ಮಳೆಯಿಲ್ಲದೇ ಕಂಗೆಟ್ಟ ಅನ್ನದಾತ: ಕೋಲಾರದಲ್ಲಿ ಆವರಿಸಿದ ಬರದ ಛಾಯೆ !

ಮಳೆಯಿಲ್ಲದೇ ಕಂಗೆಟ್ಟ ಅನ್ನದಾತ: ಕೋಲಾರದಲ್ಲಿ ಆವರಿಸಿದ ಬರದ ಛಾಯೆ !

Published : Aug 31, 2023, 10:34 AM IST

ಯಾವುದೇ ನದಿ ನಾಲೆಗಳಿಲ್ಲ, ಈ ಬಾರಿ ಸರಿಯಾದ ಮಳೆ ಕಾಣದ ಕೋಲಾರ ಜಿಲ್ಲೆಗೆ ಬರದ ಭೀತಿ ಎದುರಾಗಿದೆ. ಮುಂಗಾರು ಕೈಕೊಟ್ಟಿದ್ದು, ಸದ್ಯ ಕಳೆದ ಒಂದು ತಿಂಗಳಿಂದ ಬೀಳದ ಮಳೆಯಿಂದ ರೈತರು ಬಿತ್ತನೆ ಕಾರ್ಯದಿಂದ ದೂರ ಉಳಿದಿದ್ದಾರೆ. ಬಿತ್ತನೆ ಮಾಡಿರುವ ಬೆಳೆ ಒಣಗಲಾರಂಭಿಸಿದ್ದು, ಜಿಲ್ಲೆಯಲ್ಲಿ ಬರದ ಛಾಯೆ ಆವರಸಿದೆ.
 

ಕಳೆದೆರಡು ವರ್ಷಗಳಿಂದ ಸಮೃದ್ಧ ಬೆಳೆ ಬೆಳೆದ ಭೂಮಿ(Land) ಬಿರುಕು ಸೆಳೆದಿದೆ. ಬಿಸಿಲ ಝಳದ ಮಧ್ಯೆ ಅನ್ನದಾತ(Farmer) ಮಳೆಗಾಗಿ ಆಗಸದತ್ತ ಮುಖಮಾಡಿ ನೋಡುತ್ತಿದ್ದಾನೆ. ಇದು ಸದ್ಯಕ್ಕೆ ಕೋಲಾರದಲ್ಲಿ ಕಂಡು ಬರುತ್ತಿರೋ ಬರದ(Drought) ಛಾಯೆ. ಮಳೆಯಿಲ್ಲದೇ ಕೋಲಾರ ಜಿಲ್ಲೆಯಲ್ಲಿ ಅನ್ನದಾತ ಕಂಗಾಲಾಗಿದ್ದಾನೆ. ಜುಲೈ ಮೊದಲ ವಾರದಲ್ಲಿ ಮಳೆ ಬೀಳುತ್ತಿದ್ದಂತೆ. ರೈತರು ಖುಷಿಯಲ್ಲಿ ಕೃಷಿ ಕಾರ್ಯ ಆರಂಭಿಸಿದ್ರು. ಒಂದಷ್ಟು ಬಿತ್ತನೆ ಕಾರ್ಯವನ್ನೂ ಮುಗಿಸಿದರು. ಆದ್ರೆ ಆಮೇಲೆ ಕೈಕೊಟ್ಟ ಮಳೆರಾಯ(Rain)ತಿರುಗಿ ಮುಖಮಾಡಿಲ್ಲ. ಕಳೆದೊಂದು ತಿಂಗಳಿನಿಂದ ಮಳೆ ಕೈಕೊಟ್ಟಿದ್ದು, ಬಿತ್ತನೆ ಪ್ರಮಾಣ ಸಹ ತೀವ್ರ ಕುಸಿತ ಕಂಡಿದೆ. ಜಿಲ್ಲೆಯ ಪ್ರಮುಖವಾಗಿ ರಾಗಿ, ತೊಗರಿ, ಎಳ್ಳು, ಜೋಳ, ನೆಲಗಡಲೆಯಂತಹ ದ್ವಿದಳ ಧಾನ್ಯಗಳನ್ನ ಬೆಳೆಯಲಾಗುತ್ತೆ. ಇದುವರೆಗೂ 1 ಲಕ್ಷ 2 ಸಾವಿರ 599 ಹೆಕ್ಟೇರ್ ಪ್ರದೇಶದಲ್ಲಿ ಕೇವಲ 17 ಸಾವಿರದ 627 ಹೆಕ್ಟೇರ್‌ ಬಿತ್ತನೆ ಆಗಿದೆ.  ಮಳೆ ಬಂದ್ರೆ ಈಗಲೂ ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಕೃಷಿ ಇಲಾಖೆ ರೆಡಿ ಇದೆ. ಆದ್ರೆ ಮಳೆಯೇ ಬರ್ತಿಲ್ಲ.

ಇದನ್ನೂ ವೀಕ್ಷಿಸಿ:  ಪುಷ್ಪಾ 2 ಸೆಟ್‌ನಲ್ಲೇ ವಿಡಿಯೋ ಮಾಡಿದ ‘ಬನ್ನಿ’: ರಾಷ್ಟ್ರಪ್ರಶಸ್ತಿ ವಿಜೇತ ಅಲ್ಲು ಅರ್ಜುನ್ ಮನೆ ನೋಡಿದ್ರಾ ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more