ಬೆಂಗಳೂರು ಶಾಲೆಗಳ ವೇಳಾಪಟ್ಟಿ ಬದಲಾಗುತ್ತಾ ? ಸಿಲಿಕಾನ್ ಸಿಟಿ ಸ್ಕೂಲ್ ಬಾಗಿಲು ತೆರೆಯೋದು ಎಷ್ಟೊತ್ತಿಗೆ..?

ಬೆಂಗಳೂರು ಶಾಲೆಗಳ ವೇಳಾಪಟ್ಟಿ ಬದಲಾಗುತ್ತಾ ? ಸಿಲಿಕಾನ್ ಸಿಟಿ ಸ್ಕೂಲ್ ಬಾಗಿಲು ತೆರೆಯೋದು ಎಷ್ಟೊತ್ತಿಗೆ..?

Published : Oct 04, 2023, 10:23 AM IST

ಶಾಲೆಗಳ ಸಮಯ ಬದಲಾವಣೆಗೆ ಶಿಕ್ಷಣ ‌ಇಲಾಖೆ ಮುಂದಾಗಿದೆ. ಈ ಸಂಬಂಧ ಗುರುವಾರ ಖಾಸಗಿ ಶಾಲಾ ಒಕ್ಕೂಟ ಹಾಗೂ ಪೋಷಕರ ಸಂಘಟನೆ ಜತೆ ಶಿಕ್ಷಣ ಇಲಾಖೆ ಸಭೆ ನಡೆಸೋಕೆ ತೀರ್ಮಾನಿಸಿದೆ. ಆದ್ರೆ ಪೋಷಕ ಸಮನ್ವಯ ಸಮಿತಿ ಮಾತ್ರ ಸಮಯ ಬದಲಾವಣೆಗೆ ಚಕಾರ ಎತ್ತಿದೆ.
 

ರಾಜಧಾನಿ ಬೆಂಗಳೂರು (Bengaluru) ಬೆಳೆಯುತ್ತಾ ಹೋದಷ್ಟು ವಾಹನ ದಟ್ಟಣೆ ಕೂಡ ಹೆಚ್ಚಾಗ್ತಾಯಿದೆ. ಇದರಿಂದ ಶಾಲೆಗೆ ಹೋಗುವ ಮಕ್ಕಳಿಗೂ ಕಿರಿಕಿರಿ ಉಂಟಾಗ್ತಿದ್ದು, ಟ್ರಾಫಿಕ್ನಿಂದ ಮಕ್ಕಳು ಸರಿಯಾದ ಸಮಯಕ್ಕೆ ಶಾಲೆಗೆ ತಲುಪೋದಕ್ಕಾಗ್ತಿಲ್ಲ. ಅಷ್ಟೇ ಅಲ್ಲ ಅತಿ ಹೆಚ್ಚು ಶಾಲಾ ವಾಹನಗಳಗಳಿಂದಲೂ ಸಂಚಾರ ದಟ್ಟಣೆ ಏರಿಕೆಯಾಗಿದೆ ಎಂದು ಶಿಕ್ಷಣ ಇಲಾಖೆ(education department) ಶಾಲೆ ವೇಳಾಪಟ್ಟಿಯನ್ನೇ ಬದಲಾಯಿಸಲು ಚಿಂತನೆ ನಡೆಸಿದೆ. ಕೆಲವು ದಿನಗಳ ಹಿಂದಷ್ಟೇ ಶಾಲಾ ಅವಧಿ(School Timings) ಬದಲಾವಣೆ ‌ಮಾಡಲು ಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿತ್ತು. ಈ ವಿಚಾರವಾಗಿ ಶಿಕ್ಷಣ ‌ಇಲಾಖೆ ಆಯುಕ್ತರು ಹಾಗೂ ಸಚಿವರು ಚರ್ಚೆ ನಡೆಸಲು ನಾಳೆ ಸಭೆ‌ ಕರೆದಿದ್ದಾರೆ. ಸಭೆಯಲ್ಲಿ ಖಾಸಗಿ ಶಾಲಾ‌ ಒಕ್ಕೂಟಗಳಾದ ರುಪ್ಸಾ(Rupsa), ಕ್ಯಾಮ್ಸ್ ಹಾಗೂ ಪೋಷಕ ಸಂಘಟನೆಯ ಸದಸ್ಯರು ಭಾಗಿಯಾಗಲಿದ್ದಾರೆ. ಆದ್ರೆ ಶಾಲಾ ವಾಹನಗಳಿಂದಲೇ ಟ್ರಾಫಿಕ್ ಜಾಮ್ ಆಗ್ತಾ ಇದೆ ಅನ್ನೋದು ಸರಿಯಲ್ಲ. ಶಾಲಾ ಸಮಯ ಬದಲಾವಣೆಗೆ ವಿರೋಧ ಇದೆ ಅಂತಾರೆ ಪೋಷಕ ಸಮನ್ವಯ ಸಮಿತಿಯ ಯೋಗಾನಂದ್. ರಾಜ್ಯಾದ್ಯಂತ ಬಹುತೇಕ ಶಾಲೆಗಳಲ್ಲಿ ಬೆಳಗ್ಗೆ 8.45 ರಿಂದ ಮಧ್ಯಾಹ್ನ 3.30 ರವರೆಗೆ ತರಗತಿಗಳು ನಡೆಯುತ್ತವೆ. ಇದರಲ್ಲಿ ಅರ್ಧತಾಸು ಇಳಿಕೆ ಮಾಡಿದರೆ ಹೇಗೆ ಎಂಬ ಚರ್ಚೆ ಕೂಡ ನಡೆದಿದೆ. ಆದ್ರೆ ಟ್ರಾಫಿಕ್ ‌ಕಡಿಮೆ‌ ಮಾಡುವ ನಿಟ್ಟಿನಲ್ಲಿ ಶಾಲಾ ಅವಧಿ ಬೇಗ ಮಾಡುವುದು ಸರಿಯಲ್ಲ, ಇದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತೆ ಎಂದು ಖಾಸಗಿ ಶಾಲಾ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಶಿಕ್ಷಣ ಇಲಾಖೆಗೆ ಸಲಹೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಇದ್ದಕ್ಕಿದ್ದಂತೆ ಲೈವ್ ಬಂದ ಧ್ರುವ ಸರ್ಜಾ! ಮಾರ್ಟಿನ್ ಟ್ರೈಲರ್ ರಿಲೀಸ್ ಬಗ್ಗೆ ಏನಂದ್ರು?

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more