ರಾತ್ರಿ ಹೊತ್ತಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ: ವಕೀಲೆ ಕುಟುಂಬದ ವಿರುದ್ಧ ಒತ್ತುವರಿ ಆರೋಪ

ರಾತ್ರಿ ಹೊತ್ತಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ: ವಕೀಲೆ ಕುಟುಂಬದ ವಿರುದ್ಧ ಒತ್ತುವರಿ ಆರೋಪ

Published : Nov 03, 2023, 10:51 AM IST

ಒತ್ತುವರಿ ತೆರವು ಕಾರ್ಯಾಚರಣೆ ಸಾಮಾನ್ಯವಾಗಿ ಹಗಲು ಹೊತ್ತಲ್ಲಿ ನಡೆಯುತ್ತೆ. ಇಲ್ಲೀಗಲ್ಲಾಗಿ ಒತ್ತುವರಿ ಮಾಡ್ಕೊಂಡಿದ್ದನ್ನು ಲೀಗಲ್ಲಾಗಿ ತೆರವು ಮಾಡೋದ್ರಲ್ಲಿ ತಪ್ಪೇನಿಲ್ಲ. ಆದ್ರೆ, ಬೀದರ್ನಲ್ಲಿ ಒತ್ತುವರಿಯಾಗಿದೆ ಅನ್ನೋ ಜಾಗವನ್ನು ಅಧಿಕಾರಿಗಳು ರಾತ್ರಿ ಹೊತ್ತಲ್ಲಿ ತೆರವು ಮಾಡೋಕೆ ಹೊರಟಿದ್ರು. ಅಧಿಕಾರಿಗಳ ಈ ಮಿಡ್ನೈಟ್ ಕಾರ್ಯಾಚರಣೆ ಈಗ ದೊಡ್ಡ  ವಿವಾದಕ್ಕೆ ಕಾರಣವಾಗಿದೆ.

ರಾತ್ರಿ ಹೊತ್ತಲ್ಲಿ ಕಾರ್ಯಾಚರಣೆಗಿಳಿದ ಅಧಿಕಾರಿಗಳು. ತೆರವು ಕಾರ್ಯಾಚರಣೆಗೆ (eviction drive)ಕುಟುಂಬಸ್ಥರ ವಿರೋಧ.. ಕೂಗಾಟ.. ತಳ್ಳಾಟ..ಕೊನೆಗೆ ಕಾರ್ಯಾಚರಣೆಗೆ ಅಡ್ಡ ನಿಂತವರನ್ನೇ ಎತ್ತಾಕೊಂಡ್ ಹೋದ ಪೊಲೀಸರು. ಇದು ಬೀದರ್ ಜಿಲ್ಲೆಯ ಬಾಲ್ಕಿಯಲ್ಲಿ ನಡೆದ ಮಿಡ್ ನೈಟ್ ತೆರವು ಕಾರ್ಯಾಚರಣೆ ಹೈಡ್ರಾಮಾ. ಭಾಲ್ಕಿ ಪಟ್ಟಣದ ತಹಶೀಲ್ದಾರ್(Tehsildar) ಕಚೇರಿಯ ಹಿಂಬದಿಯಲ್ಲೇ ನಡೆದ ಘಟನೆ ಇದು. ಇಲ್ಲಿ ಸರ್ಕಾರಿ ಜಾಗ ಒತ್ತುವರಿ ಮಾಡಿದ್ದಾರೆ ಎಂದು ಅಧಿಕಾರಿಗಳು ರಾತ್ರಿ 12 ಗಂಟೆ ಹೊತ್ತಿಗೆ ತೆರವು ಕಾರ್ಯಾಚರಣೆಗೆ ಇಳಿದಿದ್ದರು.ಎಸಿ, ತಹಶಿಲ್ದಾರ್, ಸಿಪಿಐ ಸೇರಿ ಪೊಲೀಸ್ ಭದ್ರತೆಯಲ್ಲಿ ಒತ್ತುವರಿ ತೆರವಿಗೆ ಮುಂದಾಗಿದ್ದರು. ಆದ್ರೆ, ಈ ಜಾಗ ವಕೀಲೆ ಧನಲಕ್ಷ್ಮಿ ಬಳತೆ ಎಂಬುವರ ಕಬ್ಜಾದಲ್ಲಿ ಇದೆ. ಜಾಗದ ಮೇಲೆ ಕೋರ್ಟ್ನಿಂದ ತಡೆಯಾಜ್ಞೆ ಕೂಡ ಇದೆ. ಇಷ್ಟಿದ್ದರೂ ಪೊಲೀಸರು, ಅಧಿಕಾರಿಗಳು ರಾತ್ರೋರಾತ್ರಿ ತೆರವು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಆಗ ವಕೀಲೆ ಧನಲಕ್ಷ್ಮಿ ಹಾಗೂ ಅವರ ಪತಿ ವಿರೋಧ ವ್ಯಕ್ತಪಡಿಸಿದ್ದಾರೆ.. ಅಧಿಕಾರಿಗಳು ಮತ್ತು ವಕೀಲೆ ಕುಟುಂಬದ ಮಧ್ಯೆ ಮಾತಿಗೆ ಮಾತು, ವಾಗ್ವಾದ ನಡೆದು ಗಲಾಟೆ ಆಗಿದೆ.. ಕೊನೆಗೆ ಪೊಲೀಸರು ವಕೀಲೆ ಹಾಗೂ ಅವರ ಪತಿಯನ್ನ ಬಂಧಿಸಿ ಕೇಸ್ ದಾಖಲಿಸಿದ್ದಾರೆ.ವಕೀಲೆ ಕುಟುಂಬದ ಮೇಲೆ ಕೇಸ್ ದಾಖಲಿಸಿದ ಪೊಲೀಸರು(police) ಹಾಗೂ ಅಧಿಕಾರಿಗಳ ವಿರುದ್ಧ ವಕೀಲರ ಸಂಘ ಪ್ರತಿಭಟನೆಗೆ ಇಳಿದಿದೆ. ಭಾಲ್ಕಿ, ಚಿಂಚೋಳಿ, ಬೀದರ್ನಲ್ಲಿ ಪ್ರತಿಭಟನೆ ನಡೆಸಿದ ವಕೀಲರ ಸಂಘ, ಒತ್ತುವರಿ ಮಾಡಿಕೊಂಡಿದ್ದರೆ ರಾತ್ರಿ ಹೊತ್ತಲ್ಲಿ ಯಾಕೆ ತೆರವು ಕಾರ್ಯಾಚರಣೆ ಮಾಡ್ಬೇಕಿತ್ತು. ಹತ್ತಾರುಪೊಲೀಸರು ವಕೀಲೆ ಮೇಲೆ ದೌರ್ಜನ್ಯ ಎಸಗಿ ಬಂಧಿಸಿದ್ದಾರೆ, 308 ಕೇಸ್ ದಾಖಲಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲ ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ 24 ಗಂಟೆಯಲ್ಲಿ ಕ್ರಮ ಜರುಗಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡೋದಾಗಿ ಎಚ್ಚರಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಕೈಕೊಟ್ಟ ಮಳೆ..ಗೋಶಾಲೆಗಳಿಗೂ ಬರ ಸಂಕಷ್ಟ : ಗೋವುಗಳಿಗೆ ಮೇವಿಲ್ಲದೇ ಗೋಪಾಲಕರ ಪರದಾಟ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more