಲ್ಲಿ ಸಾವಿರಾರು ಎಕರೆ ಮೆಕ್ಕೆಜೋಳ, ಸೂರ್ಯಕಾಂತಿ, ಕಬ್ಬು ಬೆಳೆ ನೀರಿಲ್ಲದೆ ಒಣಗಿ ನಿಂತಿವೆ. ಈಗಾಗ್ಲೆ ಸರ್ಕಾರ ಕೊಳ್ಳೇಗಾಲ, ಗುಂಡ್ಲುಪೇಟೆ, ಹನೂರು, ಚಾಮರಾಜನಗರ ತಾಲೂಕುಗಳನ್ನ ಬರ ಪೀಡಿತ ಅಂತ ಘೋಷಿಸಿದೆ. ಅಲ್ಲದೆ ಪರಿಹಾರ ನೀಡುವುದಾಗಿ ಭರವಸೆ ನೀಡಿದೆ. ಆದ್ರೆ ಬರ ಅಧ್ಯಯನ ನಡೆಸಿ ತಿಂಗಳುಗಳು ಕಳೆದ್ರೂ ರೈತರ ಖಾತೆಗೆ ಒಂದೇ ಒಂದು ರೂಪಾಯಿ ಸಹ ಜಮೆ ಆಗಿಲ್ಲ. ಪರಿಹಾರದ ಭರವಸೆಯಲ್ಲಿದ್ದ ರೈತರು ಅತ್ತ ಸಾಲ ತೀರಿಸಲಾಗದೆ ಇತ್ತ ಬರ ಪರಿಹಾರವೂ ಸಿಗದೆ ಅಡಕತ್ತರಿಯಲ್ಲಿ ಸಿಲುಕಿದ್ದಾರೆ. ರೈತರಿಗೆ ಪರಿಹಾರದ ಭರವಸೆ ನೀಡಿದ್ದ ಸರ್ಕಾರ ಈಗ ಜಾಣ ಮೌನ ವಹಿಸಿದ್ದು, ಇದರಿಂದಾಗಿ ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರ ಶೀಘ್ರವೇ ಬರ ಪರಿಹಾರ ಬಿಡುಗಡೆ ಮಾಡಿ ನಮ್ಮ ನೆರವಿಗೆ  ನಿಲ್ಲಬೇಕು ಅನ್ನೋದು ರೈತರ ಆಗ್ರಹವಾಗಿದೆ. 

ಇದನ್ನೂ ವೀಕ್ಷಿಸಿ:  ಕುರುಗೋಡು ಪುರಸಭೆಯಲ್ಲಿ ದಾಖಲೆಗಳ ಗೋಲ್ಮಾಲ್..? ಪುರಸಭೆ ಸದಸ್ಯರಿಂದಲೇ ಬಯಲಾಯ್ತು ಕರಾಳ ಸತ್ಯ !

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more