ಬೆಂಗಳೂರು ಶಾಲೆಗಳ ವೇಳಾಪಟ್ಟಿ ಬದಲಾಗುತ್ತಾ ? ಸಿಲಿಕಾನ್ ಸಿಟಿ ಸ್ಕೂಲ್ ಬಾಗಿಲು ತೆರೆಯೋದು ಎಷ್ಟೊತ್ತಿಗೆ..?

ಬೆಂಗಳೂರು ಶಾಲೆಗಳ ವೇಳಾಪಟ್ಟಿ ಬದಲಾಗುತ್ತಾ ? ಸಿಲಿಕಾನ್ ಸಿಟಿ ಸ್ಕೂಲ್ ಬಾಗಿಲು ತೆರೆಯೋದು ಎಷ್ಟೊತ್ತಿಗೆ..?

Published : Oct 04, 2023, 10:23 AM IST

ಶಾಲೆಗಳ ಸಮಯ ಬದಲಾವಣೆಗೆ ಶಿಕ್ಷಣ ‌ಇಲಾಖೆ ಮುಂದಾಗಿದೆ. ಈ ಸಂಬಂಧ ಗುರುವಾರ ಖಾಸಗಿ ಶಾಲಾ ಒಕ್ಕೂಟ ಹಾಗೂ ಪೋಷಕರ ಸಂಘಟನೆ ಜತೆ ಶಿಕ್ಷಣ ಇಲಾಖೆ ಸಭೆ ನಡೆಸೋಕೆ ತೀರ್ಮಾನಿಸಿದೆ. ಆದ್ರೆ ಪೋಷಕ ಸಮನ್ವಯ ಸಮಿತಿ ಮಾತ್ರ ಸಮಯ ಬದಲಾವಣೆಗೆ ಚಕಾರ ಎತ್ತಿದೆ.
 

ರಾಜಧಾನಿ ಬೆಂಗಳೂರು (Bengaluru) ಬೆಳೆಯುತ್ತಾ ಹೋದಷ್ಟು ವಾಹನ ದಟ್ಟಣೆ ಕೂಡ ಹೆಚ್ಚಾಗ್ತಾಯಿದೆ. ಇದರಿಂದ ಶಾಲೆಗೆ ಹೋಗುವ ಮಕ್ಕಳಿಗೂ ಕಿರಿಕಿರಿ ಉಂಟಾಗ್ತಿದ್ದು, ಟ್ರಾಫಿಕ್ನಿಂದ ಮಕ್ಕಳು ಸರಿಯಾದ ಸಮಯಕ್ಕೆ ಶಾಲೆಗೆ ತಲುಪೋದಕ್ಕಾಗ್ತಿಲ್ಲ. ಅಷ್ಟೇ ಅಲ್ಲ ಅತಿ ಹೆಚ್ಚು ಶಾಲಾ ವಾಹನಗಳಗಳಿಂದಲೂ ಸಂಚಾರ ದಟ್ಟಣೆ ಏರಿಕೆಯಾಗಿದೆ ಎಂದು ಶಿಕ್ಷಣ ಇಲಾಖೆ(education department) ಶಾಲೆ ವೇಳಾಪಟ್ಟಿಯನ್ನೇ ಬದಲಾಯಿಸಲು ಚಿಂತನೆ ನಡೆಸಿದೆ. ಕೆಲವು ದಿನಗಳ ಹಿಂದಷ್ಟೇ ಶಾಲಾ ಅವಧಿ(School Timings) ಬದಲಾವಣೆ ‌ಮಾಡಲು ಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿತ್ತು. ಈ ವಿಚಾರವಾಗಿ ಶಿಕ್ಷಣ ‌ಇಲಾಖೆ ಆಯುಕ್ತರು ಹಾಗೂ ಸಚಿವರು ಚರ್ಚೆ ನಡೆಸಲು ನಾಳೆ ಸಭೆ‌ ಕರೆದಿದ್ದಾರೆ. ಸಭೆಯಲ್ಲಿ ಖಾಸಗಿ ಶಾಲಾ‌ ಒಕ್ಕೂಟಗಳಾದ ರುಪ್ಸಾ(Rupsa), ಕ್ಯಾಮ್ಸ್ ಹಾಗೂ ಪೋಷಕ ಸಂಘಟನೆಯ ಸದಸ್ಯರು ಭಾಗಿಯಾಗಲಿದ್ದಾರೆ. ಆದ್ರೆ ಶಾಲಾ ವಾಹನಗಳಿಂದಲೇ ಟ್ರಾಫಿಕ್ ಜಾಮ್ ಆಗ್ತಾ ಇದೆ ಅನ್ನೋದು ಸರಿಯಲ್ಲ. ಶಾಲಾ ಸಮಯ ಬದಲಾವಣೆಗೆ ವಿರೋಧ ಇದೆ ಅಂತಾರೆ ಪೋಷಕ ಸಮನ್ವಯ ಸಮಿತಿಯ ಯೋಗಾನಂದ್. ರಾಜ್ಯಾದ್ಯಂತ ಬಹುತೇಕ ಶಾಲೆಗಳಲ್ಲಿ ಬೆಳಗ್ಗೆ 8.45 ರಿಂದ ಮಧ್ಯಾಹ್ನ 3.30 ರವರೆಗೆ ತರಗತಿಗಳು ನಡೆಯುತ್ತವೆ. ಇದರಲ್ಲಿ ಅರ್ಧತಾಸು ಇಳಿಕೆ ಮಾಡಿದರೆ ಹೇಗೆ ಎಂಬ ಚರ್ಚೆ ಕೂಡ ನಡೆದಿದೆ. ಆದ್ರೆ ಟ್ರಾಫಿಕ್ ‌ಕಡಿಮೆ‌ ಮಾಡುವ ನಿಟ್ಟಿನಲ್ಲಿ ಶಾಲಾ ಅವಧಿ ಬೇಗ ಮಾಡುವುದು ಸರಿಯಲ್ಲ, ಇದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತೆ ಎಂದು ಖಾಸಗಿ ಶಾಲಾ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಶಿಕ್ಷಣ ಇಲಾಖೆಗೆ ಸಲಹೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಇದ್ದಕ್ಕಿದ್ದಂತೆ ಲೈವ್ ಬಂದ ಧ್ರುವ ಸರ್ಜಾ! ಮಾರ್ಟಿನ್ ಟ್ರೈಲರ್ ರಿಲೀಸ್ ಬಗ್ಗೆ ಏನಂದ್ರು?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more