ಹಾಸನದಲ್ಲಿ ನಾಡಿಗೆ ಲಗ್ಗೆಯಿಟ್ಟ ಕಾಡಾನೆಗಳ ಕಾರ್ಯಾಚರಣೆ: 4ನೇ ದಿನ ಇನ್ನೊಂದು ಆನೆ ಸೆರೆ !

ಹಾಸನದಲ್ಲಿ ನಾಡಿಗೆ ಲಗ್ಗೆಯಿಟ್ಟ ಕಾಡಾನೆಗಳ ಕಾರ್ಯಾಚರಣೆ: 4ನೇ ದಿನ ಇನ್ನೊಂದು ಆನೆ ಸೆರೆ !

Published : Nov 30, 2023, 10:39 AM IST

ಹಾಸನ ಜಿಲ್ಲೆಯಲ್ಲಿ ಆಪರೇಷನ್ ಎಲಿಫೆಂಟ್ ಮುಂದುವರೆದಿದೆ. ನಾಲ್ಕನೇ ದಿನದ ಕಾರ್ಯಾಚರಣೆಯಲ್ಲಿ ಆಪರೇಷನ್ ಒಂಟಿ ಕೋರೆ ಸಕ್ಸಸ್ ಆಗಿದೆ. ಬರೋಬ್ಬರಿ ಆರು ಗಂಟೆಗಳ ಕಾರ್ಯಾಚರಣೆ ನಂತರ ಕಡೆಗೂ ಒಂಟಿ ಕೋರೆ ಆನೆ ಖೆಡ್ಡಾಕ್ಕೆ ಬೀಳಿಸಿತು ಅರಣ್ಯ ಇಲಾಖೆ.
 

ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಹಾವಳಿ ಜನರ ನಿದ್ದೆಗೆಡಿಸಿದೆ. ಅದರಲ್ಲೂ ಹಾಸನ(Hassan) ಜಿಲ್ಲೆಯ ಆಲೂರು, ಬೇಲೂರು, ಸಕಲೇಶಪುರ ಭಾಗದಲ್ಲಿ ಗಜಪಡೆ ಆತಂಕದಲ್ಲೇ ಜನ ಬದುಕುತ್ತಿದ್ದಾರೆ. ಕಾಡಾನೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಗಳು ಕೇಳಿ ಬಂದಿದ್ವು. ಇದರ ಬೆನ್ನಲ್ಲೇ ಸಾಕಾನೆಗಳೊಂದಿಗೆ ಕಾಡಾನೆ(Elephant) ಹಂಟಿಂಗ್ ಶುರುವಾಗಿತ್ತು.ಕಾರ್ಯಾಚರಣೆ ಶುರುವಾಗಿ ನಾಲ್ಕನೇ ದಿನಕ್ಕೆ ಮತ್ತೊಂದು ಆನೆ  ಸೆರೆ ಹಿಡಿಯಲಾಗಿದೆ. ಬೇಲೂರು ತಾಲೂಕಿನ ಬಿಕ್ಕೋಡು ಭಾಗದಲ್ಲಿ 6 ಸಾಕಾನೆಗಳ ಮೂಲಕ ಕಾಡಾನೆ ಸೆರೆ ಹಿಡಿಯಲಾಗಿದೆ. ಬೆಳಗ್ಗೆ 11 ಗಂಟೆಗೆ ಟ್ರೇಸ್ ಆಗಿದ್ದ ಒಂಟಿ ಕೋರೆ  ಸಲಗ, ಕಿಲೋ ಮೀಟರ್ ಗಟ್ಟಲೇ ಸುತ್ತಾಡಿಸಿತ್ತು. ಕೊನೆಗೂ ಅರವಳಿಕೆ ಚುಚ್ಚು ಮದ್ದು ನೀಡಿ ಆನೆ ಸೆರೆ ಹಿಡಿಯಲಾಯ್ತು. ಸಾಕಾನೆಗಳು ಹಾಗೂ ಜೆಸಿಬಿಗಳ ನೆರವಿನೊಂದಿಗೆ ಕಾಡಾನೆಗೆ ರೇಡಿಯೋ ಕಾಲರ್ ಅಳವಡಿಸಿ ಶಿಫ್ಟ್ ಮಾಡಲಾಯಿತು. ಕಾರ್ಯಾಚರಣೆ ವೇಳೆ ಸೆರೆ ಸಿಕ್ಕ ಆನೆಗೆ ಒಂದು ಕೋರೆಯೇ ಇಲ್ಲ. ಈ ಒಂಟಿ ಕೋರೆ ಸಲಗ ಬೇಲೂರು(Belur) ಭಾಗದ ಜನರಲ್ಲಿ ಆತಂಕ ಸೃಷ್ಟಿ ಮಾಡಿತ್ತು. 30 ಕಾಡಾನೆಗಳಿದ್ದ ದೊಡ್ದ ಗುಂಪನ್ನು ಒಂಟಿ ಕೋರೆ ಸಲಗ ಲೀಡ್ ಮಾಡುತ್ತಿತ್ತು. ಹೀಗಾಗಿ ಅರಣ್ಯ ಇಲಾಖೆ ಆಪರೇಷನ್ ಒಂಟಿ ಸಲಗ ಆರಂಭಿಸಿದ್ದರು.. ಕಾರ್ಯಾಚರಣೆ ಆರಂಭಿಸಿದ ನಾಲ್ಕನೇ ದಿನಕ್ಕೆ ಒಂಟಿ ಕೋರೆ ಸಲಗ ಸೆರೆ ಸಿಕ್ಕಿದ್ದು ಸ್ಥಳೀಯರಲ್ಲಿ ಕೊಂಚ ಸಮಧಾನ ತಂದಿದೆ.ಆನೆಗಳ ಉಪಟಳಕ್ಕೆ ಕಡಿವಾಣ ಹಾಲು ಆಪರೇಷನ್ ಎಲಿಫೆಂಟ್ ನಡೆಸಲಾಗ್ತಿದೆ. ಇದುವರೆಗೆ ಅರಣ್ಯ ಇಲಾಖೆ(Forest Department) ಕಾರ್ಯಾಚರಣೆ ನಡೆಸಿ 3 ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ, 2 ಕಾಡಾನೆಗಳನ್ನು ಸ್ಥಳಾಂತರ ಮಾಡಿದೆ.ಹೆಚ್ಚಿನ ಉಪಟಳ ನೀಡೋ ಕಾಡಾನೆಗಳ ಶಿಫ್ಟ್ ಮಾಡುತ್ತಿರುವ ಅರಣ್ಯ ಇಲಾಖೆ ನಿರ್ಧಾರ ಜನರ ಆತಂಕವನ್ನು ಕೊಂಚ ದೂರ ಮಾಡಿದೆ.

ಇದನ್ನೂ ವೀಕ್ಷಿಸಿ:  ರಕ್ತದಾನಿಗಳ ಕೊರತೆ, ಬರಿದಾಗುತ್ತಿವೆ ಬ್ಲಡ್ ಬ್ಯಾಂಕ್‌ಗಳು: ತುರ್ತು ಪರಿಸ್ಥಿತಿಯಲ್ಲಿ ಬ್ಲಡ್‌ಗಾಗಿ ರೋಗಿಗಳ ಪರದಾಟ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more